Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಹಂಪಿ ಕನ್ನಡ ವಿವಿಯಲ್ಲಿ...

ವಿಜಯನಗರ | ಹಂಪಿ ಕನ್ನಡ ವಿವಿಯಲ್ಲಿ ಕಂಬಾರರ 89ನೇ ಜನ್ಮದಿನೋತ್ಸವ

ವಾರ್ತಾಭಾರತಿವಾರ್ತಾಭಾರತಿ9 Jan 2026 11:01 PM IST
share
ವಿಜಯನಗರ | ಹಂಪಿ ಕನ್ನಡ ವಿವಿಯಲ್ಲಿ ಕಂಬಾರರ 89ನೇ ಜನ್ಮದಿನೋತ್ಸವ
ವಿದ್ಯಾರ್ಥಿಗಳಿಂದ 'ಜೋಕುಮಾರಸ್ವಾಮಿ' ನಾಟಕದ ಅದ್ದೂರಿ ಪ್ರದರ್ಶನ

ವಿಜಯನಗರ : ಹಿರಿಯರು ಬಿಟ್ಟು ಹೋದ ಸಂಪ್ರದಾಯಗಳನ್ನು ಇಂದಿನ ಬದುಕಿನ ನಡವಳಿಕೆಗೆ ಪೂರಕವಾಗಿ ಕೊಂಡೊಯ್ಯುವಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರ ಬರಹಗಳು ಯಶಸ್ವಿಯಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಅಭಿಪ್ರಾಯಪಟ್ಟರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಟಕ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿ ಡಾ. ಚಂದ್ರಶೇಖರ ಕಂಬಾರ ಅವರ 89ನೇ ಜನ್ಮದಿನದ ಪ್ರಯುಕ್ತ ಗುರುವಾರ (ಜ. 8) ಹಮ್ಮಿಕೊಳ್ಳಲಾಗಿದ್ದ ಅವರ ಪ್ರಸಿದ್ಧ ಕೃತಿ ‘ಜೋಕುಮಾರಸ್ವಾಮಿ’ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಳುವವನೇ ಭೂಮಿಯ ಒಡೆಯ ಎಂಬ ಸಾಮಾಜಿಕ ಕಳಕಳಿಯೊಂದಿಗೆ, ಕಂಬಾರರು ಈ ನಾಟಕದಲ್ಲಿ ಹೆಣ್ಣಿನ ಭಾವನೆಗಳು ಹಾಗೂ ಮಾನವೀಯ ಸಂಬಂಧಗಳನ್ನು ಹಳ್ಳಿ ಸೊಗಡಿನ ಭಾಷೆಯಲ್ಲಿ ಪರಿಣಾಮಕಾರಿಯಾಗಿ ನಿರೂಪಿಸಿದ್ದಾರೆ. ಕುವೆಂಪು ಹಾಗೂ ಗಿರೀಶ್ ಕಾರ್ನಾಡ್ ಅವರ ಸಾಹಿತ್ಯದಲ್ಲಿ ಕಂಡುಬರುವ ಹೆಣ್ಣಿನ ಆಸೆ-ಆಕಾಂಕ್ಷೆಗಳ ಸೆಳೆತವನ್ನು ಈ ನಾಟಕವೂ ಮನೋಜ್ಞವಾಗಿ ಕಟ್ಟಿಕೊಟ್ಟಿದೆ ಎಂದು ಅವರು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ನಾಟಕದಲ್ಲಿ ಸಣ್ಣ-ದೊಡ್ಡ ಪಾತ್ರಗಳೆಂಬ ಭೇದವಿಲ್ಲ; ಪ್ರತಿಯೊಂದು ಪಾತ್ರವೂ ತನ್ನ ಜೀವಂತಿಕೆಯಿಂದ ಸಂದೇಶವನ್ನು ತಲುಪಿಸಬೇಕು. ಹಂಪಿಯ ವಿದ್ಯಾರ್ಥಿಗಳು ಈ ನಾಟಕವನ್ನು ಅದ್ದೂರಿಯಾಗಿ ಪ್ರದರ್ಶಿಸುವ ಮೂಲಕ ವಿಶ್ವವಿದ್ಯಾಲಯದ ಗೌರವ ಹೆಚ್ಚಿಸಿದ್ದಾರೆ. ಇಂತಹ ಪ್ರದರ್ಶನಗಳು ರಾಜ್ಯದ ವಿವಿಧೆಡೆ ನಡೆಯಬೇಕು ಎಂದು ಹಾರೈಸಿದರು.

ಹಿರಿಯ ರಂಗಕರ್ಮಿ ಸಿ.ಟಿ. ಬ್ರಹ್ಮಾಚಾರ್ ಅವರ ನಿರ್ದೇಶನ ಹಾಗೂ ಡಾ. ವೀರೇಶ ಬಡಿಗೇರ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ನಾಟಕವು ಪ್ರೇಕ್ಷಕರ ಮನಸೂರೆಗೊಂಡಿತು. ಜಯರಾಮ ಕೆ.ಹೆಚ್. ಅವರ ರಾಗ ಸಂಯೋಜನೆ ಹಾಗೂ ಸಂಗೀತ ವಿಭಾಗದ ವಿದ್ಯಾರ್ಥಿಗಳ ಹಿನ್ನೆಲೆ ಗಾಯನ ನಾಟಕಕ್ಕೆ ಮೆರುಗು ನೀಡಿತು.

ಕಾರ್ಯಕ್ರಮದಲ್ಲಿ ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಡಾ. ಶಿವಾನಂದ ವಿರಕ್ತಮಠ, ಡಾ. ಮಾಧವ ಪೆರಾಜೆ, ಡಾ. ವೀರೇಶ ಬಡಿಗೇರ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ರಂಗಾಸಕ್ತರು ಉಪಸ್ಥಿತರಿದ್ದರು.

Tags

Hampi Kannada UniversityHampiUniversityVijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X