Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯಪುರ | ಕೈಗಡಿಯಾರ ವಿಚಾರಕ್ಕೆ...

ವಿಜಯಪುರ | ಕೈಗಡಿಯಾರ ವಿಚಾರಕ್ಕೆ ಸ್ನೇಹಿತರಿಂದ ಹಲ್ಲೆ ಆರೋಪ; ಬಾಲಕ ಅನುಮಾನಾಸ್ಪದ ಸಾವು

ವಾರ್ತಾಭಾರತಿವಾರ್ತಾಭಾರತಿ7 Aug 2025 5:36 PM IST
share
ವಿಜಯಪುರ |  ಕೈಗಡಿಯಾರ ವಿಚಾರಕ್ಕೆ ಸ್ನೇಹಿತರಿಂದ ಹಲ್ಲೆ ಆರೋಪ; ಬಾಲಕ ಅನುಮಾನಾಸ್ಪದ ಸಾವು
ಶಿಕ್ಷಣ ಸಂಸ್ಥೆ ಎದುರು ಮೃತದೇಹ ಇರಿಸಿ ಕುಟುಂಬಸ್ಥರ ಪ್ರತಿಭಟನೆ

ವಿಜಯಪುರ : ಕೈಗಡಿಯಾರ ವಿಷಯವಾಗಿ ಜಗಳ ನಡೆದು ಸ್ನೇಹಿತರಿಂದ ಹಲ್ಲೆಗೊಳಗಾಗಿದ್ದಾನೆ ಎನ್ನಲಾದ ಬಾಲಕ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ನಗರದ ಯೋಗಾಪುರದಲ್ಲಿ ನಡೆದಿದ್ದು, ಬಾಲಕನ ಸಾವಿಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ಮೃತ ಬಾಲಕನ ಕುಟುಂಬ ನ್ಯಾಯಕ್ಕಾಗಿ ಶಾಲೆಯ ಎದುರು ಬಾಲಕನ ಮೃತದೇಹ ಇರಿಸಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು.

ಮೃತ ಬಾಲಕನನ್ನು ಅನ್ಸ್ (11) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ಎಂಬವರ ಪುತ್ರನಾಗಿರುವ ಅನ್ಸ್‌ಅನ್ನು ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯೊಂದಕ್ಕೆ ದಾಖಲಿಸಲಾಗಿತ್ತು.

ಕಳೆದ ಐದಾರು ದಿನಗಳ ಹಿಂದೆ ಬಾಲಕ ಅನ್ಸ್ ಧರಿಸಿದ ವಾಚ್‌ನ್ನು ಅದೇ ಓದುವ ವಿದ್ಯಾರ್ಥಿಗಳು ಕಸಿದುಕೊಂಡಿದ್ದರು, ಈ ವೇಳೆ ಜಗಳ ತಾರಕಕ್ಕೇರಿದ ಸಮಯದಲ್ಲಿ ಹಲ್ಲೆಗೊಳಗಾಗಿ ಬಾಲಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಬಳಿಕ ಪೋಷಕರು ಬಾಲಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಅನ್ಸ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೃತದೇಹ ಇರಿಸಿ ಪ್ರತಿಭಟನೆ :

ಮೃತ ಬಾಲಕನ ಕುಟುಂಬಸ್ಥರು ಬಾಲಕನ ಪಾರ್ಥಿವ ಶರೀರವನ್ನು ಶಿಕ್ಷಣ ಸಂಸ್ಥೆ ಎದುರಿನಲ್ಲಿ ಇರಿಸಿ ಪ್ರತಿಭಟನೆ ನಡೆಸಿದ್ದಾರೆ.

ʼಈ ಘಟನೆಗೆ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ, ನಮ್ಮ ಮಗ ಚಿಕಿತ್ಸೆ ಪಡೆಯುತ್ತಿರುವ ವಿಷಯವನ್ನು ಗಮನಕ್ಕೆ ತಂದರೂ ಸಹ ಯಾವುದರ ಬಗ್ಗೆಯೂ ಜವಾಬ್ದಾರಿ ತೋರಲಿಲ್ಲ, ಶಾಲೆಯಲ್ಲಿ ನಡೆದ ಗಲಾಟೆಯಿಂದಾಗಿಯೇ ನಮ್ಮ ಮಗ ಪ್ರಾಣ ಕಳೆದುಕೊಂಡಿದ್ದಾನೆ. ನಮಗೆ ನ್ಯಾಯ ಕೊಡಿʼ ಎಂದು ಕುಟುಂಬಸ್ಥರು ಎಂದು ಆಗ್ರಹಿಸಿದರು.

ಮಧ್ಯರಾತ್ರಿ ಪೊಲೀಸ್ ಅಧಿಕಾರಿಗಳ ತಂಡ ಸಹ ಆಗಮಿಸಿ ಅಗತ್ಯ ವಿಚಾರಣೆ ನಡೆಸಿತು. ವಿಜಯಪುರ ಡಿವೈಎಸ್‌ಪಿ ಬಸವರಾಜ ಯಲಿಗಾರ, ಗೋಲಗುಂಬಜ್ ಸಿಪಿಐ ಮಲ್ಲಯ್ಯ ಮಠಪತಿ ಸೇರಿದಂತೆ ಹಲವಾರು ಪೊಲೀಸ್ ಅಧಿಕಾರಿಗಳೂ ಪ್ರತಿಭಟನಾ ನಿರತ ಮೃತ ಬಾಲಕನ ಪೋಷಕರು ಹಾಗೂ ಸ್ಥಳಿಯರೊಂದಿಗೆ ಮಾತುಕತೆ ನಡೆಸಿದರು.

ಘಟನೆ ಕುರಿತು ದೂರು ನೀಡಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದರು. ಪ್ರತಿಭಟನೆಯನ್ನು ಕೈಬಿಟ್ಟು ಮುಂದಿನ ಪ್ರಕ್ರಿಯೆಗೆ ಅವಕಾಶ ನೀಡಿ ಎಂದು ಹೇಳಿದರು. ಪೊಲೀಸ್ ಆಧಿಕಾರಿಗಳ ಭರವಸೆ ಕಾರಣ ಬಾಲಕನ ಮೃತದೇಹ ಮಣೋತ್ತರ ಪರೀಕ್ಷೆಗೆ ರವಾನೆ ಮಾಡಲು ಪೋಷಕರು ಹಾಗೂ ಸ್ಥಳೀಯರು ಸಹಕಾರ ನೀಡಿದರು.

ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಅದರ ವರದಿ ಆಧರಿಸಿ ಮುಂದಿನ ತನಿಖೆ ನಡೆಯುವ ಸಾಧ್ಯತೆ ಇದ್ದು, ಈ ಘಟನೆಗೆ ಸಂಬಧಿಸಿದಂತೆ ಇಲ್ಲಿಯವರೆಗೆ ಎಫ್‌ಐಆರ್ ದಾಖಲಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X