Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ಡಾ.ದಾಮೋದರ ನಾಯ್ಕ ವಿಶ್ವ...

ಭಟ್ಕಳ| ಡಾ.ದಾಮೋದರ ನಾಯ್ಕ ವಿಶ್ವ ಜಲವಿದ್ಯುತ್‌ ಸಮ್ಮೇಳನದಲ್ಲಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ13 July 2025 10:19 PM IST
share
ಭಟ್ಕಳ| ಡಾ.ದಾಮೋದರ ನಾಯ್ಕ ವಿಶ್ವ ಜಲವಿದ್ಯುತ್‌ ಸಮ್ಮೇಳನದಲ್ಲಿ ಭಾಗಿ

ಭಟ್ಕಳ: ಆಫ್ರಿಕಾದ ಘಾನಾದ ರಾಜಧಾನಿ ಅಕ್ರಾದಲ್ಲಿ ಜುಲೈ 14ರಿಂದ 19ರವರೆಗೆ ನಡೆಯಲಿರುವ ‘ವಿಶ್ವ ಜಲವಿದ್ಯುತ್‌ ಸಮ್ಮೇಳನ (AFRICA 2025)’ದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ತಂಡದಲ್ಲಿ ಭಟ್ಕಳ ಮೂಲದ ಕನ್ನಡಿಗ, ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಡಾ. ಎ.ಟಿ. ದಾಮೋದರ ನಾಯ್ಕ ಭಾಗವಹಿಸಲಿದ್ದಾರೆ.

ಅಂತರಾಷ್ಟ್ರೀಯ ಬೃಹತ್‌ ಆಣೆಕಟ್ಟುಗಳ ಜಲವಿದ್ಯುತ್‌ ಸಮಿತಿಯ (ICOLD) ಭಾರತದ ಶಾಶ್ವತ ಪ್ರತಿನಿಧಿ ಸದಸ್ಯರಾಗಿರುವ ಡಾ. ನಾಯ್ಕ, ಪ್ರಸ್ತುತ ಅರುಣಾಚಲ ಪ್ರದೇಶ ರಾಜ್ಯ ಸರ್ಕಾರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಮ್ಮೇಳನವು ಜುಲೈ 14ರಿಂದ 16ರವರೆಗೆ ಅಕ್ರಾದ ಲಬಾಡಿ ಬೀಚ್‌ ರೆಸಾರ್ಟ್‌ನಲ್ಲಿ ನಡೆಯಲಿದೆ. 47 ರಾಷ್ಟ್ರಗಳಿಂದ 300ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ, ಡಾ. ಎ.ಟಿ. ದಾಮೋದರ ನಾಯ್ಕ ನೇತೃತ್ವದ ಭಾರತೀಯ ತಂಡವು ಭಾರತದ ಬೃಹತ್‌ ಆಣೆಕಟ್ಟು ಜಲವಿದ್ಯುತ್‌ ಸ್ಥಾವರಗಳ ಆಧುನಿಕ ತಂತ್ರಜ್ಞಾನದ ಯಶಸ್ಸಿನ ಕಥೆಯನ್ನು ವಿಶ್ವ ಮಟ್ಟದಲ್ಲಿ ಇತರ ಸದಸ್ಯ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳಲಿದೆ. ಭಾರತದ ಜಲವಿದ್ಯುತ್‌ ಯೋಜನೆಗಳು, ವಿಶೇಷವಾಗಿ ಆಧುನಿಕ ಹೈಬ್ರಿಡ್‌ ಯೋಜನೆಗಳಾದ ಸೌರ-ಜಲವಿದ್ಯುತ್‌ ಸಂಯೋಜನೆ, ಗ್ರಾಮೀಣ ವಿದ್ಯುದೀಕರಣ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ತೋರಿದ ಸಾಧನೆಗಳನ್ನು ಈ ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾಗುವುದು.

ಡಾ. ಎ.ಟಿ. ದಾಮೋದರ ನಾಯ್ಕ, ತಮ್ಮ ತಾಂತ್ರಿಕ ಮತ್ತು ಪರಿಸರ ಸಂರಕ್ಷಣೆಯ ಕ್ಷೇತ್ರದ ವ್ಯಾಪಕ ಅನುಭವದಿಂದ, ಈ ಸಮ್ಮೇಳನದಲ್ಲಿ ಭಾರತದ ಜಲವಿದ್ಯುತ್‌ ಯೋಜನೆಗಳ ಸುಸ್ಥಿರತೆ ಮತ್ತು ತಾಂತ್ರಿಕ ಆವಿಷ್ಕಾರಗಳ ಕುರಿತು ಪ್ರಮುಖ ಚರ್ಚೆಗಳನ್ನು ಮುನ್ನಡೆಸಲಿದ್ದಾರೆ. ಅವರ ಭಾಗವಹಿಸುವಿಕೆಯು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಗಿದ್ದು, ಭಾರತದ ಜಲವಿದ್ಯುತ್‌ ಕ್ಷೇತ್ರದ ಗಮನಾರ್ಹ ಸಾಧನೆಗಳನ್ನು ವಿಶ್ವದಾದ್ಯಂತ ತಿಳಿಸುವ ಅವಕಾಶವನ್ನು ಒದಗಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X