Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕೂಡ್ಲಿಗಿಯಲ್ಲಿ 16.50 ಕೋಟಿ ರೂ. ವೆಚ್ಚದ...

ಕೂಡ್ಲಿಗಿಯಲ್ಲಿ 16.50 ಕೋಟಿ ರೂ. ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆಗೆ ಜೂ.30ರಂದು ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ29 Jun 2026 7:29 PM IST
share
ಕೂಡ್ಲಿಗಿಯಲ್ಲಿ 16.50 ಕೋಟಿ ರೂ. ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆಗೆ ಜೂ.30ರಂದು ಶಂಕುಸ್ಥಾಪನೆ

ಕೂಡ್ಲಿಗಿ/ವಿಜಯನಗರ : ತಾಲೂಕಿನ ಆರೋಗ್ಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ನಾಳೆ ಶಂಕುಸ್ಥಾಪನೆ ನೆರವೇರಲಿದೆ. 16.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷೆಯ ಯೋಜನೆ, ಈ ಭಾಗದ ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆ ತರಲಿದೆ.

ಪ್ರಸ್ತುತ ಕೂಡ್ಲಿಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯು 100 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಇದೀಗ ಅದನ್ನು 150 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುತ್ತಿದೆ. ಹೆಚ್ಚುವರಿ 50 ಹಾಸಿಗೆಗಳನ್ನು ವಿಶೇಷವಾಗಿ ತಾಯಿ ಮತ್ತು ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗುತ್ತಿದೆ.

ಈ ಆಸ್ಪತ್ರೆಯ ನಿರ್ಮಾಣದಿಂದ ಕೂಡ್ಲಿಗಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದುವರೆಗೆ ಸುಸಜ್ಜಿತ ಹೆರಿಗೆ ಆಸ್ಪತ್ರೆಯ ಕೊರತೆಯಿಂದಾಗಿ ಬಡ ರೋಗಿಗಳು ತುರ್ತು ಚಿಕಿತ್ಸೆಗೆ ಹೊಸಪೇಟೆ, ಚಿತ್ರದುರ್ಗ ಹಾಗೂ ಕೊಪ್ಪಳದಂತಹ ದೂರದ ನಗರಗಳಿಗೆ ತೆರಳಬೇಕಾಗುತ್ತಿತ್ತು.

ಸ್ವತಃ ವೈದ್ಯರಾಗಿರುವ ಶಾಸಕ ಡಾ. ಶ್ರೀನಿವಾಸ್ ಅವರು, ಜನರ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ಬಡ ಕುಟುಂಬಗಳ ಸಮಸ್ಯೆಯನ್ನು ಅರಿತು ಈ ಯೋಜನೆಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಆರೋಗ್ಯ ಕೇಂದ್ರದ ಇತಿಹಾಸವನ್ನು ಗಮನಿಸಿದರೆ, 1994ರಲ್ಲಿ ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಅವಧಿಯಲ್ಲಿ ಗಫೂರ್ ಸಾಬ್ ಅವರು ದಾನವಾಗಿ ನೀಡಿದ ಜಾಗದಲ್ಲಿ 30 ಹಾಸಿಗೆಗಳ ಆಸ್ಪತ್ರೆಯಾಗಿ ಆರಂಭವಾಗಿತ್ತು. ನಂತರ ವಿವಿಧ ಹಂತಗಳಲ್ಲಿ ಅಭಿವೃದ್ಧಿಗೊಂಡು 100 ಹಾಸಿಗೆಗಳ ಆಸ್ಪತ್ರೆಗೆ ಮೇಲ್ದರ್ಜೆಗೇರಿತ್ತು. ಇದೀಗ 150 ಹಾಸಿಗೆಗಳಿಗೆ ವಿಸ್ತರಣೆಗೊಳ್ಳುತ್ತಿರುವುದರ ಜೊತೆಗೆ ತಾಯಿ-ಮಕ್ಕಳ ಆಸ್ಪತ್ರೆಯಾಗಿ ರೂಪುಗೊಳ್ಳುತ್ತಿರುವುದು ಈ ಭಾಗದ ಜನರ ಬಹುದಿನಗಳ ಕನಸಿಗೆ ಸಾಕಾರವಾಗಿದೆ.

ಆಸ್ಪತ್ರೆ ನಿರ್ಮಾಣಗೊಳ್ಳಲಿರುವ ಸ್ಥಳವನ್ನು ಶಾಸಕ ಡಾ. ಶ್ರೀನಿವಾಸ್ ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ದಂಡಾಧಿಕಾರಿ ಕೆ.ವಿ. ನೇತ್ರಾವತಿ, ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶಿವಪ್ಪ ನಾಯಕ, ಗೌಡರ ಮಲ್ಲಿಕಾರ್ಜುನ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Kudligi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X