Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಜ್ಯದ 16,625 ಕೆರೆಗಳಲ್ಲಿ...

ರಾಜ್ಯದ 16,625 ಕೆರೆಗಳಲ್ಲಿ ಶೇ.30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು

ಜಿ.ಮಹಾಂತೇಶ್ಜಿ.ಮಹಾಂತೇಶ್6 May 2024 8:42 AM IST
share
ರಾಜ್ಯದ 16,625 ಕೆರೆಗಳಲ್ಲಿ ಶೇ.30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು

ಬೆಂಗಳೂರು, ಮೇ 5: ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಇದರ ಮಧ್ಯೆಯೇ ರಾಜ್ಯದ 16,625 ಕೆರೆಗಳಲ್ಲಿ ಶೇ.30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ. ಹೀಗಾಗಿ ನಗರ ಪ್ರದೇಶಗಳನ್ನೂ ಒಳಗೊಂಡಂತೆ ಕೆರೆ ಸುತ್ತಮುತ್ತಲಿನ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗುವ ಪರಿಸ್ಥಿತಿ ತಲೆದೋರಿದೆ.

ಕೆರೆಗಳಲ್ಲಿ ನೀರು ಖಾಲಿ ಆಗುತ್ತಿರುವ ಕುರಿತು ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಹವಾಮಾನ ಅವಲೋಕನ ಸಮಿತಿ ಸಭೆಯಲ್ಲಿ ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಕುರಿತು ಚರ್ಚೆಯಾಗಿದೆ. 2023ರ ಮಾರ್ಚ್ 28ರಂದು ನಡೆದಿದ್ದ ಸಭೆಯ ನಡಾವಳಿಗಳು ‘The-file.in’ಗೆ ಲಭ್ಯವಾಗಿದೆ.

ಮುಂಗಾರಿಗಿಂತ ಮುಂಚಿತವಾಗಿ ಕೆರೆಗಳಿಗೆ ಸಾಕಷ್ಟು ಮಳೆ ನೀರು ಸಂಗ್ರಹಣೆ ಮಾಡಲು ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ವಿವಿಧ ಇಲಾಖೆಗಳ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಡಾ.ಶಾಲಿನಿ ರಜನೀಶ್ ಅವರು 2024ರ ಮಾರ್ಚ್ 30ರಂದು ಎಲ್ಲಾ ಇಲಾಖೆಗಳ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ 12,657, ಸಣ್ಣ ನೀರಾವರಿ ಇಲಾಖೆಯಲ್ಲಿ 3,252, ಜಲಸಂಪನ್ಮೂಲ ಇಲಾಖೆಯಲ್ಲಿ 85, ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ 248, ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 377, ಕೆಪಿಸಿಎಲ್ ವ್ಯಾಪ್ತಿಯಲ್ಲಿ 6 ಕೆರೆ ಸೇರಿದಂತೆ ಒಟ್ಟಾರೆ 16,625 ಕೆರೆಗಳಿವೆ. ಈ ಕೆರೆಗಳಲ್ಲಿ ಸುಮಾರು ಶೇ.30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಕೆರೆಗಳ ಪೈಕಿ ಚಿತ್ರದುರ್ಗದಲ್ಲಿ 25, ಕೋಲಾರದಲ್ಲಿ 15, ಶಿವಮೊಗ್ಗದಲ್ಲಿ 75, ತುಮಕೂರಿನಲ್ಲಿ 27, ಉತ್ತರ ಕನ್ನಡದಲ್ಲಿ 28 ಕೆರೆಗಳಿವೆ. ಈ ಕೆರೆಗಳಲ್ಲಿಯೂ ಶೇ.30ಕ್ಕಿಂತಲೂ ಕಡಿಮೆ ನೀರಿದೆ ಎಂಬುದು ಪತ್ರದಿಂದ ಗೊತ್ತಾಗಿದೆ.

2023ರ ಡಿಸೆಂಬರ್ ಅಂತ್ಯಕ್ಕೆ ರಾಜ್ಯದ ಸುಮಾರು 1,288ಕ್ಕೂ ಹೆಚ್ಚು ಕೆರೆಗಳಲ್ಲಿ ಶೇ.30ರಷ್ಟು ಮಾತ್ರ ನೀರಿತ್ತು. ಇದರಲ್ಲಿ 425ಕ್ಕೂ ಹೆಚ್ಚು ಕೆರೆಗಳಲ್ಲಿ ಒಂದು ಹನಿಯೂ ನೀರಿರಲಿಲ್ಲ. 1,033 ಕೆರೆಗಳಲ್ಲಿ ಶೇ.31ರಿಂದ 50ರಷ್ಟು ನೀರಿತ್ತು. 760 ಕೆರೆಯಲ್ಲಿ ಶೇ.51ರಿಂದ 99 ಭಾಗ ನೀರಿತ್ತು.

ತುಮಕೂರು ಜಿಲ್ಲೆಯಲ್ಲಿ 371 ಕೆರೆಗಳಿವೆ. ಇದರಲ್ಲಿ ಡಿಸೆಂಬರ್ ಅಂತ್ಯಕ್ಕೇ 68 ಕೆರೆಯಲ್ಲಿ ನೀರಿರಲಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ 290 ಕೆರೆಗಳ ಪೈಕಿ 113 ಕೆರೆಯಲ್ಲಿ ನೀರಿಲ್ಲದಂತಾಗಿತ್ತು. ವಿಜಯಪುರ, ಬಾಗಲಕೋಟೆ, ಚಾಮರಾಜನಗರ, ಕಲಬುರಗಿ, ಬಳ್ಳಾರಿ, ವಿಜಯನಗರ ಮತ್ತಿತರ ಜಿಲ್ಲೆಗಳಲ್ಲೂ ಇಂತದ್ದೇ ಪರಿಸ್ಥಿತಿ ಇತ್ತು.

ಬೆಂಗಳೂರು ನಗರ ಜಿಲ್ಲೆಯಲ್ಲಿ 149 ಕೆರೆಗಳ ಜೀರ್ಣೋದ್ಧಾರಕ್ಕೆ ಮುಂದಾಗಿರುವ ಸರಕಾರವು ಇದಕ್ಕಾಗಿ 910.70 ಕೋಟಿ ರೂ. ಅಂದಾಜು ವೆಚ್ಚದ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿದೆ. ಇದರಲ್ಲಿ ಕೆರೆಗಳ ನೀರಿನ ಸಾಮರ್ಥ್ಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ 656.15 ಕೋಟಿ ರೂ., ಇತರ ಕಾಮಗಾರಿಗಳಿಗೆ 254.56 ಕೋಟಿ ರೂ. ಸೇರಿದೆ.

ಬೆಂಗಳೂರು ದಕ್ಷಿಣ ವ್ಯಾಪ್ತಿಯ ಕೆರೆಗಳಿಗೆ 69.68 ಕೋಟಿ ರೂ., ಬೆಂಗಳೂರು ಪೂರ್ವಕ್ಕೆ 73.97 ಕೋಟಿ ರೂ., ಬೆಂಗಳೂರು ಉತ್ತರಕ್ಕೆ 102.75 ಕೋಟಿ ರೂ., ಆನೇಕಲ್ ತಾಲೂಕಿನಲ್ಲಿನ ಮೂರು ಘಟಕಗಳಿಗೆ 421.6 ಕೋಟಿ ರೂ., ಯಲಹಂಕದ 2 ಘಟಕಗಳಲ್ಲಿ 242.4 ಕೋಟಿ ರೂ. ಅಂದಾಜಿಸಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X