Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಜ್ಯದ ಬರ ಪೀಡಿತ ತಾಲೂಕುಗಳ ಸಮೀಕ್ಷೆ:...

ರಾಜ್ಯದ ಬರ ಪೀಡಿತ ತಾಲೂಕುಗಳ ಸಮೀಕ್ಷೆ: 10,117 ಬೆಳೆ ತಾಕುಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿ

ಜಿ.ಮಹಾಂತೇಶ್ಜಿ.ಮಹಾಂತೇಶ್8 Sept 2023 8:47 AM IST
share
ರಾಜ್ಯದ ಬರ ಪೀಡಿತ ತಾಲೂಕುಗಳ ಸಮೀಕ್ಷೆ: 10,117 ಬೆಳೆ ತಾಕುಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿ

ಬೆಂಗಳೂರು: ರಾಜ್ಯದ ಬರ ಪೀಡಿತ ಎಂದು ಪ್ರಾಥಮಿಕವಾಗಿ ಗುರುತಿಸಿದ್ದ ತಾಲೂಕುಗಳ ಪೈಕಿ 14,226 ಬೆಳೆ ತಾಕು ಸ್ಥಳಗಳಲ್ಲಿ ನಡೆಸಿದ್ದ ಬೆಳೆ ಸಮೀಕ್ಷೆ ಪ್ರಕಾರ 10,117 ಬೆಳೆ ತಾಕುಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ವಾಸ್ತವಿಕ ಸಂಗತಿ ಆಧಾರದ ಮೇಲೆ ನಡೆಸಿರುವ ಸಮೀಕ್ಷೆ ಮತ್ತು ನೈಸರ್ಗಿಕ ವಿಕೋಪ ಪರಿಹಾರ ಕೇಂದ್ರವು ನಡೆಸಿರುವ ಸಮೀಕ್ಷೆಯ ಪ್ರಕಾರ ಬರ ಪರಿಸ್ಥಿತಿಯ ‘ಗಂಭೀರತೆ’ ಕುರಿತು ಒಮ್ಮತದಿಂದ ಕೂಡಿದ ಅಭಿಪ್ರಾಯಗಳನ್ನು ನೀಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

ವಾಸ್ತವಿಕ ಸಂಗತಿಗಳ ಆಧಾರದ ಮೇಲೆ ಕೆಲ ತಾಲೂಕುಗಳು ಗಂಭೀರ ಪರಿಸ್ಥಿತಿಯಲ್ಲಿವೆ ಎಂದು ತಿಳಿದು ಬಂದಿದ್ದರೇ ನೈಸರ್ಗಿಕ ವಿಕೋಪ ಪರಿಹಾರ ಕೇಂದ್ರವು ನಡೆಸಿದ ಸಮೀಕ್ಷೆ ಪ್ರಕಾರ ಅವೇ ತಾಲೂಕುಗಳು ‘ಮಧ್ಯಮ’ ಹಂತದಲ್ಲಿವೆ.

ಮುಂಗಾರು ಜೂನ್ 1ರಿಂದ ಸೆಪ್ಟಂಬರ್ 2ನೇ ಅವಧಿಯಲ್ಲಿ ಬರ ಪರಿಸ್ಥಿತಿ ಕಂಡು ಬಂದಿರುವ ಹೆಚ್ಚುವರಿ 83 ತಾಲೂಕುಗಳ ಪಟ್ಟಿಯೂ ಹೊರಬಿದ್ದ ಬೆನ್ನಲ್ಲೇ ಇದೀಗ ಗ್ರಾಮಗಳಲ್ಲಿನ ಬೆಳೆ ಹಾನಿಗೆ ಸಂಬಂಧಿಸಿದಂತೆ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ವಾಸ್ತವಿಕ ಸತ್ಯವನ್ನು ಅಂಕಿ ಅಂಶಗಳ ಸಮೇತ ವಿವರವಾದ ವರದಿಯನ್ನು ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ನೀಡಿದೆ. ಇದರ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಬರಪೀಡಿತ ಹಳ್ಳಿಗಳ ಪೈಕಿ ಶೇ.33ಕ್ಕಿಂತ ಕಡಿಮೆ ಹಾನಿಯಾಗಿರುವ ಪಟ್ಟಿಯಲ್ಲಿ 539 ಹಳ್ಳಿಗಳಿವೆ. ಶೇ.33ರಿಂದ ಶೇ.50ರ ಗಡಿವರೆಗೆ 3,833 ಹಳ್ಳಿಗಳಲ್ಲಿ ಬೆಳೆ ಹಾನಿಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.70ರಷ್ಟು ಬೆಳೆಹಾನಿಯಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತನ್ನ ಅಂಕಿ ಅಂಶಗಳಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

ವಾಸ್ತವಿಕ ಸಂಗತಿಗಳ ಆಧಾರದ ಮೇರೆಗೆ ಒಟ್ಟು 62 ತಾಲೂಕುಗಳು ಗಂಭೀರ ಪರಿಸ್ಥಿತಿಯಲ್ಲಿವೆ. ವಾಸ್ತವಿಕ ಸಂಗತಿಗಳು ಮತ್ತು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಂಟಿಯಾಗಿ ಮಾಡಿರುವ ಪಟ್ಟಿ ಪ್ರಕಾರ 27 ತಾಲೂಕುಗಳು, ವಾಸ್ತವಿಕ ಸಂಗತಿಗಳ ಆಧಾರದ ಮೇರೆಗೆ ಗಂಭೀರ ಪರಿಸ್ಥಿತಿ ಎಂದು ಪಟ್ಟಿಯಾಗಿರುವ ತಾಲೂಕುಗಳ ಪೈಕಿ ನೈಸರ್ಗಿಕ ವಿಕೋಪ ಪರಿಹಾರ ಕೇಂದ್ರದ ಪ್ರಕಾರ 35 ತಾಲೂಕುಗಳು ಮಧ್ಯಮ ಸ್ಥಿತಿಯಲ್ಲಿವೆ. ಅದೇ ರೀತಿ ನೈಸರ್ಗಿಕ ವಿಕೋಪ ಪರಿಹಾರ ಕೇಂದ್ರದ ಪ್ರಕಾರ ಗಂಭೀರ ಪರಿಸ್ಥಿತಿ ಎಂದು ಪಟ್ಟಿಯಾಗಿರುವ ತಾಲೂಕುಗಳು, ವಾಸ್ತವಿಕ ಸಂಗತಿಗಳ ಪ್ರಕಾರ 11 ತಾಲೂಕುಗಳನ್ನು ಕೆಳದರ್ಜೆಗಿಳಿಸಿರುವುದು, 49 ತಾಲೂಕುಗಳನ್ನು ಮಧ್ಯಮ ಹಂತದ ಪಟ್ಟಿಗೆ ಅರ್ಹವಾಗಿಸಿರುವುದು ಗೊತ್ತಾಗಿದೆ.

ಒಟ್ಟು 1,519 ಹಳ್ಳಿಗಳ 14,226 ತಾಕು ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದು ಈ ಪೈಕಿ 10,117 ತಾಕು ಪ್ರದೇಶಗಳಲ್ಲಿ ಶೇ. 50ಕ್ಕಿಂತಲೂ ಹೆಚ್ಚು ಬೆಳೆ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬಾಗಲಕೋಟೆಯ ಬಾದಾಮಿ ತಾಲೂಕಿನಲ್ಲಿ 12 ಹಳ್ಳಿಗಳ 131 ಬೆಳೆ ತಾಕು ಸ್ಥಳಗಳಲ್ಲಿ ವಾಸ್ತವಿಕ ಸಮೀಕ್ಷೆ ನಡೆಸಲಾಗಿತ್ತು. ಇದರಲ್ಲಿ 113 ತಾಕು ಪ್ರದೇಶಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚಿನ ಬೆಳೆ ಹಾನಿ ಸಂಭವಿಸಿರುವುದು ಗೊತ್ತಾಗಿದೆ. ವಾಸ್ತವಿಕ ಸಂಗತಿಗಳ ಪ್ರಕಾರ ಈ ತಾಕು ಪ್ರದೇಶಗಳು ಗಂಭೀರ ಸ್ಥಿತಿಯಲ್ಲಿದ್ದರೇ, ನೈಸರ್ಗಿಕ ವಿಕೋಪ ಪರಿಹಾರ ಕೇಂದ್ರದ ಪ್ರಕಾರ ಮಧ್ಯಮ ಸ್ಥಿತಿಯಲ್ಲಿದೆ. ಬಾಗಲಕೋಟೆಯ ಬೀಳಗಿ, ಬಾಗಲಕೋಟೆ, ಗುಳೇದಗುಡ್ಡ, ಹುನಗುಂದ, ಇಳಕಲ್, ಜಮಖಂಡಿ, ಮುಧೋಳ, ರಬಕವಿಬನಹಟ್ಟಿಯ 830 ತಾಕು ಸ್ಥಳಗಳ ಪೈಕಿ 712 ಕಡೆಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚಿನ ಪ್ರಮಾಣದ ಬೆಳೆ ಹಾನಿ ಸಂಭವಿಸಿರುವುದು ವರದಿಯಿಂದ ತಿಳಿದು ಬಂದಿದೆ.

ಬರ ಪರಿಸ್ಥಿತಿ ಕಂಡು ಬಂದಿರುವ ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಸಲುವಾಗಿ ತಾಲೂಕುಗಳ ಪಟ್ಟಿಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ಡಿಎಂಸಿ) ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಒದಗಿಸಿತ್ತು.

2023ರ ಸೆಪ್ಟಂಬರ್ 2ರ ಅಂತ್ಯಕ್ಕೆ ಹೆಚ್ಚುವರಿಯಾಗಿ ಬರ ಪರಿಸ್ಥಿತಿ ಕಂಡು ಬಂದಿರುವ 83 ತಾಲೂಕುಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಂಟಿ ಸಮೀಕ್ಷೆ ಕೈಗೊಂಡು ದೃಢೀಕೃತ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಬಳ್ಳಾರಿ ಮತ್ತು ಸಿರಗುಪ್ಪದ 17 ಹಳ್ಳಿಗಳ 165 ತಾಕು ಪ್ರದೇಶಗಳ ಪೈಕಿ 163, ಬೆಳಗಾವಿಯ 72 ಹಳ್ಳಿಗಳಲ್ಲಿನ ಬೆಳೆ ತಾಕನ್ನು ಸಮೀಕ್ಷೆಗೆ ಒಳಪಡಿಸಿದ್ದ 932ರಲ್ಲಿ 464, ಬೆಂಗಳೂರು ಗ್ರಾಮಾಂತರದ 54 ಹಳ್ಳಿಗಳ 348 ತಾಕಿನ ಪೈಕಿ 318, ಬೆಂಗಳೂರು ನಗರ ಜಿಲ್ಲೆಯ 42 ಹಳ್ಳಿಗಳ 269 ತಾಕುಗಳಲ್ಲಿ 109, ಬೀದರ್ ಜಿಲ್ಲೆಯ 16 ಹಳ್ಳಿಗಳಲ್ಲಿ 162 ತಾಕುಗಳು, ಚಿಕ್ಕಬಳ್ಳಾಪುರದ 142 ಹಳ್ಳಿಗಳ 1.064 ತಾಕುಗಳಲ್ಲಿ 1,009, ಚಿಕ್ಕಮಗಳೂರಿನ 48 ಹಳ್ಳಿಗಳಲ್ಲಿನ 672 ತಾಕುಗಳಲ್ಲಿ 521, ಚಿತ್ರದುರ್ಗದ 70 ಹಳ್ಳಿಗಳಲ್ಲಿ 628 ತಾಕುಗಳ 475, ದಾವಣಗೆರೆಯ 39 ಹಳ್ಳಿಗಳ 321 ತಾಕುಗಳ 318, ಧಾರವಾಡದ 25 ಹಳ್ಳಿಗಳ 580 ತಾಕುಗಳಲ್ಲಿ 383, ಗದಗ್ನ 24 ಹಳ್ಳಿಗಳ 383 ತಾಕುಗಳ 277, ಹಾಸನದ 78 ಹಳ್ಳಿಗಳ 836 ತಾಕುಗಳ 104, ಹಾವೇರಿಯ 21 ಹಳ್ಳಿಗಳ 201 ತಾಕುಗಳ 199, ಕಲಬುರಗಿಯ 50 ಹಳ್ಳಿಗಳ 584 ತಾಕುಗಳ 349, ಕೊಡಗಿನ 24 ಹಳ್ಳಿಗಳ 157 ತಾಕುಗಳ 125, ಕೋಲಾರದ 112 ಹಳ್ಳಿಗಳ 584 ತಾಕುಗಳ 428, ಕೊಪ್ಪಳದ 48 ಹಳ್ಳಿಗಳ 1,293 ತಾಕುಗಳ 853, ಮಂಡ್ಯದ 38 ಹಳ್ಳಿಗಳ 206 ತಾಕುಗಳ 178, ಮೈಸೂರಿನ 31 ಹಳ್ಳಿಗಳ 207 ತಾಕುಗಳ 85, ರಾಯಚೂರಿನ 29 ಹಳ್ಳಿಗಳ 271 ತಾಕುಗಳ 101, ರಾಮನಗರ ಜಿಲ್ಲೆಯ 43 ಹಳ್ಳಿಗಳ 229 ತಾಕುಗಳ 218, ಶಿವಮೊಗ್ಗದ 158 ಹಳ್ಳಿಗಳ 943 ತಾಕುಗಳ 699, ತುಮಕೂರಿನ 158 ಹಳ್ಳಿಗಳ 1,258 ತಾಕುಗಳ 1,128, ಉತ್ತರ ಕನ್ನಡದ 47 ಹಳ್ಳಿಗಳ 494 ತಾಕುಗಳ 102, ವಿಜಯನಗರ ಜಿಲ್ಲೆಯ 12 ಹಳ್ಳಿಗಳ 67 ತಾಕುಗಳ 64, ವಿಜಯಪುರದ 30 ಹಳ್ಳಿಗಳ 482 ತಾಕುಗಳ 182, ಯಾದಗಿರಿಯ 19 ಹಳ್ಳಿಗಳ 197 ತಾಕುಗಳ 123 ತಾಕುಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚು ಬೆಳೆ ಹಾನಿ ಸಂಭವಿಸಿರುವುದು ನೈಸ ರ್ಗಿಕ ವಿಕೋಪ ಪರಿಹಾರ ಕೇಂದ್ರದ ಅಂಕಿ ಅಂಶಗಳಿಂದ ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X