ವಿಜಯನಗರ | ಮಕ್ಕಳಲ್ಲಿ ಕಲೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಬೇಕು : ಶಾಸಕ ಡಾ.ಎನ್ಟಿ ಶ್ರೀನಿವಾಸ್

ವಿಜಯನಗರ : ಹಿರೇ ಹೆಗ್ಡಾಳ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶ್ರೀನಿವಾಸ್ ಎನ್ ಟಿ, ಶಿಕ್ಷಕರು ಮಕ್ಕಳಲ್ಲಿ ಕಲೆ ಮತ್ತು ಸಾಂಸ್ಕೃತಿಕ ಮೌಲ್ಯ ಗಳನ್ನು ಬೆಳೆಸಬೇಕು. ವಿದ್ಯಾರ್ಥಿಗಳು ಉನ್ನತ ಸ್ಥಾನಮಾನಗಳನ್ನು ಪಡೆದುಕೊಂಡು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿಗಳಾದ ಮೈಲೇಶ್ ಬೇವೂರ್, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಶಿಕ್ಷಕ ವೃಂದ ಹಾಗೂ ಊರಿನ ಮುಖಂಡರು ಭಾಗವಹಿಸಿದ್ದರು.
Next Story





