ಜಲಸಂಪನ್ಮೂಲ ಸಚಿವರಿಂದ ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್, ಚೈನ್ ಲಿಂಕ್ ಕಾಮಗಾರಿ ಪರಿಶೀಲನೆ

ವಿಜಯನಗರ (ಹೊಸಪೇಟೆ): ತುಂಗಭದ್ರಾ ಜಲಾಶಯದ ಬಹುನಿರೀಕ್ಷಿತ ಕ್ರೆಸ್ಟ್ ಗೇಟ್ ಹಾಗೂ ಅತ್ಯಾಧುನಿಕ ಚೈನ್ ಲಿಂಕ್ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಜೂನ್ 18 ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ವರ್ಷ ಜಲಾಶಯದ 19ನೇ ಕ್ರೆಸ್ಟ್ ಗೇಟ್ನ ಚೈನ್ ಲಿಂಕ್ ತುಂಡಾಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದು ಹೋಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರವು, ಜಲಾಶಯದ ದುರಸ್ತಿ ಮತ್ತು ನವೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಕಾಮಗಾರಿ ಪೂರ್ಣಗೊಂಡು ಹೊಸದಾಗಿ ಅಳವಡಿಸಲಾದ ಕ್ರೆಸ್ಟ್ ಗೇಟ್ಗಳು ಹಾಗೂ ಹೈಡ್ರಾಲಿಕ್ ಚೈನ್ ಲಿಂಕ್ ವ್ಯವಸ್ಥೆಯ ತಾಂತ್ರಿಕ ಕಾರ್ಯಕ್ಷಮತೆಯನ್ನು ಸಚಿವರು ಜಲಾಶಯದಲ್ಲಿ ಪರಿಶೀಲನೆ ನಡೆಸಿದರು.
ಸಂಸದರಾದ ರಾಜಶೇಖರ ಹಿಟ್ನಾಳ, ಬಳ್ಳಾರಿ ವಲಯದ ಐಜಿಪಿ ಡಾ.ಪಿ ಎಸ್ ಹರ್ಷ, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಹಾಗೂ ಇತರರು ಇದ್ದರು.




