Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೃಷಿ ಸಾಲ ಬಡ್ಡಿ ದರ ಶೂನ್ಯಕ್ಕೆ: ಪ್ರತೀ...

ಕೃಷಿ ಸಾಲ ಬಡ್ಡಿ ದರ ಶೂನ್ಯಕ್ಕೆ: ಪ್ರತೀ ವರ್ಷ ಬೊಕ್ಕಸಕ್ಕೆ 117 ಕೋಟಿ ರೂ. ಹೆಚ್ಚುವರಿ ಹೊರೆ

ಜಿ.ಮಹಾಂತೇಶ್ಜಿ.ಮಹಾಂತೇಶ್22 Jan 2024 8:59 AM IST
share
ಕೃಷಿ ಸಾಲ ಬಡ್ಡಿ ದರ ಶೂನ್ಯಕ್ಕೆ: ಪ್ರತೀ ವರ್ಷ ಬೊಕ್ಕಸಕ್ಕೆ 117 ಕೋಟಿ ರೂ. ಹೆಚ್ಚುವರಿ ಹೊರೆ

ಬೆಂಗಳೂರು: ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೆ ವಿಧಿಸಿದ್ದ ಶೇಕಡ 3ರ ಬಡ್ಡಿ ದರವನ್ನು ಶೂನ್ಯಕ್ಕೆ ಇಳಿಸಲು ಸಲಹೆ ನೀಡಿರುವ ಸಹಕಾರ ಇಲಾಖೆಯು ಇದನ್ನು ಜಾರಿಗೊಳಿಸಿದರೆ ಪ್ರತೀ ವರ್ಷ 117 ಕೋಟಿ ರೂ. ಸರಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗಲಿದೆ ಎಂಬ ಲೆಕ್ಕಾಚಾರವನ್ನೂ ಮುಂದಿಟ್ಟಿದೆ.

2024-25ನೇ ಸಾಲಿನ ಆಯವ್ಯಯದಲ್ಲಿ ಹೊಸ ಯೋಜನೆಗಳನ್ನು ಪ್ರಸ್ತಾವಿಸಿರುವ ಸಹಕಾರ ಇಲಾಖೆಯು ಈ ಕುರಿತು ವಿವರಣೆ ನೀಡಿದೆ. ಶೂನ್ಯ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದ ರೈತರ ಪೈಕಿ ಇನ್ನೂ 2.52 ಲಕ್ಷ ರೈತರು 3,900 ಕೋಟಿ ರೂ.

ಸಾಲ ಮರು ಪಾವತಿಸಲು ಬಾಕಿ ಇರಿಸಿಕೊಂಡಿದ್ದಾರೆ.

ಬರಗಾಲದ ಹಿನ್ನೆಲೆಯಲ್ಲಿ ಶೇ.3ರ ಬಡ್ಡಿ ದರವನ್ನು ಶೂನ್ಯಕ್ಕಿಳಿಸಿಲು ಪ್ರಸ್ತಾವಿಸಿರುವ ಸಹಕಾರ ಇಲಾಖೆಯು ಈ ಯೋಜನೆಯನ್ನು ಜಾರಿಗೊಳಿಸಿದರೆ ಸರಕಾರದ ಬೊಕ್ಕಸಕ್ಕೆ 117 ಕೋಟಿ ರೂ. ಹೊರೆ ಬೀಳಲಿದೆ ಎಂದು ಅಂಕಿ ಅಂಶಗಳನ್ನು ಒದಗಿಸಿದೆ. ಸಹಕಾರ ಇಲಾಖೆಯು ಸಲ್ಲಿಸಿರುವ ಈ ಪ್ರಸ್ತಾವದ ಪ್ರತಿ ‘the-file.in’ಗೆ ಲಭ್ಯವಾಗಿದೆ.

ಅಲ್ಲದೇ ಸುಸ್ತಿದಾರರ ಸಾಲಗಳ ಮೇಲಿನ ಬಡ್ಡಿ ಮನ್ನಾ ಯೋಜನೆ ಅನುಷ್ಠಾನಗೊಳಿಸಲು 260 ಕೋಟಿ ರೂ. ಅನುದಾನ ಬೇಕಿದೆ ಎಂದು ಬೇಡಿಕೆ ಸಲ್ಲಿಸಿದೆ.

ಸಹಕಾರ ಬ್ಯಾಂಕ್‌ಗಳಲ್ಲಿರುವ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಸಹಕಾರ ಇಲಾಖೆ ಒದಗಿಸಿರುವ ಅಂದಾಜು ವೆಚ್ಚದ ಪಟ್ಟಿಯು ಮುನ್ನೆಲೆಗೆ ಬಂದಿದೆ.

ಪ್ರತೀ ವರ್ಷ ಶೂನ್ಯ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಯೋಜನೆ ಅಡಿಯಲ್ಲಿ 60,000 ರೈತರಿಗೆ 2,000 ಕೋಟಿ ರೂ.ಗಳನ್ನು ಪಿಕಾರ್ಡ್ ಬ್ಯಾಂಕ್‌ಗಳ ಮೂಲಕ ಒದಗಿಸಲು ಪ್ರಸ್ತಾವಿಸಿದೆ. ಪ್ರತೀ ಜಿಲ್ಲೆಯ 2 ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಅಂಗಳದಲ್ಲಿ ಹೊಸದಾಗಿ ಉಗ್ರಾಣಗಳನ್ನು ನಿರ್ಮಿಸುವ ಯೋಜನೆಯನ್ನು ಘೋಷಿಸಲು ಇಲಾಖೆಯು ಪ್ರಸ್ತಾವಿಸಿದೆ. ಒಟ್ಟಾರೆ 64 ಟಿಎಪಿಸಿಎಂಸಿಗಳಿಗೆ ತಲಾ 1 ಕೋಟಿ ರೂ. ಮತ್ತು 4.50 ಕೋಟಿ ರೂ.ಗಳನ್ನು ಶೆ.7ರಷ್ಟು ಬಡ್ಡಿ ರಿಯಾಯಿತಿ ಘೋಷಿಸಲಿದೆ ಎಂದು ತಿಳಿದು ಬಂದಿದೆ.

ಎಪಿಎಂಸಿಗಳಲ್ಲಿ ಸ್ಮಾರ್ಟ್ ಆಡಳಿತ ಕೇಂದ್ರಗಳನ್ನು ಸ್ಥಾಪಿಸಲಿದೆ. ಸದ್ಯ ಎಪಿಎಂಸಿಗಳಲ್ಲಿರುವ ತೂಕದ ಯಂತ್ರಗಳನ್ನು ಬದಲಾಯಿಸಿ ಡಿಜಿಟಲ್ ವ್ಯವಸ್ಥೆಗೊಳಪಡಿಸಲು 15 ಕೋಟಿ ರೂ.ಗಳನ್ನು ಒದಗಿಸಲಿದೆ. ರಾಯಚೂರಿನಲ್ಲಿ 5 ಎಕರೆ ವಿಸ್ತೀರ್ಣದಲ್ಲ ಶೀತಲ ಗೃಹ ನಿರ್ಮಾಣ ಮಾಡಲು ಪ್ರಸ್ತಾವಿಸಿರುವುದು ಗೊತ್ತಾಗಿದೆ. ಅದೇ ರೀತಿ ಯಲಬುರ್ಗಾ, ವಿಜಯಪುರ, ರಾಣೆಬೆನ್ನೂರು, ಬ್ಯಾಡಗಿ, ಗದಗ್‌ನಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 50 ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹಗಳನ್ನು ನಿರ್ಮಿಸಲಿದೆ.

ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ಚಿಕ್ಕಬಳ್ಳಾಪುರದ ದೊಡ್ಡಮರಳಿ ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಿಸಲಿದೆ. ಇದಕ್ಕಾಗಿ 25 ಕೋಟಿ ರೂ. ಕಾಯ್ದಿರಿಸಲಿದೆ ಎಂದು ಪ್ರಸ್ತಾವದಲ್ಲಿ ವಿವರಿಸಿದೆ.

ರೈತರ ಆತ್ಮಹತ್ಯೆ, ಬರ, ರೈತರ ಸಾಲಮನ್ನಾ ಕುರಿತಾದ ವಿಷಯಗಳು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ರಾಜ್ಯದ ಸಹಕಾರ ಸಂಘಗಳಲ್ಲಿ ಕೃಷಿ ಸಾಲ ಪಡೆದಿದ್ದ 31.65 ಲಕ್ಷ ರೈತರು 25,547.02 ಕೋಟಿ ರೂ. ಸಾಲ ಹೊರಬಾಕಿ ಹೊಂದಿದ್ದಾರೆ ಎಂಬ ಅಂಕಿ ಅಂಶಗಳನ್ನು ವಿಧಾನಸಭೆಗೆ ಮಂಡಿಸಲಾಗಿತ್ತು.

ರೈತರ ಸಾಲ ಮನ್ನಾ ಮಾಡುವ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಬೆಳಗಾವಿ ಅಧಿವೇಶನದಲ್ಲಿ ಈಗಾಗಲೇ ರಾಜ್ಯ ಸರಕಾರವು ಸ್ಪಷ್ಟಪಡಿಸಿದೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ರೈತರು ಪಡೆದಿರುವ 50 ಸಾವಿರ ಮತ್ತು 1 ಲಕ್ಷ ರೂ. ಸಾಲವನ್ನು ಮನ್ನಾ ಮಾಡುವ ಸಂಬಂಧ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ರೈತರಿಗೆ ಸಂಬಂಧಿಸಿದಂತೆ ನೀಡಿರುವ ಹಸಿರು ಪಟ್ಟಿಗೆ ಆರ್ಥಿಕ ಇಲಾಖೆಯು ಕೊಕ್ಕೆ ಹಾಕಿತ್ತು.

2023ರ ನವೆಂಬರ್ 20ರ ಅಂತ್ಯಕ್ಕೆ ಸಹಕಾರ ಸಂಘಗಳಲ್ಲಿ 29.75 ಲಕ್ಷ ರೂ. ರೈತರು 21,912.14 ಕೋಟಿ ರೂ.ಗಳ ಅಲ್ಪಾವಧಿ ಸಾಲ ಮತ್ತು 1.91 ಲಕ್ಷ ರೈತರು 3,634.88 ಕೋಟಿ ರೂ.ಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ಹೀಗೆ ಒಟ್ಟು 31.65 ಲಕ್ಷ ರೂ. ರೈತರು 25,547.02 ಕೋಟಿ ರೂ. ಕೃಷಿ ಸಾಲದ ಹೊರಬಾಕಿ ಹೊಂದಿರುತ್ತಾರೆ ಎಂಬ ಅಂಕಿ ಅಂಶಗಳನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸದನಕ್ಕೆ ಒದಗಿಸಿದ್ದರು. ರಾಜ್ಯದಲ್ಲಿ ಹೊಸದಾಗಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಅಂದರೆ 2023ರ ಮೇ 20ರಿಂದ 2023ರ ನವೆಂಬರ್ 1ರವರೆಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಹಾಗೂ ಶೇ.3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಿತ್ತು. ಈ ಪೈಕಿ 5 ಲಕ್ಷ ರೂ.ವರೆಗಿನ ಅಲ್ಪಾವಧಿ ಕೃಷಿ ಸಾಲವನ್ನು 2,372 ರೈತರಿಗೆ ವಿತರಿಸಿತ್ತು ಎಂದು ಮಾಹಿತಿ ಒದಗಿಸಿದ್ದರು.

ಅಲ್ಪಾವಧಿ ಕೃಷಿ ಸಾಲ 10,38,085.94 ಲಕ್ಷ ರೂ., ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ 38,160.32 ಲಕ್ಷ ರೂ., ಸೇರಿ ಒಟ್ಟು ಕೃಷಿ ಸಾಲ 10,76,246.00 ಲಕ್ಷ ರೂ. ಸಾಲ ವಿತರಿಸಿದೆ.

‘ಅಲ್ಲದೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ಹಸಿರು ಪಟ್ಟಿಗಳನ್ನು ಬಿಡುಗಡೆಗೊಳಿಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಸಹಕಾರ ಸಂಘಗಳ ನಿಬಂಧಕರ ಕಚೇರಿಯಿಂದಲೂ ಪ್ರಸ್ತಾವಗಳು ಸಲ್ಲಿಕೆಯಾಗುತ್ತಿವೆ. ಮುಂಬರುವ ದಿನಗಳಲ್ಲಿ 18,965 ಸಂಖ್ಯೆಯ ರೈತರು ಹಸಿರು ಪಟ್ಟಿಗೆ ಸೇರುವುದರಿಂದ ಈ ಒಂದು ಪ್ರಕರಣದಲ್ಲಿ ಅನುದಾನ ಒದಗಿಸಿದ ಪಕ್ಷದಲ್ಲಿ ಬಹಳ ವರ್ಷಗಳವರೆಗೂ ಅನುದಾನ ಒದಗಿಸುತ್ತ ಇರಬೇಕಾಗುವುದು ಆದ್ದರಿಂದ 2021ರ ಮಾರ್ಚ್ 6ರಂದು ತಳೆದಿದ್ದ ನಿಲುವಿಗೆ ಬದ್ಧವಾಗಿರಬೇಕು,’ ಎಂದು ಆರ್ಥಿಕ ಇಲಾಖೆಯು ಅಭಿಪ್ರಾಯ ನೀಡಿತ್ತು.

ಕಳೆದ ಆರ್ಥಿಕ ವರ್ಷದಲ್ಲಿ ಎಲ್ಲ ಪೈಪ್‌ಲೈನ್ ಪ್ರಕರಣಗಳನ್ನು ತೆರವುಗೊಳಿಸಿ ಈ ಯೋಜನೆಯನ್ನು ಮುಕ್ತಾಯಗೊಳಿಸಲು ನಿರ್ದೇಶಿಸಲಾಗಿತ್ತು. ಅಲ್ಲದೆ ಹೆಚ್ಚುವರಿ ಅನುದಾನವನ್ನೂ ಒದಗಿಸಲಾಗಿತ್ತು. ಹೀಗಾಗಿ ಈ ಯೋಜನೆಯನ್ನು ಪುನರ್ ತೆರೆಯುವ ಹಾಗೂ ಈ ಪ್ರಕರಣಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಪ್ರಮೇಯವೇ ಇಲ್ಲ ಎಂದು ಆರ್ಥಿಕ ಇಲಾಖೆಯು 2021ರ ಮಾರ್ಚ್ 6ರಂದು ಹಿಂಬರಹ ನೀಡಿತ್ತು.

2021ರ ಸೆ.7ರ ಹೊತ್ತಿಗೆ 20,697 ರೈತರ ಅರ್ಹತೆ ಗುರುತಿಸಲು ಬಾಕಿ ಇತ್ತು. ಇದರಲ್ಲಿ ಪ್ರಮುಖವಾಗಿ 12,237 ರೈತರ ಪಡಿತರ ಚೀಟಿಗಳು ರೈತರು ದಾಖಲೆ ಸಲ್ಲಿಸುವಾಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ದತ್ತಾಂಶಕ್ಕೆ ತಾಳೆ ಇತ್ತು. ಆದರೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಸಾಲ ಮನ್ನಾ ವಿಶೇಷ ಕೋಶವು ಈ ಪಡಿತರ ಚೀಟಿಗಳನ್ನು ತಂತ್ರಾಂಶದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸರಿ ಇದೆ ಎಂದು ದೃಢೀಕರಿಸಿರಲಿಲ್ಲ.

ಸಹಕಾರಿ ಸಂಸ್ಥೆಗಳ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲ: ಬಡ್ಡಿ ಮನ್ನಾ ಮಾಡಿ ಸರಕಾರ ಆದೇಶ

ಬೆಂಗಳೂರು: ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿ.31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಬಡ್ಡಿ ಮನ್ನಾ ಸಂಬಂಧ ಘೋಷಣೆ ಮಾಡಿದ್ದರು. ಇದೀಗ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ರೈತರು ರಾಜ್ಯದ ಸಹಕಾರ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳಿಂದ ಸಾಲ ಪಡೆದು 31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಫೆ.29, 2024ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕ್‌ಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮಂಜೂರಾತಿ ನೀಡಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X