Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದ 40ಕ್ಕೂ ಅಧಿಕ ಭಾರತೀಯರು...

ಭಟ್ಕಳದ 40ಕ್ಕೂ ಅಧಿಕ ಭಾರತೀಯರು ಇಸ್ರೇಲ್‌ನಲ್ಲಿ ಸುರಕ್ಷಿತ: ವರದಿ

ವಾರ್ತಾಭಾರತಿವಾರ್ತಾಭಾರತಿ10 Oct 2023 7:34 PM IST
share
ಭಟ್ಕಳದ 40ಕ್ಕೂ ಅಧಿಕ ಭಾರತೀಯರು ಇಸ್ರೇಲ್‌ನಲ್ಲಿ ಸುರಕ್ಷಿತ: ವರದಿ

ಭಟ್ಕಳ: ಇಸ್ರೇಲ್‌ನಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಟ್ಕಳದ 40ಕ್ಕೂ ಅಧಿಕ ಭಾರತೀಯರು ಅಪಾಯಕ್ಕೆ ಸಿಲುಕಿ ದ್ದರು. ಆದರೆ ಭಾರತೀಯ ರಾಯಭಾರಿ ಕಚೇರಿಯ ಸಮಯೋಚಿತ ಕ್ರಮದಿಂದಾಗಿ ಅವರೆಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

ಇಸ್ರೇಲ್‌ನಲ್ಲಿ ನೆಲೆಸಿರುವ ಭಟ್ಕಳದ ಮುಂಡಳ್ಳಿಯ ಭಾಗದ 12 ಮಂದಿ ಮತ್ತು ಮುರುಡೇಶ್ವರ ಬಳಿಯ 29 ಮಂದಿ ಈವರೆಗೆ ಭಾರತೀಯ ರಾಯಭಾರಿ ಕಚೇರಿಯಿಂದ ಸಂಪರ್ಕಕ್ಕೆ ಬಂದಿದ್ದಾರೆ.

"ಘಟನೆಯ ನಡೆದ ದಿನದಂದು ನಾವು ಜೀವ ಭಯದಲ್ಲಿಯೇ ಬದುಕಿದ್ದೇವೆ. ಘಟನೆ ನಡೆದ ಜಾಗದ ಸಮೀಪದಲ್ಲಿಯೇ ನಾವು ಕೆಲಸಕ್ಕಾಗಿ ನೆಲೆಸಿದ್ದ ಪ್ರದೇಶವಿದ್ದು ಯಾವ ಸಂದರ್ಭದಲ್ಲಿ ಪರಿಸ್ಥಿತಿ ಏನಾಗಲಿದೆ ಎಂಬ ಭಯ ನಮ್ಮಲ್ಲಿದೆ. ಆದರೆ ಭಾರತೀಯ ರಾಯಭಾರಿ ಕಚೇರಿಯಿಂದ ಭಾರತೀಯರನ್ನು ಸಂಪರ್ಕಿಸುವ ಕಾರ್ಯ ಆರಂಭವಾಗಿದೆ ಎಂಬ ಮಾಹಿತಿಯ ಮೇಲೆ ನಮ್ಮಿಬ್ಬರು ಸಹ ಕಚೇರಿಯ ಸಿಬ್ಬಂದಿಗಳು ಸಂಪರ್ಕಿಸಿ ನಮ್ಮ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆದುಕೊಂಡರು," ಎಂದು ಇಸ್ರೇಲ್‌ನಲ್ಲಿ ನೆಲೆಸಿರುವ ಸುನೀಲ ಎಫ್. ಗೋಮ್ಸ್ ಮತ್ತು ಡಾಲ್ಪಿ ಗೋಮ್ಸ್ ಭಟ್ಕಳದಲ್ಲಿರುವ ತಮ್ಮ ಕುಟುಂಬದೊಂದಿಗೆ ವಿಡಿಯೋ ಕರೆ ಮಾಢಿ ಮಾಹಿತಿ ಹಂಚಿಕೊಂಡಿದ್ದಾರೆ.

"ಅನಾವಶ್ಯಕವಾಗಿ ಯಾರು ಸಹ ಓಡಾಟ ಮಾಡಬಾರದು ಎಂಬ ಕಠಿಣ ಆದೇಶವಿದ್ದು, ಅವಶ್ಯಕತೆಯಿದ್ದಲ್ಲಿ ಮಾತ್ರ ಓಡಾಡಲು ಅನುಮತಿ ನೀಡಿದ್ದಾರೆ. ಕೆಲವೊಂದು ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿಡಲಾಗಿದ್ದು, ಆಹಾರ ಹಾಗೂ ಇನ್ನಿತರ ವಸ್ತುಗಳ ಖರೀದಿಗೆ ತೆರಳಬಹುದಾಗಿದೆ. ಸಮಸ್ಯೆಯಿದ್ದಲ್ಲಿ ರಾಯಭಾರಿ ಕಛೇರಿಗೆ ಮಾಹಿತಿ ತಿಳಿಸಿದ್ದಲ್ಲಿ ನಿಮ್ಮನ್ನು ಸಂಪರ್ಕಿಸಲಿದ್ದೇವೆ. ಸೈರನ್ ಮೂಲಕ ಜನರು ಸುರಕ್ಷಿತ ಪ್ರದೇಶದಲ್ಲಿ ಇರುವಂತೆ ಮುಂಜಾಗೃತೆಗಾಗಿ ವ್ಯವಸ್ಥೆ ಮಾಡಲಾಗಿದ್ದು, ಜನರು ಸರಕಾರದ ಆದೇಶದಂತೆ ಪಾಲನೆ ಮಾಡಬೇಕು," ಎಂದು ಅವರು ಹೇಳಿದರು.

"ಇಸ್ರೇಲನಲ್ಲಿರುವ ನಮ್ಮ ರಕ್ಷಣೆಗೆ ಸುರಕ್ಷತೆಗಾಗಿ ಭಾರತೀಯ ರಾಯಭಾರಿ ಕಚೇರಿಯು ನಿರಂತರ ಸಂಪರ್ಕದಲ್ಲಿದ್ದು ಅವರಿಗೆ ನಾವೆಲ್ಲರು ಚಿರಋಣಿಯಾಗಿದ್ದೇವೆ. ಸದ್ಯ ಕನ್ನಡಿಗರೆಲ್ಲರು ಒಂದು ವಾಟ್ಸಾಪ್ ಗ್ರೂಪ ಮಾಡಿದ್ದು ನಾವೆಲ್ಲರು ನಿರಂತರ ಸಂಪರ್ಕದಲ್ಲಿದ್ದು ಸುರಕ್ಷಿತರಾಗಿದ್ದೇವೆ," ಎಂದು ಅವರು ಹೇಳಿದರು.

ಭಟ್ಕಳದ ಕುಟುಂಬಗಳಿಗೆ ನೆಮ್ಮದಿ ಇಸ್ರೇಲ್‌ನಲ್ಲಿರುವ ತಮ್ಮ ಕುಟುಂಬಗಳ ಬಗ್ಗೆ ಭಯದಲ್ಲಿದ್ದ ಭಟ್ಕಳದ ಕುಟುಂಬಗಳಿಗೆ ಈ ಸುದ್ದಿ ನೆಮ್ಮದಿಯನ್ನು ನೀಡಿದೆ. "ಯುದ್ಧದ ಬಗ್ಗೆ ತಿಳಿದಾಗ ನಮಗೆ ತುಂಬಾ ಚಿಂತೆಯಾಗಿತ್ತು. ಆದರೆ ಭಾರತೀಯ ರಾಯಭಾರಿ ಕಚೇರಿಯವರು ನಮ್ಮ ಕುಟುಂಬದವರನ್ನು ಸಂಪರ್ಕಿಸಿ ಸುರಕ್ಷತೆ ಬಗ್ಗೆ ಖಚಿತಪಡಿಸಿಕೊಂಡರು. ಅವರ ಕಾರ್ಯಕ್ಕೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ" ಎಂದು ಭಟ್ಕಳದ ಕೆಲವು ಕುಟುಂಬದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X