Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕೆಎಎಸ್...

ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ: ಆರೋಪ

ಜಿ.ಮಹಾಂತೇಶ್,ಜಿ.ಮಹಾಂತೇಶ್,3 July 2023 8:38 AM IST
share
ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ: ಆರೋಪ

ಬೆಂಗಳೂರು, ಜು.೨: ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್ (ಕಿರಿಯ ಶ್ರೇಣಿ) ಅಧಿಕಾರಿಗಳನ್ನು ಯಾವುದೇ ಸಕಾರಣವಿಲ್ಲದೇ ಮತ್ತು ಅತಿ ವಿಶೇಷ ಸಂದರ್ಭವಿಲ್ಲದಿದ್ದರೂ ಅವಧಿಪೂರ್ವ ವರ್ಗಾವಣೆ ಮಾಡಿ ವರ್ಗಾವಣೆಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರಿಯಾಗಿರುವ ನಾಲ್ಕು ಪ್ರಕರಣಗಳನ್ನು "the-file.in''ಇದೀಗ ದಾಖಲೆ ಸಹಿತ ಹೊರಗೆಡವುತ್ತಿದೆ.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕ ಪರಿಶೋಧನೆ ವಿಭಾಗದಲ್ಲಿದ್ದ ಒಂದೇ ಹುದ್ದೆಗೆ ನಾಲ್ಕು ಮಂದಿ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿಯು ತೀವ್ರವಾಗಿ ಟೀಕಿಸಿದ್ದರ ಬೆನ್ನಲ್ಲೇ ಕೆಎಎಸ್ ಅಧಿಕಾರಿಗಳ ಅವಧಿಪೂರ್ವ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿರುವುದು ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಒಂದು ಹುದ್ದೆಗೆ ವರ್ಗಾವಣೆ ಆದ ಮೇಲೆ ಕನಿಷ್ಟ ಎರಡು ವರ್ಷಗಳವರೆಗೆ ಆ ಅಧಿಕಾರಿಯು ಆ ಹುದ್ದೆಯಲ್ಲಿ ಕಾರ್ಯನಿರ್ವಹಿಸಬೇಕು. ನಂತರದ ವರ್ಷಗಳಲ್ಲಿ ಇದನ್ನು ಬದಲಾಯಿಸಿ ಒಂದು ಆ ಅವಧಿಯನ್ನು ಒಂದು ವರ್ಷಕ್ಕೆ ಇಳಿಸಿದ್ದರು. ಈ ಸಂಬಂಧ ಯಾವುದೇ ನಿಯಮಗಳು ಇಲ್ಲದಿದ್ದರೂ ಮಾರ್ಗಸೂಚಿಗಳಿವೆ. ಎಲ್ಲ ಎ ಮತ್ತು ಬಿ ಗುಂಪಿನ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ೩ ವರ್ಷ, ಸಿ ಗುಂಪಿನ ಹುದ್ದೆಗಳಿಗೆ ೪ ವರ್ಷ, ಡಿ ಗುಂಪಿನ ಹುದ್ದೆಗಳಿಗೆ 7 ವರ್ಷ ಎಂದು ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿದೆ.

ಅತಿ ವಿಶೇಷ ಪ್ರಕರಣಗಳಲ್ಲಿ ಮಾತ್ರ ಅವಧಿಪೂರ್ವವಾಗಿ ವರ್ಗಾವಣೆ ಮಾಡಲು ಮುಖ್ಯಮಂತ್ರಿಗೆ ಅಧಿಕಾರವಿದೆ.

ಆದರೆ, ೨೦೨೩ರ ಜೂನ್ ೨೩ರಂದು ಹೊರಡಿಸಿರುವ ವರ್ಗಾವಣೆ ಅಧಿಸೂಚನೆಯ ಪ್ರಕಾರ ನಾಲ್ಕು ಕೆಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಕಾರಣಗಳಾಗಲಿ, ಈ ಸಂಬಂಧ ತೆರೆದಿರುವ ಕಡತದಲ್ಲಿಯೂ ಸಕಾರಣಗಳು, ವರ್ಗಾವಣೆಗೆ ಯಾವುದೇ ಸಮರ್ಥನೀಯ ಅಂಶಗಳಾಗಲೀ ಇಲ್ಲ. ಮತ್ತು ಅತಿ ವಿಶೇಷ ಸಂದರ್ಭವಿದೆ ಎಂಬ ಅಂಶವನ್ನೂ ಉಲ್ಲೇಖಿಸಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಕೆಎಎಸ್ (ಕಿರಿಯ ಶ್ರೇಣಿ) ವೃಂದದ ಅಧಿಕಾರಿಗಳನ್ನು ಅವಧಿಪೂರ್ವವಾಗಿ ವರ್ಗಾವಣೆ ಮಾಡಿರುವ ಸಂಬಂಧ "the-file.in"ಗೆ ಮಹತ್ವದ ಟಿಪ್ಪಣಿ ಹಾಳೆಗಳು ಲಭ್ಯವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ ನಂತರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ೪ ಮಂದಿ ಕೆಎಎಸ್ ಅಧಿಕಾರಿಗಳನ್ನು ಅವಧಿಪೂರ್ವವಾಗಿ ವರ್ಗಾವಣೆಗೊಳಿಸಿ 2023ರ ಜೂನ್ ೨೩ ರಂದು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (ಧಾರವಾಡ) ವಿಶೇಷ ಭೂಸ್ವಾಧೀನಾಧಿಕಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕೆಎಡಿಬಿ (ಬೆಂಗಳೂರು) ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಗೆ ನಾಲ್ವರು ಕೆಎಎಸ್ (ಕಿರಿಯ ಶ್ರೇಣಿ) ಅಧಿಕಾರಿಗಳು ಮೂರ್ನಾಲ್ಕು ತಿಂಗಳ ಹಿಂದೆಯಷ್ಟೇ ವರ್ಗಾವಣೆ ಮಾಡಲಾಗಿತ್ತಾದರೂ ಇದೀಗ ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನವಲಗುಂದ ಶಾಸಕರ ಶಿಫಾರಸಿನ ಮೇರೆಗೆ ಈ ನಾಲ್ವರನ್ನೂ ಅವಧಿಪೂರ್ವ ವರ್ಗಾವಣೆಗೊಳಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಮಮತಾ ಹೊಸಗೌಡರ (2022 ಮೇ 9), ಪ್ರಮೋದ್ ಎಚ್.ಪಿ. (2023ರ ಮಾರ್ಚ್ 4), ಸೋಮಪ್ಪಕಡಕೋಳ (೨೦೨೩ರ ಮಾರ್ಚ್ ೮), ಅಪೂರ್ವ ಬಿದರಿ (2023ರ ಮಾರ್ಚ್ 23) ರಂದು ಕ್ರಮವಾಗಿ ವಿಶೇಷ ಭೂ ಸ್ವಾಧೀನಾಧಿಕಾರಿ, ಬಿಡಿಎ ಉಪ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿತ್ತು. ಆದರೆ ವರ್ಗಾವಣೆಗೊಂಡ ನಾಲ್ಕೇ ನಾಲ್ಕು ತಿಂಗಳಲ್ಲಿ ಈ ಅಧಿಕಾರಿಗಳನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ನವಲಗುಂದ ಶಾಸಕರ ಶಿಫಾರಸಿನಂತೆ ಎತ್ತಂಗಡಿ ಮಾಡಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಮಮತಾ ಹೊಸಗೌಡರ ಜಾಗಕ್ಕೆ ನವೀನ ಎಚ್.ವಿ.ಅವರನ್ನು ವರ್ಗಾಯಿಸಬೇಕು ಎಂದು ನವಲಗುಂದ ಶಾಸಕರು ಶಿಫಾರಸು ಮಾಡಿದ್ದರು. ಅದೇ ರೀತಿ ಬಿಡಿಎ ಉಪ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಸೋಮಪ್ಪ ಕಡಕೋಳ ಅವರ ಜಾಗಕ್ಕೆ ಉಮೇಶ್ ಡಿ.ಎಸ್.ಎಂಬವರನ್ನು ವರ್ಗಾವಣೆ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೆಐಎಡಿಬಿ (ಬೆಂಗಳೂರು) ವಿಶೇಷ ಭೂ ಸ್ವಾಧೀನಾಧಿಕಾರಿ ಹುದ್ದೆಯಲ್ಲಿದ್ದ ಅಪೂರ್ವ ಬಿದರಿ ಅವರ ಜಾಗಕ್ಕೆ ಕಿಶನ್ ಕಲಾಲ್ ಅವರನ್ನು ವರ್ಗಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ನಾಲ್ವರು ಕೆಎಎಸ್ ಅಧಿಕಾರಿಗಳ ಅವಧಿಪೂರ್ವ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆ ದೊರಕಿದ ಕೆಲವೇ ದಿನಗಳಲ್ಲಿ ೨೦೨೩ರ ಜೂನ್ ೨೩ರಂದು ವರ್ಗಾವಣೆ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

‘ಅಧಿಕಾರಿಯನ್ನು ಸಕಾರಣವಿಲ್ಲದೇ ಎರಡು ತಿಂಗಳುಗಳಲ್ಲಿ ವರ್ಗಾಯಿಸಿದ್ದರೆ ಇದು ನಿಸ್ಸಂದೇಹವಾಗಿ ಉಲ್ಲಂಘನೆ. ಅತಿ ವಿಶೇಷ ಸಂದರ್ಭಗಳಲ್ಲಿ ಮಾತ್ರ ಮಾರ್ಗದರ್ಶಿ ಸೂತ್ರ ಮೀರಿ ಮುಖ್ಯಮಂತ್ರಿಯವರು ವರ್ಗಾವಣೆ ಮಾಡಬೇಕು. ಆದರೆ ಈ ಸಂದರ್ಭದಲ್ಲಿ ಹಿಂದಿನ ಸರಕಾರ ಮಾರ್ಚ್ ೨೩ರ ವರ್ಗಾವಣೆ ಮಾಡಿತ್ತು. ಈ ಕಾರಣಕ್ಕಾಗಿ ನೂತನ ಸರಕಾರ ಅಧಿಕಾರ ಚಲಾಯಿಸಿದಂತಿದೆ. ಸಾಮಾನ್ಯವಾಗಿ ಸರಕಾರಗಳು ಬದಲಾಗುವ ಹಂತದಲ್ಲಿ ಮತ್ತು ಸಾಮಾನ್ಯ ವರ್ಗಾವಣೆಯ ಅತಿ ನಿಕಟ ಪೂರ್ವದಲ್ಲಿ ಆಗುವ ವರ್ಗಾವಣೆಗಳು (ನಿರೀಕ್ಷಣಾ ಅವಧಿಯ ಸ್ಥಳನಿಯುಕ್ತಿ ಹೊರತುಪಡಿಸಿ) ಸಂಶಯದ ದೃಷ್ಟಿಯಲ್ಲಿಯೇ ನೋಡಬೇಕು,’ ಎನ್ನುತ್ತಾರೆ ಹಿರಿಯ ಕೆಎಎಸ್ ಅಧಿಕಾರಿಯೊಬ್ಬರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕಪರಿಶೋಧನಾಕಾರಿ ಒಂದು ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಅಧಿಕಾರಿಗಳಿಗೆ ಶಿಫಾರಸು ಟಿಪ್ಪಣಿ ಹೊರಡಿಸಿದ್ದರು. ಇದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿಯು ತೀವ್ರವಾಗಿ ಟೀಕಿಸಿದ್ದರು. ವರ್ಗಾವಣೆ ಹಿಂದೆ ಇರುವವರು ಯಾರು ಆ ಅತೀಂದ್ರ ಎಂದು ಟ್ವೀಟ್ ಕೂಡ ಮಾಡಿದ್ದರು.

ಸರಕಾರಿ ಅಧಿಕಾರಿ, ನೌಕರರ ವರ್ಗಾವಣೆಗೆ ಜೂನ್ ೩೦ ಕಡೇ ದಿನ ಎಂದು ಹೇಳಿದ್ದ ಸರಕಾರವು ಕಡೇ ಗಳಿಗೆಯಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಇದೇ ಜುಲೈ ೩ರವರೆಗೂ ವಿಸ್ತರಿಸಿರುವುದನ್ನು ಸ್ಮರಿಸಬಹುದು.

ಅವಧಿಪೂರ್ವ ಎಂದಿದ್ದ ಡಿಪಿಎಆರ್ ಕಾರ್ಯದರ್ಶಿ

ಈ ನಾಲ್ಕು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2023ರ ಜೂನ್ 14ರಂದು ಮುಖ್ಯಮಂತ್ರಿ ಅನುಮೋದನೆಗೆ ಕಡತ ಮಂಡಿಸಿತ್ತು. ಈ ಕಡತವನ್ನು ಪರಿಶೀಲಿಸಿದ್ದ ಡಿಪಿಎಆರ್ ಕಾರ್ಯದರ್ಶಿ ಎಂ.ಎಸ್.ಶ್ರೀಕರ್ ಅವರು ‘ಕೆಎಎಸ್ ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸುವ ಕಡತ ಮಂಡಿಸಲಾಗಿದೆ. ಆದರೆ ಬಹುತೇಕ ಪ್ರಕರಣಗಳು ಅವಧಿಪೂರ್ವವಾಗಿದೆ,’ ಎಂದು ಟಿಪ್ಪಣಿ ಹಾಳೆಯಲ್ಲಿ ನವೂದಿಸಿದ್ದರು. ಆದರೆ ಇದನ್ನು ಬದಿಗಿರಿಸಿ ಅವಧಿಪೂರ್ವ ವರ್ಗಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X