Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಡಿ.ಕೆ.ಶಿವಕುಮಾರ್-ವಿಜಯೇಂದ್ರ ಇಬ್ಬರದ್ದು...

ಡಿ.ಕೆ.ಶಿವಕುಮಾರ್-ವಿಜಯೇಂದ್ರ ಇಬ್ಬರದ್ದು ಹೊಂದಾಣಿಕೆ ಇದೆ : ಯತ್ನಾಳ್

"ಯಡಿಯೂರಪ್ಪ ಅಧಿಕಾರದಿಂದ ಇಳಿಯಲು ಕಾರಣವೇ ವಿಜಯೇಂದ್ರ"

ವಾರ್ತಾಭಾರತಿವಾರ್ತಾಭಾರತಿ3 Aug 2024 7:14 PM IST
share
ಡಿ.ಕೆ.ಶಿವಕುಮಾರ್-ವಿಜಯೇಂದ್ರ ಇಬ್ಬರದ್ದು ಹೊಂದಾಣಿಕೆ ಇದೆ : ಯತ್ನಾಳ್

ವಿಜಯಪುರ : ‘ಭ್ರಷ್ಟಾಚಾರ ಮಾಡಿದವರೇ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡಿದರೆ ಅದಕ್ಕೆ ಮಹತ್ವ ಇರುವುದಿಲ್ಲ. ಯಡಿಯೂರಪ್ಪ ಅಧಿಕಾರದಿಂದ ಇಳಿಯಲು ಕಾರಣವೇ ವಿಜಯೇಂದ್ರ. ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ಇಬ್ಬರದ್ದು ಹೊಂದಾಣಿಕೆ ಇದೆ’ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರರ ಕಡತಗಳು ಬಂದರೆ ಡಿಕೆಶಿ ತಕ್ಷಣವೇ ಸಹಿ ಮಾಡುತ್ತಾರೆ. ಇಬ್ಬರೂ ಭ್ರಷ್ಟರಿದ್ದಾರೆ. ಒಳಗೆ ಏನೋ ಹೊಂದಾಣಿಕೆ ಇದೆ. ಹೀಗಾಗಿಯೇ ಬೇಗನೇ ಸಹಿ ಹಾಕುತ್ತಿದ್ದಾರೆ. ಮೋದಿ ಅವರು ಸಹಿತ ಈ ವಿಚಾರವಾಗಿ ಗಮನ ಹರಿಸಲಿ. ಮೊದಲು ವಿಜಯೇಂದ್ರ ಭ್ರಷ್ಟಾಚಾರವನ್ನು ಖುದ್ದು ಬಿಜೆಪಿಯೇ ಹೊರಹಾಕಲಿ ಎಂದು ಸಲಹೆ ನೀಡಿದರು.

‘ಭ್ರಷ್ಟ ಕುಟುಂಬವನ್ನು ನಾನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಯಡಿಯೂರಪ್ಪನವರೇ ನಿಮಗೆ ನೈತಿಕತೆ ಇದ್ದರೆ ಯಾವುದೇ ವೇದಿಕೆ ಹತ್ತಬಾರದು. ನಿಮ್ಮ ಹಗರಣ ಎಷ್ಟಿದೆ ಮೊದಲು ನೋಡಿಕೊಳ್ಳಿ’ ಎಂದು ಟೀಕಿಸಿದ ಅವರು, ‘ಇದೇ ಸಿದ್ದರಾಮಯ್ಯ ಶಿಕಾರಿಪುರ ಕ್ಷೇತ್ರದಲ್ಲಿ ಹಾಲುಮತ ಸಮಾಜದ ವೀಕ್ ಕ್ಯಾಡಿಡೆಂಟ್ ಹಾಕಿ ವಿಜಯೇಂದ್ರ ಗೆಲ್ಲಿಸಲು ಸಹಾಯ ಮಾಡಿದರು ಎಂದು ಟೀಕಿಸಿದರು.

ಈ ಹಿಂದೆ, ಯಡಿಯೂರಪ್ಪ ಸರಕಾರ ಅಧಿಕಾರದಲ್ಲಿದ್ದಾಗ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾವಿರಾರು ಕೋಟಿ ರೂ.ಭ್ರಷ್ಟಾಚಾರವಾಗಿದೆ. ಸಿದ್ದರಾಮಯ್ಯನವರಿಗೆ ತಾಕತ್ತು, ಧಮ್ ಇದ್ದರೆ ಕೋವಿಡ್‍ನಲ್ಲಿ ನಡೆದ ಭ್ರಷ್ಟಾಚಾರದ ತನಿಖೆಗೆ ಆದೇಶಿಸಲಿ’ ಎಂದು ಸವಾಲು ಹಾಕಿದ ಅವರು, ವಾಲ್ಮೀಕಿ ಹಗರಣ ಮುಖ್ಯಮಂತ್ರೀಗಳೇ ಒಪ್ಪಿಕೊಂಡಿದ್ದಾರೆ. ಈ ಹಗರಣದಲ್ಲಿ ಕೆಪಿಸಿಸಿ ಅಧ್ಯಕ್ಷರು ಇದ್ದಾರೆ, ರಾಹುಲ್ ಗಾಂಧಿ ಇದರ ಹಿಂದೆ ಇದ್ದಾರೆ ಎಂದು ದೂರಿದರು.

‘ಮುಡಾ’ ವಿಚಾರಕ್ಕೆ ಹೋರಾಟ ಮಾಡುತ್ತಿರುವ ಯಡಿಯೂರಪ್ಪ ಸಹೋದರಿಯ ಮಕ್ಕಳಿಗೆ ಎಷ್ಟು ನಿವೇಶನಗಳಿವೆ ಎಂಬುದುನ್ನು ಖುದ್ದು ಯಡಿಯೂರಪ್ಪನವರೇ ದಾಖಲೆ ಬಿಡುಗಡೆ ಮಾಡಲಿ’ ಎಂದು ಯತ್ನಾಳ್, ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದರು.

Tags

MLA YatnalYatnalಯತ್ನಾಳ್D.K.SivakumarVijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X