ವಿಜಯನಗರ | ಸಂಸಾರಿಕ ಕಲಹ : ಪತಿಯಿಂದ ಪತ್ನಿಯ ಹತ್ಯೆ

ವಿಜಯನಗರ : ಸಂಸಾರಿಕ ಕಲಹದಿಂದಾಗಿ ಪತಿ, ಪತ್ನಿಯನ್ನು ಮಾರಕಾಸ್ತ್ರದಿಂದ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಕ್ಯಾಂಪ್ ಬಳಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಜಾನ್ಸಿ (36) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಸೆಲ್ವಕುಮಾರ್ (40) ಘಟನೆಯ ಬಳಿಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸಂಸಾರಿಕ ಕಲಹದಿಂದ ಮಾರಕಾಸ್ತ್ರದಿಂದ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್. ಹಾಗೂ ಡಿವೈಎಸ್ಪಿ ಡಾ. ಮಂಜುನಾಥ್ ತಳವಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕಮಲಾಪುರ ಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story





