Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಚಟುವಟಿಕೆ ಆಧಾರಿತ...

Vijayanagara | ಚಟುವಟಿಕೆ ಆಧಾರಿತ ಬೋಧನೆ ಮಕ್ಕಳಲ್ಲಿ ಪರಿಕಲ್ಪನೆ ನಿರ್ಮಾಣಕ್ಕೆ ಸಹಕಾರಿ : ಜಾವಿದ್ ಕಾರಂಗಿ

ವಾರ್ತಾಭಾರತಿವಾರ್ತಾಭಾರತಿ16 Jun 2026 4:39 PM IST
share
Vijayanagara | ಚಟುವಟಿಕೆ ಆಧಾರಿತ ಬೋಧನೆ ಮಕ್ಕಳಲ್ಲಿ ಪರಿಕಲ್ಪನೆ ನಿರ್ಮಾಣಕ್ಕೆ ಸಹಕಾರಿ : ಜಾವಿದ್ ಕಾರಂಗಿ

ಹೊಸಪೇಟೆ/ವಿಜಯನಗರ : ನಿಧಾನಗತಿ ಕಲಿಕೆಯ ಮಕ್ಕಳಲ್ಲಿ ವಿವಿಧ ವಿಷಯಗಳ ಪರಿಕಲ್ಪನೆಗಳನ್ನು ಪರಿಣಾಮಕಾರಿಯಾಗಿ ಮೂಡಿಸಲು ಶಿಕ್ಷಕರು ಮಕ್ಕಳ ಕಲಿಕಾ ಮಟ್ಟಕ್ಕೆ ಅನುಗುಣವಾಗಿ ಚಟುವಟಿಕೆ ಆಧಾರಿತ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಜಾವಿದ್ ಕೆ. ಕಾರಂಗಿ ಹೇಳಿದರು.

ಹೊಸಪೇಟೆ ತಾಲೂಕಿನ ಡಣಾಪುರದ ಮೈರಾಡ ತರಬೇತಿ ಕೇಂದ್ರದಲ್ಲಿ ಅಜಿಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಮೌಲಾನಾ ಆಜಾದ್ ಶಾಲೆಗಳ ಶಿಕ್ಷಕರಿಗಾಗಿ ಆಯೋಜಿಸಿದ್ದ ಕನ್ನಡ, ಆಂಗ್ಲ, ಉರ್ದು ಭಾಷೆ ಹಾಗೂ ಗಣಿತ ವಿಷಯಗಳ ಸೇತುಬಂಧ ತರಬೇತಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶಿಕ್ಷಕರು ತರಗತಿಯಲ್ಲಿ ಪರಿಣಾಮಕಾರಿ ಬೋಧನೆ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲು ಇಲಾಖೆ ಸದಾ ಸಿದ್ಧವಿದೆ ಎಂದು ತಿಳಿಸಿದ ಅವರು, ವೈವಿಧ್ಯಮಯ ಸಾಮಾಜಿಕ ಹಾಗೂ ಶೈಕ್ಷಣಿಕ ಹಿನ್ನೆಲೆಯ ಮಕ್ಕಳು ಕಲಿಕೆಯಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸಲು ಅಜಿಂ ಪ್ರೇಮ್‌ಜಿ ಫೌಂಡೇಶನ್ ಸಿದ್ಧಪಡಿಸಿರುವ ಶಿಕ್ಷಕರ ಕೈಪಿಡಿ ಮತ್ತು ವಿದ್ಯಾರ್ಥಿಗಳ ಕಾರ್ಯಹಾಳೆಗಳು ಉಪಯುಕ್ತವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಜಿಂ ಪ್ರೇಮ್‌ಜಿ ಫೌಂಡೇಶನ್‌ನ ವಿಜಯನಗರ ಜಿಲ್ಲಾ ಮುಖ್ಯಸ್ಥ ಪುನೀತ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆ ಕೈಗೊಳ್ಳುತ್ತಿರುವ ಹೊಸ ಪ್ರಯೋಗಗಳು ತರಗತಿ ಪ್ರಕ್ರಿಯೆಗೆ ನೆರವಾದಾಗ ಮಾತ್ರ ತಮ್ಮ ಕಾರ್ಯಕ್ಕೆ ನಿಜವಾದ ತೃಪ್ತಿ ಸಿಗುತ್ತದೆ ಎಂದು ಹೇಳಿದರು.

ಎರಡು ದಿನಗಳ ತರಬೇತಿಯಲ್ಲಿ ಕನ್ನಡ, ಉರ್ದು ಹಾಗೂ ಆಂಗ್ಲ ಭಾಷೆಗಳ ಕಲಿಕೆಯಲ್ಲಿ ಮಾತುಗಾರಿಕೆ, ಮೂಲಾಕ್ಷರ, ಗುಣಿತಾಕ್ಷರ, ಒತ್ತಕ್ಷರ, ಓದು ಹಾಗೂ ಬರವಣಿಗೆ ಕೌಶಲ್ಯಗಳ ಅಭಿವೃದ್ಧಿಗೆ ಪೂರಕವಾಗುವ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಪೂರ್ವ ಪರೀಕ್ಷೆ ಹಾಗೂ ಸಾಫಲ್ಯ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಪರಿಣಾಮಕಾರಿ ವಿಧಾನಗಳ ಬಗ್ಗೆಯೂ ಮಾರ್ಗದರ್ಶನ ನೀಡಲಾಯಿತು.

ತರಬೇತಿಯಲ್ಲಿ ಅಜಿಂ ಪ್ರೇಮ್‌ಜಿ ಫೌಂಡೇಶನ್‌ನ ಡಾ. ನಿರಂಜನ್ ಗಾಣಿಗೇರ, ಸಂತೋಷ್ ಕುಮಾರ್ ಸಿ.ಎಸ್., ಜಗದೀಶ್, ಸಂತೋಷ್ ಹುಲ್ಲೂರು ಹಾಗೂ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ಡಾ. ನಾಗರಾಜ್ ಬಸರಕೋಡು ತರಬೇತಿ ನೀಡಿದರು. ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಬಸವರಾಜ್ ಜೆ., ಡಾ. ನಾಗರಾಜ್, ರಂಗಪ್ಪ ಸೊಬಾಟಿ, ಶ್ರೀಮತಿ ತಫಿಮಾ, ಸುಂಕಪ್ಪ ವೈ., ಬಸವರಾಜ್ ಕೆ. ಹಾಗೂ ಗಂಗಾಧರ ಸಹಕಾರ ನೀಡಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X