Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬರ ಪರಿಹಾರದ ಮೊತ್ತ ಸ್ವೀಕಾರ: ಜಂಟಿ ಖಾತೆ...

ಬರ ಪರಿಹಾರದ ಮೊತ್ತ ಸ್ವೀಕಾರ: ಜಂಟಿ ಖಾತೆ ತೆರೆಯುವ ಬಗ್ಗೆ ಕೇಂದ್ರದಿಂದ ರಾಜ್ಯಕ್ಕೆ ಪ್ರಸ್ತಾವ ಬಂದಿಲ್ಲ

ಜಿ.ಮಹಾಂತೇಶ್ಜಿ.ಮಹಾಂತೇಶ್10 Feb 2024 11:04 AM IST
share
ಬರ ಪರಿಹಾರದ ಮೊತ್ತ ಸ್ವೀಕಾರ: ಜಂಟಿ ಖಾತೆ ತೆರೆಯುವ ಬಗ್ಗೆ ಕೇಂದ್ರದಿಂದ ರಾಜ್ಯಕ್ಕೆ ಪ್ರಸ್ತಾವ ಬಂದಿಲ್ಲ

ಬೆಂಗಳೂರು: ಬರ ಪರಿಹಾರದ ಮೊತ್ತವನ್ನು ಸ್ವೀಕರಿಸಲು ಕೇಂದ್ರ ಮತ್ತು ರಾಜ್ಯ ಜಂಟಿ ಖಾತೆ ತೆರೆಯುವ ಬಗ್ಗೆ ಇದುವರೆಗೂ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಯಾವುದೇ ನಿರ್ದೇಶನವಾಗಲೀ, ಪ್ರಸ್ತಾವವಾಗಲೀ ಬಂದಿಲ್ಲ.

ಅಲ್ಲದೇ, ಕೇಂದ್ರ ಸರಕಾರದ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನುಸಾರ ರಾಜ್ಯದ ಬರ ನಿರ್ವಹಣೆಗಾಗಿ 18,171.44 ಕೋಟಿ ರೂ. ಆರ್ಥಿಕ ನೆರವು ಕೋರಿ ರಾಜ್ಯ ಸರಕಾರವು ಸಲ್ಲಿಸಿದ್ದ ಮೆಮೊರಾಂಡಮ್‌ಗೆ ಕೇಂದ್ರ ಸರಕಾರವು ಬಿಡಿಗಾಸನ್ನೂ ನೀಡಿಲ್ಲ!

ಬರ ಪರಿಹಾರದ ನೆರವು ಬೇಕಾದರೆ ರಾಜ್ಯ-ಕೇಂದ್ರ ಸರಕಾರದ ಹೆಸರಿನಲ್ಲಿ ಜಂಟಿಯಾಗಿ ಬ್ಯಾಂಕ್‌ನಲ್ಲಿ ಖಾತೆ ತೆರೆಯಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಂಗಳ ಹಿಂದೆಯಷ್ಟೇ ಹೇಳಿಕೆ ನೀಡಿದ್ದರು.

ಆದರೆ ಇದುವರೆಗೂ ಇಂತಹ ಯಾವುದೇ ನಿರ್ದೇಶನವು ರಾಜ್ಯ ಸರಕಾರಕ್ಕೆ ಬಂದಿಲ್ಲ ಎಂದು ಕಂದಾಯ ಇಲಾಖೆಯು ಉತ್ತರವೊಂದನ್ನು ಸಿದ್ಧಪಡಿಸಿದೆ ಎಂದು ಗೊತ್ತಾಗಿದೆ.

ಜಂಟಿ ಖಾತೆ ತೆರೆಯುವ ಸಂಬಂಧ ವಿಧಾನಪರಿಷತ್ ಸದಸ್ಯ ಡಾ.ತಳವಾರ ಸಾಬಣ್ಣ ಮತ್ತು ಡಿ.ಎಸ್.ಅರುಣ್ ಅವರು ವಿಧಾನಪರಿಷತ್‌ನಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದಾರೆ. ಈ ಪ್ರಶ್ನೆಗೆ 2024ರ ಫೆ.14ರಂದು ಸಚಿವ ಕೃಷ್ಣ ಬೈರೇಗೌಡ ಅವರು ಬರ ಪರಿಹಾರ ಮೊತ್ತವನ್ನು ಸ್ವೀಕರಿಸಲು ಜಂಟಿ ಖಾತೆ ತೆರೆಯುವ ಬಗ್ಗೆ ಕೇಂದ್ರದಿಂದ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಉತ್ತರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಡಿ.ಎಸ್. ಅರುಣ್ ಕೇಳಿರುವ ಪ್ರಶ್ನೆ

ಕೇಂದ್ರ ಸರಕಾರ ನೀಡಿರುವ ಬರಪರಿಹಾರ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಜಂಟಿ ಖಾತೆ ತೆರೆಯಬೇಕೆನ್ನುವ ಕೇಂದ್ರ ಸರಕಾರದ ಪ್ರಸ್ತಾವದ ಬಗ್ಗೆ ಸರಕಾರ ಕೈಗೊಂಡಿರುವ ಕ್ರಮಗಳೇನು? ಜಂಟಿ ಖಾತೆಯನ್ನು ತೆರೆಯಲು ಸರಕಾರ ಆಸಕ್ತಿ ವಹಿಸದಿರಲು ಕಾರಣಗಳೇನು, ಹೀಗಿದ್ದಾಗ್ಯೂ ಪದೇ ಪದೇ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವುದು ಸರಿಯಾದ ಕ್ರಮವೇ ಎಂದು ಪ್ರಶ್ನೆ ಕೇಳಿರುವುದು ಗೊತ್ತಾಗಿದೆ.

ಇದಕ್ಕೆ ಬರಪರಿಹಾರ ಮೊತ್ತವನ್ನು ಸ್ವೀಕರಿಸಲು ಕೇಂದ್ರ ಮತ್ತು ರಾಜ್ಯ ಜಂಟಿ ಖಾತೆ ತೆರೆಯಲು ಕೇಂದ್ರ ಸರಕಾರದಿಂದ ಯಾವುದೇ ನಿರ್ದೇಶನ ರಾಜ್ಯ ಸರಕಾರಕ್ಕೆ ಬಂದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು (ಸಂಖ್ಯೆ; ಕಂಇ ಟಿಎನ್‌ಆರ್ 2023) ಉತ್ತರಿಸಿದ್ದಾರೆ.

ಜಂಟಿ ಖಾತೆ ತೆರೆದ ತಕ್ಷಣವೇ ಕೇಂದ್ರದಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತುಮಕೂರಿನಲ್ಲಿ 2024ರ ಜನವರಿ 24ರಂದು ಹೇಳಿಕೆ ನೀಡಿದ್ದರು. ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಜಾರಿಯಾಗುತ್ತಿರುವ ಯಾವುದೇ ಯೋಜನೆಗಳಲ್ಲಿ ಅನುದಾನ ಸಿಗಬೇಕಾದರೆ ಇನ್ನು ಮುಂದೆ ಜಂಟಿ ಖಾತೆ ತೆರೆಯುವುದು ಕಡ್ಡಾಯ. ಈ ಬಗ್ಗೆ ನೀತಿ ಆಯೋಗ ಸ್ಪಷ್ಟವಾಗಿ ಸೂಚನೆ ನೀಡಿದೆ. ಕೆಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೂ ಸಾಕಷ್ಟು ಸಂದರ್ಭಗಳಲ್ಲಿ ರಾಜ್ಯ ಸರಕಾರವು ಹಣ ನೀಡುವುದಿಲ್ಲ. ಕೇಂದ್ರದ ಹಣ ವೆಚ್ಚವಾಗಿದ್ದರೂ ಹಣ ಕೊಡದೇ ರಾಜ್ಯ ಸತಾಯಿಸುತ್ತದೆ. ಇದರಿಂದ ಯೋಜನೆ ಜಾರಿ ಮಾಡುವುದು ಕಷ್ಟಕರವಾಗುತ್ತದೆ. ಹಾಗಾಗಿ ಜಂಟಿ ಖಾತೆ ಕಡ್ಡಾಯ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದರು.

ಅದೇ ರೀತಿ ರಾಜ್ಯದಲ್ಲಿರುವ ಭೀಕರ ಪರಿಸ್ಥಿತಿ ಅಧ್ಯಯನ ಮಾಡಲು ಕೇಂದ್ರ ಸರಕಾರದ ಅಂತರ ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ)ಕ್ಕೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ವಿವಿಧ ಬರ ಪರಿಹಾರ ಕಾರ್ಯಕ್ರಮಗಳಿಗೆ ರಾಜ್ಯ ಸರಕಾರವು ಮೆಮೋರಾಂಡಮ್ ಸಲ್ಲಿಸಿತ್ತು. ಕೇಂದ್ರದ ಅಧ್ಯಯನ ತಂಡದ ವರದಿ ಆಧರಿಸಿ ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಬಿಡುಗಡೆ ಮಾಡಿರುವ ಆರ್ಥಿಕ ನೆರವು ಎಷ್ಟು ಎಂದು ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರು ಪ್ರಶ್ನೆ ಕೇಳಿದ್ದಾರೆ.

ಇದಕ್ಕೆ ಕೇಂದ್ರ ಸರಕಾರದ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನುಸಾರ ರಾಜ್ಯದ ಬರ ನಿರ್ವಹಣೆಗಾಗಿ 18,171.44 ಕೋಟಿ ರೂ. ಆರ್ಥಿಕ ನೆರವು ಕೋರಿ ಮೆಮೋರಾಂಡಮ್ ಸಲ್ಲಿಸಲಾಗಿದ್ದು ಕೇಂದ್ರದಿಂದ ಅನುದಾನ ನಿರೀಕ್ಷಿಸಲಾಗಿದೆ ಎಂಬ ಉತ್ತರವನ್ನು ಸಿದ್ಧಪಡಿಸಿರುವುದು ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X