Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಟಿಪ್ಪು ಸುಲ್ತಾನ್ ಇತಿಹಾಸ ಸ್ಮರಿಸುವ...

ಟಿಪ್ಪು ಸುಲ್ತಾನ್ ಇತಿಹಾಸ ಸ್ಮರಿಸುವ ದೇವನಹಳ್ಳಿ ಕೋಟೆ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.30 Sept 2024 12:00 PM IST
share
ಟಿಪ್ಪು ಸುಲ್ತಾನ್ ಇತಿಹಾಸ ಸ್ಮರಿಸುವ ದೇವನಹಳ್ಳಿ ಕೋಟೆ

ಹೊಸಕೋಟೆ: ದೇವನಹಳ್ಳಿ ಕೋಟೆಯು ಬೆಂಗಳೂರಿಗರಿಗೆ ಅದ್ಭುತವಾದ ವಾರಾಂತ್ಯ ತಾಣವಾಗಿದೆ. ಕೋಟೆಯನ್ನು ಅನ್ವೇಷಿಸಲು ಇಷ್ಟ ಪಡುವವರಿಗೆ ಇದು ಸೂಕ್ತವಾದ ತಾಣ ಎಂದೇ ಹೇಳಬಹುದು. ಇದು ಬೆಂಗಳೂರಿನಿಂದ ಕೇವಲ 35 ಕಿ.ಮೀ ದೂರದಲ್ಲಿದೆ.

ಒಂದು ಕಾಲದಲ್ಲಿ ದೇವನದೊಡ್ಡಿ ಎಂದು ಕರೆಯಲಾಗುತ್ತಿದ್ದ, ದೇವನಹಳ್ಳಿಯು ಐತಿಹಾಸಿಕವಾಗಿ ಪ್ರಾಮುಖ್ಯತೆ ಪಡೆದಿರುವ ಕೋಟೆಯನ್ನು ಹೊಂದಿದೆ. ಈ ಕೋಟೆಯಲ್ಲಿಯೇ ಟಿಪ್ಪುಸುಲ್ತಾನ ಹುಟ್ಟಿ ಬೆಳೆದಿದ್ದು ಎಂದು ಇತಿಹಾಸವು ತಿಳಿಸುತ್ತದೆ.

ನಿಮ್ಮ ವಾರಾಂತ್ಯಕ್ಕೆ ಭೇಟಿ ನೀಡಲು ದೇವನಹಳ್ಳಿಯಲ್ಲಿನ ಕೋಟೆ ಉತ್ತಮ ಎಂದೇ ಹೇಳಬಹುದು.

ಭವ್ಯವಾದ ಕೋಟೆ ನಿರ್ಮಿಸಿದವರಾರು?: ದೇವನಹಳ್ಳಿಯಲ್ಲಿರುವ ಕೋಟೆಯನ್ನು ಕಂಚಿಯಿಂದ ವಲಸೆ ಬಂದ ಆವತಿ ರಾಜವಂಶದ ಮಲ್ಲಭೈರೇಗೌಡರು 1501 ರಲ್ಲಿ ನಿರ್ಮಿಸಿದರು ಎಂದು ಇತಿಹಾಸವು ತಿಳಿಸುತ್ತದೆ. ಈ ಸುಂದರವಾದ ಕೋಟೆಯನ್ನು ಕಲ್ಲು, ಇಟ್ಟಿಗೆ, ಗಾರೆಯಿಂದ ನಿರ್ಮಿಸಲಾಗಿದ್ದು, 13 ವೃತ್ತಾಕಾರದ ಕೊತ್ತಲಗಳಿವೆ.

ಇಲ್ಲಿ ಚೌಕಾಕಾರದ ಬತ್ತೇರಿಗಳಿವೆ. ಪ್ರತಿ ಹೊರಭಿತ್ತಿಯ ಒಳಭಾಗದಲ್ಲಿ ಚಿಕ್ಕ ಚಿಕ್ಕ ರಂಧ್ರಗಳು ಇವೆ. ಈ ರಂಧ್ರಗಳು ದೂರದರ್ಶಕದಂತೆ ಕೆಲಸ ಮಾಡುತ್ತಿತ್ತು. ಈ ಕಿಂಡಿಯಿಂದ ಕೋಟೆಯ ಹೊರಗಿನ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳಬಹುದು. ಶತ್ರು ಪಡೆಗಳಿಂದ ರಕ್ಷಿಸಿಕೊಳ್ಳಲು ಇದನ್ನು ನಿರ್ಮಿಸಲಾಗಿದೆ.

ಕೋಟೆಯ ಬಾಗಿಲು: ಕೋಟೆಯು ಎರಡು ಬಾಗಿಲುಗಳನ್ನು ಹೊಂದಿದ್ದು, ಕೋಟೆಯ ಪೂರ್ವದ ಬಾಗಿಲು ಬಿದ್ದು ಹೋಗಿದೆಯಾದರೂ ಪಶ್ಚಿಮದ ಬಾಗಿಲು ಸುಭದ್ರವಾಗಿದೆ. ಶತ್ರುಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಬೇಕಾದ ಸಕಲ ವ್ಯವಸ್ಥೆಗಳು ಈ ಕೋಟೆಯಲ್ಲಿ ಮಾಡಲಾಗಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ತಪ್ಪಿಸಿಕೊಳ್ಳಲು ತುರ್ತು ಮಾರ್ಗವು ಕೂಡ ಇಲ್ಲಿದೆ.

ದೇವಾಲಯಗಳು: ಇಲ್ಲಿನ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಮುಖ್ಯವಾದ ನಿವಾಸವು ಪ್ರಮುಖ ಆಕರ್ಷಣೆ. ಕೋಟೆಯ ಆವರಣದಲ್ಲಿ ವೇಣುಗೋಪಾಲ ಸ್ವಾಮಿ ದೇವಾಲಯ, ಸಿದ್ದೇಶ್ವರ ಸ್ವಾಮಿ ದೇವಾಲಯ, ಚಂದ್ರಮೌಳೇಶ್ವರ ದೇವಾಲಯ ಇವೆ. ಇಲ್ಲಿನ ವೇಣುಗೋಪಾಲಸ್ವಾಮಿ ದೇವಾಲಯದ ವಾಸ್ತುಶಿಲ್ಪ ಶೈಲಿಯು ಅತ್ಯಂತ ಹಳೆಯದಾದ ಆಕರ್ಷಕ ವಿಗ್ರಹಗಳನ್ನು ಹೊಂದಿವೆೆ.

ಏನೇನಿದೆ ಕೋಟೆಯಲ್ಲಿ?

ಕೋಟೆಯ ಮೇಲ್ಭಾಗದಲ್ಲಿ ಕಾವಲು ಗೋಪುರಗಳಿವೆ. ಅಲ್ಲಿ ಕಾವಲುಗಾರರ ನಿವಾಸಗಳು ಕೂಡ ಇವೆ. ಇಂದು ಅವು ಶೌಚಗೃಹವಾಗಿರುವುದು ದುರ್ದೈವ. ದಂತಕಥೆಯ ಪ್ರಕಾರ, ಕೋಟೆಯ ಸುತ್ತ ರಕ್ಷಣಾರ್ಥ ಕಂದಕವನ್ನು ತೋಡಿ ಅದರಲ್ಲಿ ನೀರು ತುಂಬಿಸಿ, ಮೊಸಳೆಗಳನ್ನು ಬಿಟ್ಟಿದ್ದರು ಎಂದು ಹೇಳಲಾಗುತ್ತದೆ. ಇಲ್ಲಿ ಕಂದಕಗಳು ಇತ್ತು ಎಂಬುದಕ್ಕೆ ಕುರುಹುಗಳು ಕೂಡ ಇವೆ.

ಟಿಪ್ಪು ಜನ್ಮಸ್ಥಳ

ಇತ್ತೀಚೆಗೆ ಪಾಳುಬಿದ್ದಿರುವ ಈ ಕೋಟೆಯು ಒಂದು ಕಾಲದಲ್ಲಿ ಮಹಾನ್ ಯೋಧ ಟಿಪ್ಪುಸುಲ್ತಾನನ ಜನ್ಮ ಸ್ಥಳ ಮತ್ತು ನಿವಾಸವಾಗಿತ್ತು. ಈ ಬೃಹತ್ ಕೋಟೆಯನ್ನು ಸುಮಾರು 20 ಎಕರೆಗಷ್ಟು ವಿಸ್ತೀರ್ಣವಾದ ಪ್ರದೇಶದಲ್ಲಿ ನಿರ್ಮಿಸಲಾಗಿದೆ. 1501 ರಲ್ಲಿ ಮಲ್ಲೈಬೈರೆ ಗೌಡರಿಂದ ನಿರ್ಮಿಸಲಾಯಿತು. 1749 ರಲ್ಲಿ ಮೈಸೂರು ನಂಜರಾಜಯ್ಯನ ದಳವಾಯಿ ಇದನ್ನು ಆಕ್ರಮಿಸಿಕೊಂಡರು. ಅಂತಿಮವಾಗಿ ಹೈದರ್ ಅಲಿ ವಶಪಡಿಸಿಕೊಂಡರು.

ತಲುಪುವುದು ಹೇಗೆ?

ಈ ಐತಿಹಾಸಿಕ ಕೋಟೆಗೆ ಭೇಟಿ ನೀಡುವುದು ಸುಲಭ. ಇದು ಬೆಂಗಳೂರು ನಗರದ ಉತ್ತರಕ್ಕೆ 35 ಕಿ.ಮೀ ದೂರದಲ್ಲಿದ್ದು, ಟ್ಯಾಕ್ಸಿ ಕ್ಯಾಬ್‌ಗಳನ್ನು ಬಾಡಿಗೆಗೆ ತೆಗೆದುಕೊಳ್ಳುವ ಮೂಲಕ ಇಲ್ಲಿಗೆ ತಲುಪಬಹುದು. ಬೆಂಗಳೂರಿನಿಂದ ಸರಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರವಿದೆ.

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X