ಧರ್ತಿ ಅಬಾ ಜನಜಾರ್ತಿಯ ಗ್ರಾಮ ಉತ್ಕರ್ಷ್ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಈ.ತುಕಾರಾಂ ಚಾಲನೆ

ವಿಜಯನಗರ (ಹೊಸಪೇಟೆ) : ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಭಾರತ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವಿಜಯನಗರ ಇವರ ಸಂಯುಕ್ತಾಶ್ರಯದಲ್ಲಿ ಧರ್ತಿ ಅಬಾ ಜನಜಾರ್ತಿಯ ಗ್ರಾಮ ಉತ್ಕರ್ಷ್ ಅಭಿಯಾನ ಕಾರ್ಯಕ್ರಮವನ್ನು ಸಂಸದರಾದ ಈ.ತುಕಾರಾಂ ಅವರೊಂದಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾದ ಎಮ್.ಎಸ್.ದಿವಾಕರ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎನ್.ಮುಹಮ್ಮದ್ ನಿಯಾಝ್, ವಿಜಯನಗರ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಕುರಿ ಶಿವಮೂರ್ತಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Next Story





