Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ| ಕರ್ನಾಟಕ ರಾಜ್ಯ ರೈತ ಸಂಘ,...

ವಿಜಯನಗರ| ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ23 Dec 2025 7:16 PM IST
share
ವಿಜಯನಗರ| ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ

ವಿಜಯನಗರ: ನಗರದ ಗಾಂಧಿಚೌಕ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚೌದ್ರಿಚರಣ್ ಸಿಂಗ್ ಅವರು ಹುಟ್ಟಿದ ದಿನದ ಹಿನ್ನಲೆ ರೈತರ ದಿನಾಚರಣೆ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಟಿ.ನಾಗರಾಜ್, ಯಾವುದೇ ಸರಕಾರ ಬಂದಲ್ಲಿ ರೈತರಿಗೆ ಅನಾನುಕೂಲಗಳೇ ಹೆಚ್ಚು. ರೈತರ ಪರವಾಗಿ ನಿಷ್ಠೆಯಿಂದ ಕೆಲಸ ಮಾಡುವುದು ಬಹಳಷ್ಟು ಕಡಿಮೆ. ಆದ್ದರಿಂದ ಮುಂದಿನ 2028ರ ಚುನಾವಣೆಯಲ್ಲಿ ರೈತರೇ ಅಧಿಕಾರಕ್ಕೆ ಬಂದಲ್ಲಿ ರೈತರಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು ಮತ್ತು ಸ್ಥಳಿಯ ಸಕ್ಕರೆ ಕಾರ್ಖಾನೆಯು 8-9 ವರ್ಷಗಳಿಂದ ಮುಚ್ಚಿದ್ದು, ಶಾಸಕರಿಗೂ, ಸಚಿವರಿಗೂ ಮತ್ತು ಮುಖ್ಯಮಂತ್ರಿಯವರಿಗೂ ಬಹಳಷ್ಟು ಬಾರಿ ಮನವಿ ಪತ್ರ ಸಲ್ಲಿಸಿದರು ಸಹ ಇಲ್ಲಿಯವರೆಗೂ ಯಾವುದೇ ಪ್ರಯೋಜನೆ ಆಗಿರುವುದಿಲ್ಲ ಎಂದು ಹೇಳಿದರು.

ತಾಲೂಕು ಅಧ್ಯಕ್ಷರಾದ ಸಣ್ಣಕ್ಕಿ ರುದ್ರಪ್ಪ ಮಾತನಾಡಿ, ಚೌದ್ರಿ ಚರಣ್ ಸಿಂಗ್ 5ನೇ ಪ್ರಧಾನ ಮಂತ್ರಿಯಾಗಿ ರೈತರ ಪರವಾಗಿ ಅನೇಕ ರೀತಿಯ ಸೌಕರ್ಯಗಳನ್ನು ಕಲ್ಪಿಸಿದ್ದರು. ಕೃಷಿಯಲ್ಲಿ ಬದಲಾವಣೆ ತರುವಲ್ಲಿ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಕೃಷಿಜಮೀನ್‌ದಾರ್ ಪದ್ದತಿ ಮತ್ತು ಜೀತದಾಳು ಪದ್ದತಿಯನ್ನು ಹೋಗಲಾಡಿಸುವುದರಲ್ಲಿ ಯಶಸ್ಸನ್ನು ಕಂಡವರು ಎಂದು ಹೇಳಿದರು.

ಜಿಲ್ಲಾ ಕಾರ್ಯಧ್ಯಕ್ಷರಾದ ಎಂ.ಜಡಿಯಪ್ಪ ಮಾತನಾಡಿ, ತಾಲೂಕು ಪಂಚಾಯಿತಿಗೆ ಬರುವಂತಹ ರೈತರಿಗೆ ಸರ್ಕಾರಿ ಸೌಲಭ್ಯಗಳ ಯಾವುದೇ ಮಾಹಿತಿ ಇರುವುದಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಪಿಡಿಓಗಳು ರೈತರಿಗೆ ಮಾಹಿತಿ ನೀಡಬೇಕು ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಬರುವಂತಹ ಸರಕಾರದ ಸೌಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಖಾಜಾ ನಿಯಾಜ್, ಜಹಿರುದ್ದೀನ್, ಪದಾಧಿಕಾರಿಗಳಾದ ಟಿ.ನಾಗರಾಜ, ಸಣ್ಣಕ್ಕಿ ರುದ್ರಪ್ಪ, ಎಂ.ಜಡಿಯಪ್ಪ, ಆರ್.ಆರ್.ತಾಯಪ್ಪ, ವಿ.ಗಾಳೆಪ್ಪ, ಅಂಕ್ಲೇಶ್, ಬಸವರಾಜ, ಸುರೇಶ, ವೀರೇಶ್, ರಾಮಾಂಜಿನಿ, ಪಿ.ಕೆ.ಹಳ್ಳಿ ರಾಜಶೇಖರ, ಭುವನಹಳ್ಳಿ ಗೋವಿಂದಪ್ಪ, ಮತ್ತು ಅಧಿಕಾರಿಗಳಾದ ದಯಾನಂದ ಎ.ಇ.ಇ, ಕೃಷಿ ಸಹಾಯಕ ನಿರ್ದೇಶಕರು ಮನೋಹರ್ ಗೌಡ, ತೋಟಗಾರಿಕೆ ಸಹಾಯಕ ನಿರ್ದೇಶಕ ರಮೇಶ್, ತಾಲೂಕು ಪಂಚಾಯಿತಿ ಇ.ಓ ಮತ್ತು ರೈತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X