Vijayapura | ಲಾರಿ-ಸ್ಕೂಟರ್ ನಡುವೆ ಢಿಕ್ಕಿ; ಸ್ಥಳದಲ್ಲೇ ಸವಾರ ಮೃತ್ಯು

ವಿಜಯಪುರ : ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಗರದ ರಾಮನಗರ ಬಳಿ ನಡೆದಿದೆ.
ಮೃತರನ್ನು ನಿಂಗರಾಜು ಎಂದು ಗುರುತಿಸಲಾಗಿದೆ. ಇವರು ಮೂಲತಃ ಮಹಾರಾಷ್ಟ್ರದ ಜತ್ತ ತಾಲೂಕಿನ ನಿವಾಸಿಯಾಗಿದ್ದು, ಪ್ರಸ್ತುತ ವಿಜಯಪುರದ ಸಿಂದಗಿ ಬೈಪಾಸ್ ಬಳಿ ವಾಸಿಸುತ್ತಿದ್ದರು. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಮುಖ್ಯ ಕಾರಣ ಎಂದು ಹೇಳಲಾಗಿದೆ. ಅಪಘಾತ ಸಂಭವಿಸಿದ ತಕ್ಷಣವೇ ಲಾರಿ ಚಾಲಕ ತನ್ನ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




