Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳವನ್ನು ಜಗತ್ತಿಗೆ ಪರಿಚಯಿಸಿದ್ದು...

ಭಟ್ಕಳವನ್ನು ಜಗತ್ತಿಗೆ ಪರಿಚಯಿಸಿದ್ದು ಸೈಯ್ಯದ್ ಖಲೀಲ್: ಸಚಿವ ಮಂಕಾಳ್ ವೈದ್ಯ

ವಾರ್ತಾಭಾರತಿವಾರ್ತಾಭಾರತಿ24 July 2025 10:31 PM IST
share
ಭಟ್ಕಳವನ್ನು ಜಗತ್ತಿಗೆ ಪರಿಚಯಿಸಿದ್ದು ಸೈಯ್ಯದ್ ಖಲೀಲ್: ಸಚಿವ ಮಂಕಾಳ್ ವೈದ್ಯ

ಭಟ್ಕಳ: “ಐವತ್ತು ವರ್ಷಗಳ ಹಿಂದೆಯೇ ಜಿಲ್ಲೆಯಲ್ಲಿ ಇಂಜಿನಿಯರಿಂಗ್ ಶಿಕ್ಷಣವನ್ನು ಪರಿಚಯಿಸಿ ಭಟ್ಕಳವನ್ನು ಜಗತ್ತಿಗೆ ಕೊಂಡೊಯ್ದ ವ್ಯಕ್ತಿತ್ವ ದಿವಂಗತ ಎಸ್.ಎಂ. ಸೈಯ್ಯದ್ ಖಲೀಲ್ ಸಾಹೇಬರದ್ದು,” ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ಹೇಳಿದರು.

ಗುರುವಾರ ಸಂಜೆ ಇಲ್ಲಿನ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲಾ ಮೈದಾನದಲ್ಲಿ ರಾಬಿತಾ ಸೊಸೈಟಿಯಿಂದ ಆಯೋಜಿತವಾದ ‘ರಾಬಿತಾ ಶೈಕ್ಷಣಿಕ ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ‘ಪ್ರೈಡ್ ಆಫ್ ಕಮ್ಯುನಿಟಿ-ಡಾ. ಎಸ್.ಎಂ. ಸೈಯ್ಯದ್ ಖಲೀಲುರ್ರಹ್ಮಾನ್’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“ರಾಬಿತಾ ಸಂಸ್ಥೆ ಶಿಕ್ಷಣ, ಆರೋಗ್ಯ, ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದೆ. ದಿವಂಗತ ಎಸ್.ಎಂ. ಯಾಹ್ಯಾ ಅವರ ಕನಸಾದ ಭಟ್ಕಳದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯ ಕಾಲ ಈಗ ಕೂಡಿಬಂದಿದೆ. ಇದಕ್ಕೆ ನಾನು ಎಲ್ಲ ರೀತಿಯ ಸಹಕಾರ ನೀಡುವೆ,” ಎಂದು ಸಚಿವರು ಭರವಸೆ ನೀಡಿದರು.ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವುದನ್ನು ಒಪ್ಪಿಕೊಂಡ ಅವರು, “ಕಳೆದ ಎರಡು ವರ್ಷಗಳಲ್ಲಿ ಯೋಜನೆಗಳ ಪ್ರಗತಿ ಕಡಿಮೆಯಾಗಿತ್ತು. ಆದರೆ, ಈಗ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಭಟ್ಕಳದಲ್ಲಿ ಯೋಜನೆಗಳು ಚುರುಕುಗೊಳ್ಳಲಿವೆ,” ಎಂದರು.

ಸಮಾರಂಭದಲ್ಲಿ ರಾಬಿತಾ ಸೊಸೈಟಿಯ ‘ಬೆಸ್ಟ್ ಸ್ಕೂಲ್ ಆಫ್ ಭಟ್ಕಳ’ ರೋಲಿಂಗ್ ಶೀಲ್ಡ್‌ನ್ನು ಅಲಿ ಪಬ್ಲಿಕ್ ಗರ್ಲ್ಸ್ ಕಾಲೇಜು ಪಡೆದುಕೊಂಡಿತು. ಎಸ್.ಎಂ. ಸೈಯ್ಯದ್ ಖಲೀಲ್ ಸ್ಮರಣಾರ್ಥ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ನೌನಿಹಾಲ್ ಸೆಂಟ್ರಲ್ ಸ್ಕೂಲ್‌ನ ಶಿಕ್ಷಕಿ ಫಾತಿಮಾ ವೇದಾ ಸಿದ್ದೀಖಿ ಪಡೆದರು.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30 ಮತ್ತು ಸಂಜೆ 4:45 ರಿಂದ ರಾತ್ರಿ 7 ರವರೆಗೆ ಎರಡು ಸೆಷನ್‌ಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಟ್ಕಳ ಮತ್ತು ಸುತ್ತಮುತ್ತಲ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಸ್ಮರಣಿಕೆ, ಮತ್ತು ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.

ರಾಬಿತಾ ಸೊಸೈಟಿ ಅಧ್ಯಕ್ಷ ಉಮರ್ ಫಾರೂಖ್ ಮುಸ್ಬಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅತಿಕುರ್ರಹ್ಮಾನ್ ಮುನೀರಿ ಸಂಸ್ಥೆಯ ವರದಿ ಮಂಡಿಸಿದರು. ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯದ ಧರ್ಮಶಾಸ್ತ್ರ ವಿಭಾಗದ ಮಾಜಿ ಡೀನ್ ಪ್ರೊ. ಡಾ. ಎಂ. ಸೌದ್ ಆಲಂ ಕಾಸ್ಮಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವೇದಿಕೆಯಲ್ಲಿ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಯೂನೂಸ್ ಕಾಝಿಯಾ, ಇಂಡಿಯನ್ ನವಾಯತ್ ಫೋರಂ ಅಧ್ಯಕ್ಷ ಆಫ್ತಾಬ್ ಹುಸೇನ್ ಕೋಲಾ, ಭಟ್ಕಳ ಪುರಸಭೆ ಅಧ್ಯಕ್ಷ ಅಲ್ತಾಫ್ ಖರೂರಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X