Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ‘ಒಳ ಮೀಸಲಾತಿ’ಗಾಗಿ ಹೋರಾಟ ಅನಿವಾರ್ಯ :...

‘ಒಳ ಮೀಸಲಾತಿ’ಗಾಗಿ ಹೋರಾಟ ಅನಿವಾರ್ಯ : ಸಚಿವ ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ23 Jun 2024 6:45 PM IST
share
‘ಒಳ ಮೀಸಲಾತಿ’ಗಾಗಿ ಹೋರಾಟ ಅನಿವಾರ್ಯ : ಸಚಿವ ಕೆ.ಎಚ್.ಮುನಿಯಪ್ಪ

ವಿಜಯನಗರ : ಒಳ ಮೀಸಲಾತಿಗಾಗಿ ಪಕ್ಷ ಬೇದ ಮರೆತು ನಾವೆಲ್ಲರೂ ಹೋರಾಟ ಮಾಡಿ, ಕೇಂದ್ರ ಸರಕಾರದ ಮೇಲೆ ಒತ್ತಡ ತಂದಾಗ ಮಾತ್ರ ನಮಗೆ ನ್ಯಾಯ ಸಿಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಕರೆ ನೀಡಿದ್ದಾರೆ.

ರವಿವಾರ ವಿಜಯನಗರ ಜಿಲ್ಲೆ ಮಾದಿಗ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಲು, ನಮಗೆ ಮೂಲಭೂತವಾಗಿ ಶಿಕ್ಷಣ ಅತಿ ಮುಖ್ಯವಾಗಿ ಬೇಕಾಗುತ್ತದೆ ಎಂದರು.

ಮಹಾತ್ಮ ಗಾಂಧೀಜಿ ಕನಸು ಕಂಡಂತೆ ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವಲ್ಲಿ ಬೋಧಕರ ಮಾರ್ಗದರ್ಶನ ಅತಿ ಮುಖ್ಯ. ಅದೇ ರೀತಿ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವೂ ಬಹಳ ಮುಖ್ಯವಾಗಿರುತ್ತದೆ ಎಂದು ಮುನಿಯಪ್ಪ ಹೇಳಿದರು.

ನಾನು 1991ರಲ್ಲಿ ಅಂದಿನ ಪ್ರಧಾನಿ ನರಸಿಂಹರಾವ್ ರವರ ಸರಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಲಹಾ ಸಮಿತಿಯ ಸದಸ್ಯನಾಗಿ ಕಾರ್ಯನಿರ್ವಹಿಸಿ ಆಶ್ರಮ ಶಾಲೆಗಳ ನಿರ್ಮಾಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದೆ. ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿಯೂ ಆಶ್ರಮ ಶಾಲೆಗಳನ್ನು ನಿರ್ಮಿಸಲು ಸುತ್ತೋಲೆಯನ್ನು ಹೊರಡಿಸಿ ಕಾರ್ಯಗತಗೊಳಿಸಿದ್ದೆ ಎಂದು ಅವರು ಸ್ಮರಿಸಿದರು.

ರಾಜ್ಯದಲ್ಲಿ ಎಚ್.ಆಂಜನೇಯ ಅವರು ಸಮಾಜ ಕಲ್ಯಾಣ ಇಲಾಖೆಯ ಸಚಿವರಿದ್ದಾಗ ಕೋಲಾರ ಕ್ಷೇತ್ರದಲ್ಲಿ ಸುಮಾರು 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಯಿತು. ಅವುಗಳಿಂದ ಹಲವಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತಿದೆ. ಈ ವಸತಿ ಶಾಲೆಗಳಲ್ಲಿ ಶೇಕಡಾವಾರು ಎಲ್ಲಾ ವರ್ಗದ ಮಕ್ಕಳು ದಾಖಲಾಗಲು ಸಹಕಾರಿಯಾಗುತ್ತಿದೆ ಎಂದು ಮುನಿಯಪ್ಪ ಹೇಳಿದರು.

ಮಕ್ಕಳು ಮಾಡಿರುವ ಸಾಧನೆಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ಸಂಗತಿ. ಮುಂದಿನ ಅವರ ಭವಿಷ್ಯ ಸದೃಢವಾಗಲಿ ಎಂದು ಮುನಿಯಪ್ಪ ಶುಭಕೋರಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮಿ, ಶ್ರೀ ಪೂರ್ಣಾನಂದ ಭಾರತಿ ಸ್ವಾಮಿ, ಶಾಸಕ ಎಚ್.ಆರ್.ಗವಿಯಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ರಾಣಿ ಸಂಯುಕ್ತ, ಎಚ್.ಶ್ರೀನಿವಾಸ್ ಹಾಗೂ ಮಾದಿಗ ಮಹಾಸಭಾ ಮುಖಂಡರು, ಸಮುದಾಯದ ನಾಯಕರು, ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳು ಉಪಸ್ಥಿತರಿದ್ದರು.

Tags

nternal reservationKH Muniappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X