Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. VIJAYAPURA | ರೋಗಿ ಮೃತ್ಯು: ತಾಳಿಕೋಟೆ...

VIJAYAPURA | ರೋಗಿ ಮೃತ್ಯು: ತಾಳಿಕೋಟೆ ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ14 Dec 2025 11:06 AM IST
share
VIJAYAPURA | ರೋಗಿ ಮೃತ್ಯು: ತಾಳಿಕೋಟೆ ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ
ಮೃತರ ಕುಟುಂಬಸ್ಥರಿಂದ ಆಸ್ಪತ್ರೆ ಎದುರು ಪ್ರತಿಭಟನೆ

ವಿಜಯಪುರ: ಸರಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು ಕರ್ತವ್ಯದಲ್ಲಿಲ್ಲದ ಕಾರಣ ರೋಗಿಯೊಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಸೂಫಿ ಅಬ್ದುಲ್ ಬೇಪಾರಿ ಮೃತ ರೋಗಿ. ಇವರು ತಾಳಿಕೋಟೆ ಸರಕಾರಿ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಕಾರಣ ಮೃತಪಟ್ಟಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಮುಂಜಾವ ಸೂಫಿ ಅಬ್ದುಲ್ ಬೇಪಾರಿಗೆ ತೀವ್ರ ಕೆಮ್ಮು, ನೆಗಡಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ತಾಳಿಕೋಟೆಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಯಾವುದೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಿಲ್ಲ. ತುಂಬಾ ಹೊತ್ತಾದರೂ ವೈದ್ಯರು ಆಗಮಿಸದ ಕಾರಣ ಆಸ್ಪತ್ರೆಯ ಸ್ಟಾಫ್ ನರ್ಸ್ ನವರು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು, ಆದರೆ ರಸ್ತೆ ಮಾರ್ಗದಲ್ಲಿ ಸೂಫಿ ಅಬ್ದುಲ್ ಬೇಪಾರಿ ಮೃತಪಟ್ಟಿದ್ದಾರೆ ಎಂದು ಮೃತರ ಕುಟುಂಬಸ್ಥರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮೃತ ಸೂಫಿಯ ಪತ್ನಿ, ನಮಗೆ ಚಿಕ್ಕ ಮಕ್ಕಳಿದ್ದು, ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದೆವು. ನನ್ನ ಪತಿಗೆ ಬೆಳಗ್ಗೆ 4ಕ್ಕೆ ಇದ್ದಕ್ಕಿದ್ದಂತೆ ನೆಗಡಿ, ಕೆಮ್ಮು, ಎದೆ ಭಾಗದಲ್ಲಿ ಉರಿ ಕಾಣಿಸಿಕೊಂಡು ಅಸ್ವಸ್ಥರಾದಾಗ ಅವರನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದೇನೆ. ಆಸ್ಪತ್ರೆಯ ಒಳಗೆ ಹೋಗಿ ನೋಡಿದಾಗ ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಇರಲಿಲ್ಲ. ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ನನ್ನ ಪತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ

ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ನಡೆಸಿದರು. ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ರೋಗಿ ಸಾವಿಗೆ ಆಸ್ಪತ್ರೆಯ ವೈದ್ಯಾಧಿಕಾರಿಯ ನಿರ್ಲಕ್ಷ್ಯ ಕಾರಣ. ಸಂಬಂಧಪಟ್ಟ ವೈದ್ಯರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ಡಾ ವಿನಯಾ ಹೂಗಾರ ಆಸ್ಪತ್ರೆಗೆ ಧಾವಿಸಿ ಮೃತನ ಕುಟುಂಬಸ್ಥರು ಮತ್ತು ಸಾರ್ವಜನಿಕರ ಮನವೊಲಿಸುವ ಪ್ರಯತ್ನ ನಡೆಸಿದರು.

ಘಟನೆಯ ಬಗ್ಗೆ ಪರಿಶೀಲಿಸಿ ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ತಹಶೀಲ್ದಾರ್ ಹೇಳಿದರು ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.

ಪಿಎಸ್ಸೈ ಜ್ಯೋತಿ ಖೋತ ಸ್ಥಳಕ್ಕ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.

ರೋಗಿಗೆ ಹೃದಯಾಘಾತವಾಗಿದ್ದು, ಅವರಿಗೆ ಸೂಕ್ತ ಸಮಯದಲ್ಲಿ ಕಾಳಜಿ ವಹಿಸಿ ಚಿಕಿತ್ಸೆ ನೀಡಿದ್ದರೆ ಅಥವಾ ಬೇರೆ ಆಸ್ಪತ್ರೆಗೆ ಸಕಾಲದಲ್ಲಿ ಕಳುಹಿಸಿಕೊಟ್ಟಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತೆಂದು ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ, ಡಾ ಶ್ರೀಶೈಲ ಹುಕ್ಕೇರಿ, ಮುಹಿನುದ್ದೀನ ಬೇಪಾರಿ, ಶಫೀಕ್ ಇನಾಂದಾರ,ಶಬ್ಬೀರ್ ಬೇಪಾರಿ, ಮೆಹಬೂಬ್ ಚೋರ್ಗಸ್ತಿ, ಸದ್ದಾಂ ಬೇಪಾರಿ, ನಿಸಾರ ಬೇಪಾರಿ, ಮಂಜೂರ ಬೇಪಾರಿ, ಹುಸೇನ್ ಜಮಾದಾರ, ಮುರ್ತಝ ಮೇತ್ರಿ, ರಫೀಕ್ ಬೇಪಾರಿ, ನದೀಂ ಕಡು, ಸದ್ದಾಂ ಬಾಗವಾನ, ಸದ್ದಾಂ ಮನಗೂಳಿ, ಗೋಪಾಲ ಕಟ್ಟಿಮನಿ, ಬಸ್ಸು ಕಟ್ಟಿಮನಿ, ಹುಸೇನ್ ಹಡಗಿನಾಳ, ಖಾಜಾಮೀನ ಬಾಗವಾನ, ಜಾಫರ್ ಬೇಪಾರಿ ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X