Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ:...

ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ: ಭರ್ತಿಯಾಗಿರುವ 400 ಹುದ್ದೆೆಗಳಲ್ಲಿ ಪರಿಶಿಷ್ಟ ಜಾತಿಯ 76 ಮಂದಿ ನೇಮಕ

ಜಿ.ಮಹಾಂತೇಶ್ಜಿ.ಮಹಾಂತೇಶ್26 March 2025 10:55 AM IST
share
ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ: ಭರ್ತಿಯಾಗಿರುವ 400 ಹುದ್ದೆೆಗಳಲ್ಲಿ ಪರಿಶಿಷ್ಟ ಜಾತಿಯ 76 ಮಂದಿ ನೇಮಕ

ಬೆಂಗಳೂರು: ಒಟ್ಟು 1,208 ಹುದ್ದೆಗಳಲ್ಲಿ ಆದಿ ಕರ್ನಾಟಕ ಸೇರಿದಂತೆ ಇನ್ನಿತರ ಉಪ ಜಾತಿಗಳಿಗೆ ಸೇರಿದ 76 ಮಂದಿ ಅಧಿಕಾರಿಗಳು ಮಾತ್ರ ನೇಮಕವಾಗಿದ್ದಾರೆ ಎಂದು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ದಿ ಸಂಸ್ಥೆಯು ನ್ಯಾಯಮೂರ್ತಿ ಎಚ್ .

ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣೆ ಆಯೋಗಕ್ಕೆ ಅಂಕಿ ಅಂಶಗಳ ಸಮೇತ ವರದಿ ನೀಡಿದೆ.

ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು ಎಂದು ಸರಣಿ ಪಾದಯಾತ್ರೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಈ ಕುರಿತು ಸಚಿವರ ಸಭೆ ನಡೆಸಿದ್ದಾರೆ. ಮಧ್ಯಂತರ ವರದಿ ನೀಡಲು ಆಯೋಗಕ್ಕೆ ಸೂಚನೆಯನ್ನು ನೀಡಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯು ಆಯೋಗಕ್ಕೆ ನೀಡಿರುವ ಅಂಕಿ ಅಂಶಗಳ ವಿವರಗಳು ಮುನ್ನೆಲೆಗೆ ಬಂದಿವೆ.

ಈ ಸಂಸ್ಥೆಯು 2025ರ ಫೆ.24ರಂದೇ ಈ ಮಾಹಿತಿಯನ್ನು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಏಕ ಸದಸ್ಯ ವಿಚಾರಣೆ ಆಯೋಗದ ಕಾರ್ಯದರ್ಶಿಗೆ ರವಾನಿಸಿದೆ. ಇದರ ಪ್ರತಿಯು "the-file.in"ಗೆ ಲಭ್ಯವಾಗಿದೆ.

ಸಂಸ್ಥೆ ನೀಡಿರುವ ಅಂಕಿ ಅಂಶಗಳಲ್ಲೇನಿದೆ?: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯಲ್ಲಿ ಒಟ್ಟು 1,208 ಹುದ್ದೆಗಳು ಮಂಜೂರಾತಿಯಾಗಿವೆ. ಈ ಪೈಕಿ 117 ಹುದ್ದೆಗಳು ಗ್ರೂಪ್ ಎ ವೃಂದದಲ್ಲಿವೆ. ಬಿ ವೃಂದದಲ್ಲಿ 272, ಸಿ ವೃಂದದಲ್ಲಿ 596, ಡಿ ವೃಂದದಲ್ಲಿ 223 ಹುದ್ದೆಗಳಿದ್ದವು. ಈ ನಾಲ್ಕು ವೃಂದಗಳಲ್ಲಿ 400 ಹುದ್ದೆಗಳು ಭರ್ತಿಯಾಗಿವೆ. ಎ ವೃಂದದಲ್ಲಿ 99, ಬಿ ವೃಂದದಲ್ಲಿ 62, ಸಿ ವೃಂದದಲ್ಲಿ 205, ಡಿ ವೃಂದದಲ್ಲಿ 34 ಹುದ್ದೆಗಳಷ್ಟೇ ಭರ್ತಿಯಾಗಿವೆ.

ಇನ್ನೂ 808 ಹುದ್ದೆಗಳು ಭರ್ತಿಯಾಗಬೇಕಿವೆ. ಈ 808 ಹುದ್ದೆಗಳಲ್ಲಿ ಎ ವೃಂದದಲ್ಲಿ 18, ಬಿ ವೃಂದದಲ್ಲಿ 210, ಸಿ ವೃಂದದಲ್ಲಿ 391 ಮತ್ತು ಡಿ ವೃಂದದಲ್ಲಿ 189 ಹುದ್ದೆಗಳಿರುವುದು ತಿಳಿದು ಬಂದಿದೆ.

ಒಟ್ಟು ಭರ್ತಿಯಾಗಿರುವ 400 ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿರುವರ ಸಂಖ್ಯೆ ಕೇವಲ 76 ಮಾತ್ರ. ಗ್ರೂಪ್ ಎ ವೃಂದದಲ್ಲಿ 25, ಬಿ ವೃಂದದಲ್ಲಿ 14, ಸಿ ವೃಂದದಲ್ಲಿ 30, ಡಿ ವೃಂದದಲ್ಲಿ 7 ಮಂದಿ ನೇಮಕವಾಗಿದ್ದಾರೆ.

ಆದೇ ರೀತಿ ಆದಿ ಕರ್ನಾಟಕ, ಲಂಬಾಣಿ, ಛಲವಾದಿ, ಭೋವಿ, ಮೊಗೇರಾ, ಹರಿಜನ, ರಾಣೇಯಾರ್, ಕೊರಮ, ಹೊಲೆಯ, ಚಮಗಾರ, ಮೋಚಿ, ಮಾದಿಗ ಜಾತಿಗೆ ಸೇರಿದ 23 ಅಧಿಕಾರಿಗಳು ಎ ವೃಂದದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿ ವೃಂದದಲ್ಲಿ 12, ಸಿ ವೃಂದದಲ್ಲಿ 27, ಡಿ ವೃಂದದಲ್ಲಿ 6 ಸೇರಿ ಒಟ್ಟು 68 ಮಂದಿ ಅಧಿಕಾರಿಗಳು ಈ ಜಾತಿಗಳಿಗೆ ಸೇರಿದ್ದಾರೆ.

ಆದಿ ದ್ರಾವಿಡ ಜಾತಿಯಲ್ಲಿನ ಉಪ/ಒಳ ಜಾತಿಗಳಾದ ಭೋವಿ, ಹರಿಜನ ಜಾತಿಗೆ ಸೇರಿದ ಒಟ್ಟು 6 ಮಂದಿ ಅಧಿಕಾರಿಗಳಿದ್ದಾರೆ. ಈ ಪೈಕಿ ಗ್ರೂಪ್ ಎ ವೃಂದದಲ್ಲಿ 2, ಬಿ ವೃಂದದಲ್ಲಿ 2, ಸಿ ವೃಂದದಲ್ಲಿ 1 ಮತ್ತು ಡಿ ವೃಂದದಲ್ಲಿ 1 ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆದಿ ಆಂಧ್ರ ಜಾತಿಯಲ್ಲಿನ ಉಪ ಜಾತಿಯಾದ ಲಮಾಣಿ ಜಾತಿಗೆ ಸೇರಿದವರು ಇಬ್ಬರು ಅಧಿಕಾರಿಗಳಷ್ಟೇ ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಇಬ್ಬರೂ ಅಧಿಕಾರಿಗಳು ಸಿ ವೃಂದದಲ್ಲಿದ್ದಾರೆ. ಎ, ಬಿ ಮತ್ತು ಡಿ ಗುಂಪಿನಲ್ಲಿ ಈ ಜಾತಿಗೆ ಸೇರಿದ ಅಧಿಕಾರಿಗಳು ಇಲ್ಲವಾಗಿದೆ.

ಅದೇ ರೀತಿ 2021-22, 2022-23, 2023-24ರ ಅವಧಿಯಲ್ಲಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯಲ್ಲಿ ಪರಿಶಿಷ್ಟ ಜಾತಿ ವರ್ಗದವರಿಗೆ ಯಾವುದೇ ಪ್ರತ್ಯೇಕ ಯೋಜನೆಯನ್ನು ರೂಪಿಸಿಲ್ಲ.

ಹೀಗಾಗಿ ಈ ವರದಿಯನ್ನು ಶೂನ್ಯವೆಂದು ಪರಿಗಣಿಸಬೇಕು ಎಂದು ಕೋರಿದೆ. ಅದೇ ರೀತಿ ಪರಿಶಿಷ್ಟ ಜಾತಿಯ ಉಪ ಜಾತಿಗಳ ಫಲಾನುಭವಿಗಳ ವಿವರಗಳಿಗೆ ಸಂಬಂಧಿಸಿದಂತೆ ಅನ್ವಯಿಸುವುದಿಲ್ಲ ಎಂದು ಸಂಸ್ಥೆಯು ವರದಿ ಮಾಡಿದೆ.

2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆ 1.05 ಕೋಟಿಯಲ್ಲಿ 7.29 ಲಕ್ಷ ಜನರು ಯಾವುದೇ ಉಪ ಜಾತಿಗಳನ್ನು ನಮೂದಿಸಿಲ್ಲ. ಅಲ್ಲದೇ ಸರಕಾರಿ ಸೇವೆಗಳು ಮತ್ತು ಶಿಕ್ಷಣದಲ್ಲಿ 4 ಗುಂಪುಗಳಿಗೆ ಸೇರಿದ ವ್ಯಕ್ತಿಗಳ ಸಮರ್ಪಕ ಅಥವಾ ವಾಸ್ತವ ಪ್ರಾತಿನಿಧ್ಯದ ಬಗ್ಗೆ ಯಾವ ಅಂಕಿ ಅಂಶವೂ ಇಲ್ಲ ಎಂದು ಕಾಂಗ್ರೆಸ್ ಸರಕಾರವು ಹೇಳಿತ್ತು. ಅಲ್ಲದೇ 2011ರ ಜನಗಣತಿಯಂತೆಯೇ ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಕಾಂಗ್ರೆಸ್ ಸರಕಾರವು ಸಮರ್ಥಿಸಿಕೊಂಡಿತ್ತು. ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿದ್ದ ಟಿಪ್ಪಣಿಯಲ್ಲಿ ಈ ಅಂಶವಿದೆ. 2024ರ ಅಕ್ಟೋಬರ್ 25ರಂದು ಮಂಡಿಸಿತ್ತು.

2011ರ ಜನಗಣತಿಯಂತೆ ಕರ್ನಾಟಕ ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಇದೆ. ಈ ಪೈಕಿ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆ 1.05 ಕೋಟಿ ಇದೆ. (ಗ್ರಾಮೀಣ 75 ಲಕ್ಷ ಮತ್ತು ನಗರ 30 ಲಕ್ಷ) ರಾಜ್ಯದ ಒಟ್ಟು ಜನಸಂಖ್ಯೆಗೆ ಹೋಲಿಸಿದಾಗ ಶೇ.17.15ರಷ್ಟು ಇದೆ.

‘2011ರ ಜನಗಣತಿಯಲ್ಲಿ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆ 1.05 ಕೋಟಿಯಲ್ಲಿ 7.29 ಲಕ್ಷ ಜನರು ಯಾವುದೇ ಉಪ ಜಾತಿಗಳನ್ನು ನಮೂದಿಸಿರುವುದಿಲ್ಲ. ಕಾರಣ ಒಟ್ಟಾರೆ ಜಾತಿವಾರು ನಿಖರ ಜನಸಂಖ್ಯೆ 97.56 ಲಕ್ಷ ಎಂದು ಪರಿಗಣಿಸಲಾಗಿದೆ. ಈ ಜನಸಂಖ್ಯೆಯಲ್ಲಿ ಆದಿ ಕರ್ನಾಟಕ ಜನಸಂಖ್ಯೆ 29.21 ಲಕ್ಷ ಮತ್ತು ಆದಿ ದ್ರಾವಿಡರು 7.95 ಲಕ್ಷ ಸಂಖ್ಯೆಯಲ್ಲಿದ್ದಾರೆ,’ ಎಂದು ಟಿಪ್ಪಣಿಯಲ್ಲಿ ಅಂಕಿ ಅಂಶಗಳನ್ನು ಒದಗಿಸಿತ್ತು.

ಮೊದಲ ಗುಂಪಿನಲ್ಲಿ (ಶೇ.6) ಆದಿದ್ರಾವಿಡ, ಭಂಬಿ, ಮಾದಿಗ, ಸಮಗಾರ ಒಟ್ಟು 4 ಜಾತಿಗಳಿವೆ. ಈ ಗುಂಪಿನ ಒಟ್ಟು ಜನಸಂಖ್ಯೆ 32.60 ಲಕ್ಷ ಇದೆ. ಎರಡನೇ ಗುಂಪಿನಲ್ಲಿ ಆದಿ ಕರ್ನಾಟಕ, ಛಲವಾದಿ, ಚನ್ನದಾಸರ, ಹೊಲೆಯ, ಮಹರ್ ಜಾತಿಗಳಿವೆ. ಈ ಗುಂಪಿನಲ್ಲಿ ಒಟ್ಟು 32.58 ಲಕ್ಷ ಜನಸಂಖ್ಯೆ ಇದೆ. ಮೂರನೇ ಗುಂಪಿನಲ್ಲಿ ಬಂಜಾರ ಹಾಗೂ ಇದರ ಸಮನಾಂತರ ಜಾತಿಗಳಿವೆ.

ಭೋವಿ ಮತ್ತು ಇದರ ಸಮನಾಂತರ ಜಾತಿಗಳು, ಕೊರಚ,/ಕೊರಚರ್ ಮತ್ತು ಕೊರಮ/ಕೊರವ,/ಕೊರವಾರ್ ಜಾತಿ ಸೇರಿ ಒಟ್ಟು 4 ಜಾತಿಗಳಿವೆ. ಈ ಗುಂಪಿನಲ್ಲಿ ಒಟ್ಟು 26.51 ಲಕ್ಷ ಜನಸಂಖ್ಯೆ ಇದೆ. ನಾಲ್ಕನೇ ಗುಂಪಿನಲ್ಲಿ (ಮೊದಲ ಮತ್ತು ಎರಡನೇ ಗುಂಪು) ಈ ಹಿಂದೆ ಅಸ್ಪಶ್ಯತೆಗೆ ಒಳಗಾದ ಮತ್ತು ಕಡಿಮೆ ಜನಸಂಖ್ಯೆ ಇರುವ ಒಟ್ಟು 88 ಪರಿಶಿಷ್ಟ ಜಾತಿಗಳನ್ನು ಸೇರಿಸಲಾಗಿದೆ. ಈ ಗುಂಪಿನಲ್ಲಿ ಒಟ್ಟು 5.87 ಲಕ್ಷ ಜನಸಂಖ್ಯೆ ಇದೆ.

‘ಯಾವುದೇ ಅಂಕಿ ಅಂಶ ಇಲ್ಲ’

2011ರ ಜನಸಂಖ್ಯೆಯ ಆಧಾರದ ಮೇಲೆ ಒಳ ಮೀಸಲಾತಿ ಮಾಡಲಾ

ಗಿದೆ. ಆದರೆ ಸರಕಾರಿ ಸೇವೆಗಳು ಮತ್ತು ಶಿಕ್ಷಣದಲ್ಲಿ ನಾಲ್ಕು ಗುಂಪುಗಳಿಗೆ ಸೇರಿದ ವ್ಯಕ್ತಿಗಳ ಸಮರ್ಪಕ ಅಥವಾ ವಾಸ್ತವ ಪ್ರಾತಿನಿಧ್ಯದ ಬಗ್ಗೆ ಯಾವುದೇ ಅಂಕಿ ಅಂಶವೂ ಇಲ್ಲ ಎಂದು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿತ್ತು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X