Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಹಣ ದ್ವಿಗುಣ ಮಾಡುವುದಾಗಿ...

ವಿಜಯನಗರ | ಹಣ ದ್ವಿಗುಣ ಮಾಡುವುದಾಗಿ ಪೂಜೆಯ ನೆಪದಲ್ಲಿ ವಂಚನೆ : ಮೂವರ ಬಂಧನ, 35 ಲಕ್ಷ ರೂ. ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ8 Sept 2024 9:13 PM IST
share
ವಿಜಯನಗರ | ಹಣ ದ್ವಿಗುಣ ಮಾಡುವುದಾಗಿ ಪೂಜೆಯ ನೆಪದಲ್ಲಿ ವಂಚನೆ : ಮೂವರ ಬಂಧನ, 35 ಲಕ್ಷ ರೂ. ವಶಕ್ಕೆ

ವಿಜಯನಗರ : ಜಿಲ್ಲೆಯ ಕಲ್ಲಹಳ್ಳಿ ಗ್ರಾಮದಲ್ಲಿ ಸುಮಾರು 60 ಜನರಿಗೆ ಮೋಸ ಮಾಡಿ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ನಡೆದಿದೆ.

ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ವಂಚಿಸಿದ ನಕಲಿ ಸ್ವಾಮಿ ಮತ್ತು ಇತರ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ರವಿವಾರ ಬಂಧಿಸಿ, 35 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜಾಸ್ಥಾನ ಮೂಲದ ಹಾಗೂ ಚಿತ್ರದುರ್ಗದಲ್ಲಿ ವಾಸ ಮಾಡುತ್ತಿದ್ದ ಜಿತೇಂದ್ರ ಸಿಂಗ್ (25), ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ತುಕ್ಯಾ ನಾಯ್ಕ್‌ (29) ಮತ್ತು ಶಂಕು ನಾಯ್ಕ್ (30) ಬಂಧಿತ ಆರೋಪಿಗಳು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಶ್ರೀಹರಿಬಾಬು ಬಿ.ಎಲ್‌. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಕಲ್ಲಹಳ್ಳಿ ಗ್ರಾಮದ ಕುಮಾರ ನಾಯ್ಕ್ ಎಂಬವರಿಗೆ ಅದೇ ಗ್ರಾಮದ ತುಕ್ಯಾ ನಾಯ್ಕ್ ಹಾಗೂ ಶಂಕು ನಾಯ್ಕ್ ಎಂಬವರು ತಮಗೆ ಗೊತ್ತಿರುವ ರಾಜಾಸ್ಥಾನದ ಜಿತೇಂದ್ರ ಸಿಂಗ್ ಎನ್ನುವವರು ಪೂಜೆ ಮಾಡಿ ಹೆಚ್ಚಿನ ಹಣ ಮಾಡಿಕೊಡುತ್ತಾರೆಂದು ಹೇಳಿ ನಂಬಿಸಿ, ಸೆ.4ರಂದು ಜಿತೇಂದ್ರ ಸಿಂಗ್ ಅವರನ್ನು ಕರೆದುಕೊಂಡು ಬಂದು ಕುಮಾರ ನಾಯ್ಕ್ ಬಳಿ ಪರಿಚಯಿಸಿದ್ದರು.

ಇದಾದ ಬಳಿಕ 7.5 ಲಕ್ಷ ರೂ. ಇಟ್ಟು ಪೂಜೆ ಮಾಡಿಸಿದರೆ 80 ಲಕ್ಷ ರೂ. ಮಾಡಿಕೊಡುವುದಾಗಿ ಹೇಳಿ ನಂಬಿಸಿದ್ದಾರೆ. ಈ ನಕಲಿ ಸ್ವಾಮಿ ಹೇಳಿದಂತೆ ಕುಮಾರ ನಾಯ್ಕ್ 7.5 ಲಕ್ಷ ರೂ. ಹೊಂದಿಸಿ, ಅಷ್ಟು ಮೊತ್ತವನ್ನು ಇಟ್ಟು ಪೂಜೆ ಮಾಡಿ ಪೆಟ್ಟಿಗೆಯಲ್ಲಿ ಇಟ್ಟಂತೆ‌ ಮಾಡಿದ್ದರು. ಈ ಪೆಟ್ಟಿಗೆಯನ್ನು 168+2 ದಿನದ ಬಳಿಕ ತೆರೆದು ನೋಡುವಂತೆ ನಕಲಿ ಸ್ವಾಮಿ ಕುಮಾರ ನಾಯ್ಕ್ ತಿಳಿಸಿದ್ದನು.

ಈ ಮಧ್ಯೆ ಸೆ.7ರಂದು ಅದೇ ಊರಿನ ರಾಜ ನಾಯ್ಕ್‌ ಎಂಬುವವರ ಮನೆಗೆ ತುಕ್ಯಾ ನಾಯ್ಕ್ ಹಾಗೂ ಶಂಕು ನಾಯ್ಕ್ ಅವರು ಜಿತೇಂದ್ರ ಸಿಂಗ್ ಅವರನ್ನು ಕರೆದುಕೊಂಡು ಬಂದು ಪೂಜೆ ಮಾಡಿಸಲು ಹೋದಾಗ, ಜಿತೇಂದ್ರ ಸಿಂಗ್ ಅವರ ಪೂಜೆ ಸುಳ್ಳೆಂದು ಕುಮಾರ್‌ ನಾಯ್ಕ್ ಅವರಿಗೆ ಗೊತ್ತಾಗಿದೆ.

ಬಳಿಕ ಕುಮಾರ ನಾಯ್ಕ್ ಅವರು ಮನೆಗೆ ಹೋಗಿ ಜಿತೇಂದ್ರ ಸಿಂಗ್ ಈ ಮೊದಲು ಪೂಜೆ ಮಾಡಿಕೊಟ್ಟಿದ್ದ ಪೆಟ್ಟಿಗೆಯನ್ನು ತರೆದು ನೋಡಿದ್ದಾರೆ. ಅದರಲ್ಲಿ ಅಗರಬತ್ತಿ ಪ್ಯಾಕೆಟ್‍ಗಳು ಟವೆಲ್‍ಗಳು ಇದ್ದದ್ದು ಕಂಡು ಬಂದಿದೆ. ಇದಾದ ಬಳಿಕ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ದೂರು ದಾಖಲಿಸಿಕೊಂಡು ಪತ್ತೆ ಕಾರ್ಯ ಕೈಗೊಂಡ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ 35,14,740 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X