Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ʼಗೃಹಲಕ್ಷ್ಮಿʼ ಹಣದಲ್ಲಿ...

ವಿಜಯನಗರ | ʼಗೃಹಲಕ್ಷ್ಮಿʼ ಹಣದಲ್ಲಿ ನಿರ್ಮಿಸಿದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಹೆಸರು, ಭಾವಚಿತ್ರ ಕೆತ್ತಿಸಿದ ದಂಪತಿ

ವಾರ್ತಾಭಾರತಿವಾರ್ತಾಭಾರತಿ17 Sept 2025 10:02 PM IST
share
ವಿಜಯನಗರ | ʼಗೃಹಲಕ್ಷ್ಮಿʼ ಹಣದಲ್ಲಿ ನಿರ್ಮಿಸಿದ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಹೆಸರು, ಭಾವಚಿತ್ರ ಕೆತ್ತಿಸಿದ ದಂಪತಿ

ವಿಜಯನಗರ (ಹೊಸಪೇಟೆ) : ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ದಂಪತಿ ಕೆ.ಎಂ.ತಿಪ್ಪೇಸ್ವಾಮಿ ಮತ್ತು ಪಾರ್ವತಮ್ಮ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಕೃತಜ್ಞತೆ ಮತ್ತು ಪ್ರೀತಿಯನ್ನು ತಮ್ಮ ಮನೆಯ ಮುಖ್ಯ ಬಾಗಿಲಿನ ಮೇಲೆ ಅವರ ಹೆಸರು ಹಾಗೂ ಭಾವಚಿತ್ರ ಕೆತ್ತಿಸುವ ಮೂಲಕ ವ್ಯಕ್ತಪಡಿಸಿದ್ದಾರೆ.

ಪಾರ್ವತಮ್ಮ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗಿದ್ದು, ಯೋಜನೆ ಆರಂಭದಿಂದಲೇ 15 ತಿಂಗಳುಗಳ ಕಾಲ ಬ್ಯಾಂಕ್ ಖಾತೆಗೆ ಬಂದ ಹಣವನ್ನು ಖರ್ಚು ಮಾಡದೇ ಕೂಡಿಟ್ಟಿದ್ದರು. ಹಳೆಯ ಮನೆಯ ಬಾಗಿಲು ಸರಿಯಾಗಿರಲಿಲ್ಲ. ಹೀಗಾಗಿ ಇದುವರೆಗೆ ಬಂದ ಗೃಹಲಕ್ಷ್ಮಿ ಹಣದಲ್ಲಿ ಹೊಸ ಬಾಗಿಲು ಮಾಡಿಸುವ ನಿರ್ಧಾರ ಕೈಗೊಂಡರು.

ಒಟ್ಟು 28 ಸಾವಿರ ರೂ. ವೆಚ್ಚದಲ್ಲಿ ಹೊಸ ಬಾಗಿಲು ನಿರ್ಮಿಸಿ, ಅದರ ಮೇಲ್ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆತ್ತಿಸಲಾಗಿದೆ. ಮಧ್ಯಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರವನ್ನು ಕೆತ್ತಿಸಿದ್ದು, ಕೆಳಭಾಗದಲ್ಲಿ ಗೃಹಲಕ್ಷ್ಮಿ ಯೋಜನೆ ಎಂಬ ಬರಹವನ್ನು ಬರೆಯಲಾಗಿದೆ.

ಕೆಂಚಮಲ್ಲನಹಳ್ಳಿಯ ಬಡಗಿ ಎಕ್ಕೆಗುಂದಿ ದುರುಗೇಶ್ ಈ ಬಾಗಿಲನ್ನು ತಯಾರಿಸಿದ್ದು, ಇತ್ತೀಚೆಗೆ ಪಾರ್ವತಮ್ಮ ಹಾಗೂ ತಿಪ್ಪೇಸ್ವಾಮಿ ಅವರ ಮನೆಯಲ್ಲಿ ಅಳವಡಿಸಲಾಗಿದೆ. ಹೊಸ ಬಾಗಿಲಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರು, ಹಿಂದುಳಿದವರು ಪರ ಶ್ರಮಿಸುತ್ತಿದ್ದಾರೆ. ನಮ್ಮಂಥ ಬಡವರ ಬದುಕಿಗೆ ದಾರಿದೀಪವಾಗಿದ್ದಾರೆ. ಬೆಳಗ್ಗೆ ಎದ್ದ ತಕ್ಷಣ ಅವರ ಫೋಟೋ ನೋಡಬೇಕೆಂಬ ಆಸೆಯಿಂದಲೇ ಬಾಗಿಲಿನಲ್ಲಿ ಅವರ ಹೆಸರು ಮತ್ತು ಚಿತ್ರ ಹಾಕಿಸಿದ್ದೇವೆ ಎಂದು ಪಾರ್ವತಮ್ಮ ಮತ್ತು ತಿಪ್ಪೇಸ್ವಾಮಿ ಹೇಳಿದ್ದಾರೆ.

ಅಖಂಡ ವಿಜಯನಗರ ಜಿಲ್ಲೆಯಲ್ಲಿ ಎಲ್ಲಾ ತಾಲೂಕು ಘಟಕಗಳಲ್ಲಿ 15ಕ್ಕೂ ಹೆಚ್ಚು ಸಮಿತಿಗಳನ್ನು ರಚಿಸಿದ್ದೇವೆ. ಪ್ರತೀ ತಾಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಮನೆಮನೆಗೆ ತೆರಳಿ ನಮ್ಮ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ.

-ಕುರಿ ಶಿವಮೂರ್ತಿ, ವಿಜಯನಗರ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X