Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ | 'ಮನೆಗೊಂದು ಗ್ರಂಥಾಲಯ'...

ಹೊಸಪೇಟೆ | 'ಮನೆಗೊಂದು ಗ್ರಂಥಾಲಯ' ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 Jan 2026 6:41 PM IST
share
ಹೊಸಪೇಟೆ | ಮನೆಗೊಂದು ಗ್ರಂಥಾಲಯ ಯೋಜನೆಗೆ ಚಾಲನೆ

ಹೊಸಪೇಟೆ: "ಪುಸ್ತಕಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಹಾಗೂ ಓದುವ ಸಂಸ್ಕೃತಿಯನ್ನು ಮನೆಮನಗಳಲ್ಲಿ ಬೆಳೆಸಲು ಕರ್ನಾಟಕ ಪುಸ್ತಕ ಪ್ರಾಧಿಕಾರವು 'ಮನೆಗೊಂದು ಗ್ರಂಥಾಲಯ' ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಪ್ರಾಧಿಕಾರದ ಅಧ್ಯಕ್ಷೆ ಡಾ.ಮಾನಸ ತಿಳಿಸಿದರು.

ನಗರದ ಜಗದ್ಗುರು ಶ್ರೀ ಕೊಟ್ಟೂರುಸ್ವಾಮಿ ಮಠದ ಆವರಣದಲ್ಲಿ ಕರ್ನಾಟಕ ಪುಸ್ತಕ ಪ್ರಾಧಿಕಾರ ಹಾಗೂ ವಿಜಯನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ "ಮನೆಗೊಂದು ಗ್ರಂಥಾಲಯ" ಸದಸ್ಯರ ನೇಮಕ ಪ್ರಮಾಣಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಮಾತನಾಡಿ, ಈ ಯೋಜನೆಯ ಮೂಲಕ ರಾಜ್ಯದ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸಲು ಪ್ರಾಧಿಕಾರ ಮುಂದಾಗಿರುವುದು ಅತ್ಯಂತ ಶ್ಲಾಘನೀಯ ಸಂಗತಿಯಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಅವರು, ಪುಸ್ತಕ ಸಂಸ್ಕೃತಿಯು ಸಮಾಜದ ಪ್ರಗತಿಯ ಪ್ರತಿಬಿಂಬವಾಗಿದೆ ಎಂದು ಅಭಿಪ್ರಾಯಪಟ್ಟರು.

ವಿಜಯನಗರ ಜಿಲ್ಲೆಯ ಮನೆಗೊಂದು ಗ್ರಂಥಾಲಯ ಸಂಚಾಲಕರನ್ನಾಗಿ ಎಂ.ಉಮಾಮಹೇಶ್ವರ, ಹುಲಿಯಪ್ಪನವರ ಬಸವರಾಜ ಹರಪನಹಳ್ಳಿ, ವೀರಮ್ಮ ಹಿರೇಮಠ ಹೊಸಪೇಟೆ, ಎಲ್.ಹಾಲ್ಯಾನಾಯಕ, ಬಿ.ಕಿರಣ್ ಕುಮಾರ್, ಎಸ್.ಎಂ.ರಿಯಾಝ್‌ ಪಾಷಾ ಕೂಡ್ಲಿಗಿ, ಗಣೇಶ ಹವಾಲ್ದಾರ್ ಹಗರಿಬೊಮ್ಮನಹಳ್ಳಿ, ಬಿ.ಹೆಚ್. ಶರಣಪ್ಪ ಕೊಟ್ಟೂರು, ಬಿ.ಕೆ. ಮುರಳೀಧರ, ಇವರುಗಳನ್ನು ಸದಸ್ಯರನ್ನಾಗಿ ನೇಮಕ ಮಾಡಿ ಪ್ರಮಾಣ ಪತ್ರ ನೀಡಲಾಯಿತು.

ವೇದಿಕೆಯಲ್ಲಿ ತಾಲೂಕು ಕಸಾಪ ಅಧ್ಯಕ್ಷ ಡಾ.ಗುಂಡಿ ಮಾರುತಿ, ಹಿರಿಯ ಸಾಹಿತಿ ಟಿ.ಯಮನಪ್ಪ ಹಾಗೂ ಶೋಭಾ ಶಂಕರಾನಂದ ಉಪಸ್ಥಿತರಿದ್ದರು.

ಎಲ್.ಹಾಲ್ಯಾನಾಯಕ ಸ್ವಾಗತಿಸಿದರು, ವೀರಮ್ಮ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು ಮತ್ತು ಉಮಾಮಹೇಶ ವಂದನಾರ್ಪಣೆ ಮಾಡಿದರು.

Tags

libraryHospet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X