Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ |...

ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ | 41.4 ಲಕ್ಷ ರೂ. ನಗದು, 6.54 ಕೆ.ಜಿ. ಚಿನ್ನದ ಬ್ಯಾಗ್‌ ಪತ್ತೆ

ವಾರ್ತಾಭಾರತಿವಾರ್ತಾಭಾರತಿ19 Sept 2025 7:11 PM IST
share
ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ | 41.4 ಲಕ್ಷ ರೂ. ನಗದು, 6.54 ಕೆ.ಜಿ. ಚಿನ್ನದ ಬ್ಯಾಗ್‌ ಪತ್ತೆ
ಮಹಾರಾಷ್ಷ್ರದ ಗ್ರಾಮದವೊಂದರ ಪಾಳು ಬಿದ್ದ ಮನೆಯ ಮೇಲ್ಚಾವಣಿಯಲ್ಲಿ ಅಡಗಿಸಿಟ್ಟಿದ್ದ ದುಷ್ಕರ್ಮಿಗಳು

ವಿಜಯಪುರ : ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಷ್ರದ ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರಲ್ಲಿ ಮೇಲ್ಚಾವಣಿಯಲ್ಲಿ ಬ್ಯಾಗ್‌ ಪತ್ತೆಯಾಗಿದ್ದು, ಈ ಬ್ಯಾಗ್‌ನಲ್ಲಿ ಒಟ್ಟು 41.4 ಲಕ್ಷ ರೂ. ನಗದು ಹಾಗೂ 6.54 ಕೆ.ಜಿ. ಚಿನ್ನಾಭರಣ (136 ಬಂಗಾರದ ಪ್ಯಾಕೇಟ್) ಸಿಕ್ಕಿದೆ.

ಮಹಾರಾಷ್ಟ್ರದ ಹುಲಜಂತಿ ಗ್ರಾಮದ ಶೀಟು ಹಾಕಿದ ಪಾಳು ಬಿದ್ದ ಮನೆಯ ಛಾವಣಿಯ ಮೇಲೆ ಚಿನ್ನ ಹಾಗೂ ನಗದು ತುಂಬಿದ ಬ್ಯಾಗ್ ಪತ್ತೆಯಾಗಿದೆ. ಚಡಚಣ ಬ್ಯಾಂಕ್ ದರೋಡೆ ಮಾಡಿದ ಆರೋಪಿಗಳು ಸಾರ್ವಜನಿಕರಿಂದ ತಪ್ಪಿಸಿಕೊಂಡು ಹೋಗುವಾಗ ಈ ಬ್ಯಾಗನ್ನು ಮುಚ್ಚಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

ಸೆ.16ರಂದು ಸಂಜೆ ಚಡಚಣದ ಎಸ್‌ಬಿಐ ಬ್ಯಾಂಕಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ಹಾಗೂ ಅಲ್ಲಿದ್ದ ಗ್ರಾಹಕರನ್ನು ಹೆದರಿಸಿ ಸುಮಾರು 1.4 ಕೋಟಿ ರೂ. ನಗದು ಹಾಗೂ 20 ಕೆ.ಜಿ.ಯಷ್ಟಿದ್ದ ಚಿನ್ನವನ್ನು ಲೂಟಿ ಮಾಡಿದ್ದರು.

ದರೋಡೆಕೋರರು ಬಳಸಿದ್ದ ಒಂದು ವಾಹನವನ್ನು ಪೊಲೀಸರು ಎರಡೂವರೆ ಗಂಟೆಗಳಲ್ಲಿ ಪತ್ತೆ ಹಚ್ಚಿದ್ದರು. ದರೋಡೆಕೋರನೊಬ್ಬ ಕಾರನ್ನು ಮಹಾರಾಷ್ಟ್ರದ ಮಂಗಳವೇಡೆ ತಾಲೂಕಿನ ಹುಲಜಂತಿ ಗ್ರಾಮದ ಬಳಿ ತೆಗೆದುಕೊಂಡು ಹೋದಾಗ ಸಣ್ಣ ಅಪಘಾತ ಸಂಭವಿಸಿ ಸ್ಥಳೀಯರೊಂದಿಗೆ ಜಗಳವಾಗಿದೆ. ಈ ಸಂದರ್ಭದಲ್ಲಿ ಆತ ಪಿಸ್ತೂಲ್ ತೋರಿಸಿ ಹೆದರಿಸಿ ಬ್ಯಾಗನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿತ್ತು.

ಪೊಲೀಸರು ಕಾರು ಜಪ್ತಿ ಮಾಡಿದಾಗ 1.3 ಲಕ್ಷ ನಗದು ಹಾಗೂ 21 ಬಂಗಾರದ ಪ್ಯಾಕೇಟ್ಗಳು ಸಿಕ್ಕಿದ್ದವು. ಅಪರಾಧ ಕೃತ್ಯಕ್ಕೆ ಬಳಸಿದ ವಾಹನಗಳು ಕಳ್ಳತನ ಮಾಡಿದ ವಾಹನಗಳಾಗಿದ್ದು, ನಂಬರ್ ಪ್ಲೇಟ್ ಬದಲಿಸಿ ಈ ಕೃತ್ಯ ನಡೆಸಲಾಗಿದೆ. ಈ ಕುರಿತು ಮಹಾರಾಷ್ಟ್ರ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಪ್ರಕರಣವನ್ನು ಬೇಧಿಸುವುದಕ್ಕಾಗಿ ವಿಜಯಪುರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ 8 ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X