Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಮಕ್ಕಳ ಬಾಲ್ಯ ಉಳಿಸೋಣ, ದುಡಿತ...

ವಿಜಯನಗರ | ಮಕ್ಕಳ ಬಾಲ್ಯ ಉಳಿಸೋಣ, ದುಡಿತ ತಪ್ಪಿಸೋಣ : ಡಿಸಿ ಕವಿತಾ ಮನ್ನಿಕೇರಿ

ವಾರ್ತಾಭಾರತಿವಾರ್ತಾಭಾರತಿ18 Sept 2025 8:00 PM IST
share
ವಿಜಯನಗರ | ಮಕ್ಕಳ ಬಾಲ್ಯ ಉಳಿಸೋಣ, ದುಡಿತ ತಪ್ಪಿಸೋಣ : ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ: ಮಕ್ಕಳು ರಾಷ್ಟ್ರದ ಸಂಪತ್ತು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಮತ್ತು ಆರ್ಥಿಕವಾಗಿ ಶೋಷಣೆಗೆ ಒಳಪಡಿಸುತ್ತದೆ. ಜೊತೆಗೆ ಮಕ್ಕಳನ್ನು ಶಿಕ್ಷಣದ ಅವಕಾಶಗಳಿಂದ ವಂಚಿತರನ್ನಾಗಿಸುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸಂಪಿಗೆ ಸಾಂಸ್ಕೃತಿಕ ಕಲಾ ಟ್ರಸ್ಟ್ ಸಹಯೋಗದಲ್ಲಿ ಬಾಲ್ಯ ಹಾಗೂ ಕಿಶೋರ ಕಾರ್ಮಿಕರ ನಿಷೇಧ ಕುರಿತು ಬೀದಿ ನಾಟಕ ಮತ್ತು ಜಾಗೃತಿ ಹಾಡುಗಳ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ್ಯ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 1986ರ ಪ್ರಕಾರ, ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಸಂಪೂರ್ಣ ನಿಷೇಧ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಕೇವಲ ಕುಟುಂಬದ ಸ್ವಂತ ಉದ್ಯೋಗ ಅಥವಾ ಬಾಲನಟರಾಗಿ ಸೀಮಿತ ಅವಕಾಶವಿದೆ. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿ, ವಿದ್ಯಾವಂತರನ್ನಾಗಿಸಲು ಕಾಳಜಿ ವಹಿಸಬೇಕು. ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಸರ್ಕಾರ ಮಾತ್ರವಲ್ಲ, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳೂ ಕೈಜೋಡಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ. ಮೌನೇಶ್ ಮಾತನಾಡಿ, 6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗದಲ್ಲಿ, 18 ವರ್ಷದೊಳಗಿನವರು ಅಪಾಯಕಾರಿ ಉದ್ಯೋಗಗಳಲ್ಲಿ ಕಂಡುಬಂದರೆ ತಕ್ಷಣವೇ ಮಕ್ಕಳ ಸಹಾಯವಾಣಿ 1098, ತುರ್ತುಸಹಾಯ 112 ಅಥವಾ ಕಾರ್ಮಿಕ ಸಹಾಯವಾಣಿ 155214 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಜೊತೆಗೆ ಜಿಲ್ಲಾಡಳಿತ, ಪೊಲೀಸ್, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಯ ದೂರವಾಣಿ ಸಂಖ್ಯೆಗಳಿಗೂ ನೇರ ದೂರು ನೀಡಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೈ.ಎ. ಕಾಳೆ, ಹೊಸಪೇಟೆ ಬಿಇಒ ಶೇಖರಪ್ಪ ಹೊರಪೇಟೆ, ಕಾರ್ಮಿಕ ಇಲಾಖೆ ನಿರೀಕ್ಷಕರಾದ ಶಿವಶಂಕರ್ ತಳವಾರ, ಗೋಪಾಲ ದೂಪದ್, ಸಂಪಿಗೆ ಸಾಂಸ್ಕೃತಿಕ ಕಲಾ ಟ್ರಸ್ಟ್‌ನ ಕಲಾವಿದರಾದ ಅನುಮಯ್ಯ, ಎಸ್.ಎಮ್. ಹುಲುಗಪ್ಪ, ಬಿ. ಆನಂದ, ಹೇಮಂತ್, ಸುಂಕಪ್ಪ, ದಿವ್ಯ, ಸರ್ವಮಂಗಳಮ್ಮ, ಕೊಟ್ರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X