Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ...

ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ 'ಹಂಪಿ ಉತ್ಸವ' : ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ15 Jan 2026 6:47 PM IST
share
ಫೆ.13ರಿಂದ ಮೂರು ದಿನಗಳ ಕಾಲ ಅದ್ಧೂರಿ ಹಂಪಿ ಉತ್ಸವ : ಸಚಿವ ಝಮೀರ್ ಅಹ್ಮದ್

ವಿಜಯನಗರ (ಹೊಸಪೇಟೆ 5: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆ.13, 14 ಮತ್ತು 15 ರಂದು ಅತ್ಯಂತ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ವೇದಿಕೆ ಸೇರಿದಂತೆ ಒಟ್ಟು ಐದು ವೇದಿಕೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ವಸತಿ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಗುರುವಾರ ಹಂಪಿಗೆ ಭೇಟಿ ನೀಡಿ, ಉತ್ಸವ ನಡೆಯಲಿರುವ ಮುಖ್ಯ ವೇದಿಕೆ ಹಾಗೂ ವಾಹನ ನಿಲುಗಡೆ ಸ್ಥಳಗಳನ್ನು ಪರಿಶೀಲಿಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಫೆ.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈ ಬಾರಿ ಉತ್ಸವವನ್ನು ಕೇವಲ ಒಂದು ವೇದಿಕೆಗೆ ಸೀಮಿತಗೊಳಿಸದೆ, ಪ್ರವಾಸಿಗರಿಗೆ ಅನುಕೂಲವಾಗುವಂತೆ ಐದು ವಿಭಿನ್ನ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕಲಾವಿದರನ್ನು ಆಹ್ವಾನಿಸುವ ಕುರಿತು ಶೀಘ್ರವೇ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್, ಧ್ರುವ ಸರ್ಜಾ ಸೇರಿದಂತೆ ಚಿತ್ರರಂಗದ ಗಣ್ಯರನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಲಾಗಿದೆ. ಜೊತೆಗೆ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕಳೆದ ಎರಡು ವರ್ಷಗಳಿಗಿಂತ ಈ ಬಾರಿ ವೇದಿಕೆಯ ವಿನ್ಯಾಸ ಮತ್ತು ಸ್ಮಾರಕಗಳ ಮಾದರಿಗಳು ಅತ್ಯಂತ ಆಕರ್ಷಕವಾಗಿರಲಿವೆ. ಸುಗಮ ಸಂಚಾರಕ್ಕಾಗಿ ರೈತರೊಂದಿಗೆ ಚರ್ಚಿಸಿ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಪಾರ್ಕಿಂಗ್‌ಗೆ ಭೂಮಿ ನೀಡುವ ರೈತರ ಬೆಳೆ ನಷ್ಟಕ್ಕೆ ತಕ್ಕ ಪರಿಹಾರ ಒದಗಿಸಲಾಗುವುದು ಎಂದರು.

ಹಗರಿಬೊಮ್ಮನಹಳ್ಳಿಯಿಂದ ಶಿವಮೊಗ್ಗ ರಸ್ತೆ ಸೇರಿದಂತೆ ಹಂಪಿಗೆ ಸಂಪರ್ಕ ಕಲ್ಪಿಸುವ ಹದಗೆಟ್ಟ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ನಾಡಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿ.ಪಂ. ಸಿಇಓ ನೊಂಗ್ಜಾಯ್ ಮಹ್ಮದ್ ಅಕ್ರಂ ಅಲಿ ಷಾ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಎಸ್. ಜಾಹ್ನವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Zamir AhmedHampi UtsavaHampi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X