Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅನಾಥ ಮೃತದೇಹಗಳ ಅಂತಿಮ ಸಂಸ್ಕಾರ ನಡೆಸುವ...

ಅನಾಥ ಮೃತದೇಹಗಳ ಅಂತಿಮ ಸಂಸ್ಕಾರ ನಡೆಸುವ ‘ಪ್ರೀತಿ’

ನಿರ್ಗತಿಕರಿಗೆ ಆಸರೆಯಾದ ‘ಅಮ್ಮನ ಮಡಿಲು’ ಅನಾಥಾಶ್ರಮ

ಯೋಗೇಶ್ ಮಲ್ಲೂರುಯೋಗೇಶ್ ಮಲ್ಲೂರು5 Aug 2024 12:11 PM IST
share
ಅನಾಥ ಮೃತದೇಹಗಳ ಅಂತಿಮ ಸಂಸ್ಕಾರ ನಡೆಸುವ ‘ಪ್ರೀತಿ’

ಬೆಂಗಳೂರು: ಸಮಾಜಸೇವೆ ಮಾಡಲು ಇಂತಹ ಕ್ಷೇತ್ರಗಳೇ ಆಗಬೇಕೆಂದೇನಿಲ್ಲ ಎಂಬುದನ್ನು ರಾಮನಗರ ಜಿಲ್ಲೆಯ ಡಿ.ಎಂ.ಪ್ರೀತಿ ಎಂಬ ಮಹಿಳೆಯು ತೋರಿಸಿಕೊಟ್ಟಿದ್ದಾರೆ. ಹೌದು, ಅನಾಥ ಮೃತದೇಹಗಳಿಗೆ ಅಂತಿಮ ಸಂಸ್ಕಾರ, ಮೃತದೇಹಗಳನ್ನು ವಾರಸುದಾರರಿಗೆ ತಲುಪಿಸುವ ಕೆಲಸ, ‘ಸಾವಿತ್ರಿಬಾಯಿ ಫುಲೆ ಟ್ರಸ್ಟ್’ ಸ್ಥಾಪಿಸುವುದರ ಜೊತೆಗೆ, ನಿರಾಶ್ರಿತ ವೃದ್ಧರು ಹಾಗೂ ಅನಾಥರಿಗಾಗಿ ‘ಅಮ್ಮನ ಮಡಿಲು’ ಅನಾಥಾಶ್ರಮ ತೆರೆಯುವ ಮೂಲಕ ಸದ್ದಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿಸಿದ್ದಾರೆ.

ಡಿ.ಎಂ.ಪ್ರೀತಿ ಅವರು ಏಳೆಂಟು ವರ್ಷಗಳಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ, ವಿಶೇಷವಾಗಿ ಕ್ರೈಂ ಪ್ರಕರಣಗಳಲ್ಲಿ ಪರಿಚಯ ಸಿಗದ ಅನಾಥ ಮೃತದೇಹಗಳ ಅಂತಿಮ ಸಂಸ್ಕಾರ ನಡೆಸುತ್ತಿದ್ದಾರೆ. ನೀರಿನಲ್ಲಿ ಮುಳುಗಿ ನಾರುತ್ತಿರುವ ಮೃತದೇಹ, ರೈಲಿಗೆ ಸಿಲುಕಿ ಛಿದ್ರಗೊಂಡ ದೇಹಗಳಿರಲಿ ಯಾವುದನ್ನೂ ಲೆಕ್ಕಿಸದೇ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ. ಹಣದ ತೊಂದರೆಯಿಂದ ಚಿಕಿತ್ಸೆಯಿಲ್ಲದೇ ಮನೆಯಿಂದ ಹೊರದೂಡಲ್ಪಟ್ಟ ಬಹಳಷ್ಟು ವ್ಯಕ್ತಿಗಳು ಮೃತಪಟ್ಟಾಗ, ಮೃತದೇಹಗಳಿಗೆ ಸಂಸ್ಕಾರ ಮಾಡಿದ್ದೇನೆ. ರಾಮನಗರ, ಚನ್ನಪಟ್ಟಣ, ಮಾಗಡಿ ವ್ಯಾಪ್ತಿಗಳಲ್ಲಿ ಮೃತದೇಹಗಳ ವಾರಸುದಾರರ ವಿಳಾಸ ಪತ್ತೆಹಚ್ಚಿ, ಅವರನ್ನು ಸ್ಥಳಕ್ಕೆ ಬರಮಾಡಿಕೊಂಡು, ಮೃತದೇಹವನ್ನು ವಾರಸುದಾರರಿಗೆ ನೀಡಿದ ನಿದರ್ಶನಗಳೂ ಇವೆ ಎನ್ನುತ್ತಾರೆ ಡಿ.ಎಂ.ಪ್ರೀತಿ.

ಅಮ್ಮನ ಮಡಿಲು ಅನಾಥಶ್ರಮ ತೆರೆದಿರುವ ಪ್ರೀತಿ ಅವರು ಅನ್ನ, ಆಶ್ರಯದೊಂದಿಗೆ ಅಲ್ಲಿನ ಮಕ್ಕಳ ವಿದ್ಯಾಭ್ಯಾಸ, ಆಟೊಪಚಾರಗಳಿಗೂ ಪ್ರೋತ್ಸಾಹ ನೀಡುತ್ತಿದ್ದಾರೆ. ಇದಿಷ್ಟೇ ಅಲ್ಲದೆ, ಕೌಟುಂಬಿಕ ಆಪ್ತ ಸಮಾಲೋಚನೆ, ಸತಿ-ಪತಿ, ಅತ್ತೆ-ಸೊಸೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಸಮಸ್ಯೆಗಳ ಬಗ್ಗೆಯೂ ಆಪ್ತ ಸಮಾಲೋಚನೆಯನ್ನೂ ನಡೆಸುತ್ತಾರೆ.. ಹೀಗೆ ಪ್ರೀತಿ ಅವರ ಸಾಮಾಜಿಕ ಕಳಕಳಿ ಹೊತ್ತ ಸಾರ್ಥಕ ಕೆಲಸಗಳ ಪಟ್ಟಿ ಬೆಳೆಯುತ್ತಲೇ ಇದೆ.

ಹಲವು ಸಂಘಟನೆಗಳಲ್ಲಿ ಸೇವೆ

ಪ್ರಜಾ ಪರಿವರ್ತನಾ ವೇದಿಕೆಯ ರಾಮನಗರ ಜಿಲ್ಲಾಧ್ಯಕ್ಷೆಯಾಗಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಮನಗರ ತಾಲೂಕು ಘಟಕದ ಅಧ್ಯಕ್ಷೆಯಾಗಿ, ರಾಮನಗರ ತಾಲೂಕು ಸ್ತ್ರೀ ಶಕ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆಯಾಗಿ ಹೀಗೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಮಹಿಳಾ ಸಬಲೀಕರಣದ ವಿಚಾರವಾಗಿ ಸಾಕಷ್ಟು ಸೇವೆಯನ್ನು ಸಲ್ಲಿಸಿರುವ ಪ್ರೀತಿ ಅವರು, ‘ನಮಗೆ ಜೀವನ ಕೊಟ್ಟ ಈ ಸಮಾಜಕ್ಕೆ ಏನಾದರೂ ಒಳ್ಳೆಯ ಕೆಲಸ ಮಾಡಬೇಕು ತುಡಿತವಿದೆ. ನನ್ನ ವಿದ್ಯಾರ್ಥಿ ಜೀವನದಲ್ಲೇ, ಸಮಾಜಕ್ಕೆ ನನ್ನ ಕೈಯಲ್ಲಾದ ಏನಾದರೂ ಕೆಲಸ ಮಾಡಬೇಕು ಎಂದೆನಿಸಿತು. ಅದನ್ನು ಇದುವರೆಗೂ ಮುಂದುವರಿಸಿಕೊಂಡು ಬಂದಿದ್ದೇನೆ’ ಎನ್ನುತ್ತಾರೆ.

ಮೃತದೇಹಗಳ ಮಾಹಿತಿ ಹೇಗೆ?

ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತೀ ತಿಂಗಳಿಗೆ ಕನಿಷ್ಠ ನಾಲ್ಕೈದು ಅನಾಥ ಮೃತದೇಹಗಳ ಸಂಸ್ಕಾರದಲ್ಲಿ ತೊಡಗುವ ಪ್ರೀತಿ ಅವರಿಗೆ ಮುಖ್ಯವಾಗಿ ಪೊಲೀಸ್ ಇಲಾಖೆಯವರ ಸಹಕಾರದಿಂದಾಗಿ ಅನಾಥ ಮೃತದೇಹಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ. ಉಳಿದಂತೆ, ಆಟೊ, ಆ್ಯಂಬುಲೆನ್ಸ್ ಚಾಲಕರು ಹಾಗೂ ಪ್ರೀತಿ ಅವರ ಸೇವೆಯ ಬಗ್ಗೆ ಗೊತ್ತಿರುವ ಜನ ಸಾಮಾನ್ಯರಿಂದಲೂ ಅವರಿಗೆ ಮಾಹಿತಿ ದೊರೆಯುತ್ತದೆ. ಅಲ್ಲದೆ, ಕರ್ನಾಟಕ ರೈತಸಂಘ, ಹಸಿರುಸೇನೆ ಸೇರಿದಂತೆ ಅನೇಕ ಸಮಾನ ಮನಸ್ಕ ವೇದಿಕೆಗಳು ಇವರ ಬೆಂಬಲಕ್ಕೆ ನಿಂತಿವೆ.


share
ಯೋಗೇಶ್ ಮಲ್ಲೂರು
ಯೋಗೇಶ್ ಮಲ್ಲೂರು
Next Story
X