Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯಪುರ | ಖಾಸಗಿ ಆಸ್ತಿಯನ್ನು ವಕ್ಫ್...

ವಿಜಯಪುರ | ಖಾಸಗಿ ಆಸ್ತಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸುತ್ತಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್

"ತಪ್ಪು ವದಂತಿಗಳಿಗೆ ಕಿವಿಗೊಡಬೇಡಿ"

ವಾರ್ತಾಭಾರತಿವಾರ್ತಾಭಾರತಿ27 Oct 2024 11:15 AM IST
share
ವಿಜಯಪುರ | ಖಾಸಗಿ ಆಸ್ತಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸುತ್ತಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ಇಂದೀಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ತಪ್ಪು ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡದಂತೆ ಮನವಿ ಮಾಡಿಕೊಂಡ ಜಿಲ್ಲಾಧಿಕಾರಿಗಳು, ಯಾವುದೇ ವ್ಯಕ್ತಿಯ, ಖಾಸಗಿ ಆಸ್ತಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸ್ಪಷ್ಟನೆ ನೀಡಿದ್ದಾರೆ.

1974ರಲ್ಲಿ ವಕ್ಫ್ ಮಂಡಳಿಯಿಂದ ಹೊರಡಿಸಿದ ಗೆಜೆಟ್ ನೋಟಿಫಿಕೇಶನ್ ಪ್ರಕಾರ ಇರುವ ಆಸ್ತಿಗಳನ್ನು ಕಂದಾಯ ದಾಖಲೆಗಳಲ್ಲಿ ಇಂದೀಕರಣಕ್ಕಾಗಿ ಪಟ್ಟಿ ಒದಗಿಸಲಾಗಿದ್ದು, ಇದರನ್ವಯ ಖಾತೆ ಬದಲಾವಣೆಗೆ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ಸಾಮಾನ್ಯವಾಗಿ ಯಾವುದೇ ಒಂದು ಆಸ್ತಿಯ ಹಕ್ಕು ಬದಲಾವಣೆಯಲ್ಲಿ ಕೈಗೊಳ್ಳುವ ಕ್ರಮಗಳ ಪ್ರಕಾರವೇ ಈ ವಕ್ಪ್ ಆಸ್ತಿ ಇಂದೀಕರಣಕ್ಕಾಗಿ ಸಂಬಂಧಪಟ್ಟ ರೈತರು ಅಥವಾ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದ್ದು, ಆಸ್ತಿ ಮಾಲೀಕರು- ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಹೊಂದಿರುವುದಿಲ್ಲ. ಯಾವುದೇ ಖಾಸಗಿ ವ್ಯಕ್ತಿ-ಸಂಸ್ಥೆ, ಸರ್ಕಾರಿ ಸಂಸ್ಥೆಯಾಗಲಿ ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳನ್ನು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿದ ನಂತರ ಕೂಲಂಕೂಷವಾಗಿ ಪರಿಶೀಲನೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಕೆಲವೊಂದು ಆಸ್ತಿ ಮಾಲೀಕರಿಗೆ ನೋಟಿಸ್ ನೀಡದೆಯೇ ಆರ್.ಟಿ.ಸಿ.ಯಲ್ಲಿ ಏನಾದರೂ ಬದಲಾವಣೆಯಾಗಿದ್ದಲ್ಲಿ ಸಂಬಂಧಿಸಿದ ರೈತರು-ಆಸ್ತಿ ಮಾಲೀಕರು ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲು ಅವಕಾಶ ಇರುತ್ತದೆ. ಹಾಗಾಗಿ ನೋಟಿಸ್ ಬಂದ ತಕ್ಷಣ ತಮ್ಮ ಆಸ್ತಿಯ ಖಾತೆ ಬದಲಾವಣೆಯಾಗಿದೆ ಎಂಬ ಆತಂಕ-ಭಯ ಪಡುವ ಅವಶ್ಯಕತೆ ಇಲ್ಲ. ನೋಟಿಸ್ ಬಂದಲ್ಲಿ, ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ತಹಶೀಲ್ದಾರ ಕಚೇರಿಯಲ್ಲಿ ಒದಗಿಸಿ ಮಾಹಿತಿ ನೀಡಬೇಕು. ದಾಖಲೆಗಳನ್ನು ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ 1500 ಎಕರೆ ರೈತರ ಜಮೀನುಗಳನ್ನು ಈಗಾಗಲೇ ಅಧಿಕಾರಿಗಳು ವಕ್ಪ್ ಮಂಡಳಿಗೆ ವರ್ಗಾಯಿಸಲಾಗಿದೆ ಎಂಬ ಸುಳ್ಳು ವದಂತಿಗೆ ಸಂಬಂಧಿಸಿದಂತೆ ಸ್ಪಷ್ಟಣೆ ನೀಡಿದ ಅವರು, ಹೊನವಾಡ ಗ್ರಾಮದಲ್ಲಿನ ರೈತರಿಗೆ- ಆಸ್ತಿ ಮಾಲೀಕರಿಗೆ ಈವರೆಗೆ ಯಾವುದೇ ನೋಟಿಸ್ ಜಾರಿ ಮಾಡಿರುವುದಿಲ್ಲ. ಕಳೆದ ಒಂದು ತಿಂಗಳಿನಿಂದ ಯಾವುದೇ ಆಸ್ತಿಯನ್ನು ಇಂದೀಕರಣ ಮಾಡಿ, ವಕ್ಫ್‍ಗೆ ನೀಡಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಅದರಂತೆ ಹೊನವಾಡದಲ್ಲಿ 1500 ಎಕರೆ ವಕ್ಫ್ ಆಸ್ತಿ ಇರುವುದಿಲ್ಲ. ಗೆಜೆಟ್ ನೋಟಿಫಿಕೇಶನ್ ಪ್ರಕಾರ 10-15 ಎಕರೆ ಮಾತ್ರ ವಕ್ಫ್ ಆಸ್ತಿ ಇರುವುದು ಕಂಡು ಬಂದಿದೆ. ಅದು ಕೂಡ ಈ ಎಲ್ಲ ಆಸ್ತಿ ಮಸೀದಿ, ಈದ್ಗಾ ಮೈದಾನ, ಖಬರಸ್ಥಾನ ಇರುವುದರಿಂದ ಹೊನವಾಡ ಗ್ರಾಮದ ರೈತರು ಈ ಕುರಿತು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಏನಾದರೂ ನೋಟಿಸ್ ಬಂದರೂ ಕೂಡ ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದ್ದಲ್ಲಿ ಈ ಕುರಿತು ಕೂಲಂಕೂಷವಾಗಿ ಪರಿಶೀಲನೆ ನಡೆಸಿದ ನಂತರವೇ ಮುಂದಿನ ಕ್ರಮ ವಹಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X