Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೆಂಗಳೂರಿನ ಪುಸ್ತಕ ಮನೆ ಕೋಲಾರ ಜಿಲ್ಲೆಗೆ...

ಬೆಂಗಳೂರಿನ ಪುಸ್ತಕ ಮನೆ ಕೋಲಾರ ಜಿಲ್ಲೆಗೆ ಸ್ಥಳಾಂತರ; ಸಾಹಿತ್ಯಾಸಕ್ತರಿಗೆ ಸಂತಸ

ಸಿ.ವಿ.ನಾಗರಾಜ್. ಕೋಲಾರಸಿ.ವಿ.ನಾಗರಾಜ್. ಕೋಲಾರ29 Jan 2024 8:32 AM IST
share
ಬೆಂಗಳೂರಿನ ಪುಸ್ತಕ ಮನೆ ಕೋಲಾರ ಜಿಲ್ಲೆಗೆ ಸ್ಥಳಾಂತರ; ಸಾಹಿತ್ಯಾಸಕ್ತರಿಗೆ ಸಂತಸ

ಕೋಲಾರ: ಪುಸ್ತಕ ಪ್ರೇಮಿ ಹರಿಹರಪ್ರಿಯ ಐದಾರು ದಶಕಗಳಿಂದ ಸಂಗ್ರಹಿಸಿದ್ದ ಸುಮಾರು ಐದು ಲಕ್ಷ ಪುಸ್ತಕಗಳಿದ್ದ ಪುಸ್ತಕ ಮನೆಯನ್ನು ಬೆಂಗಳೂರಿನಿಂದ ಕೋಲಾರ ಜಿಲ್ಲೆಯ ಮಾಲೂರಿಗೆ ಸ್ಥಳಾಂತರಿಸಲಾಗಿದೆ.

ಲಕ್ಷಾಂತರ ಸಂಖ್ಯೆಯ ಅಪರೂಪದ ಪುಸ್ತಕಗಳ ಸಂಗ್ರಹದ ಗಣಿ ಎಂದೇ ಖ್ಯಾತಿ ಪಡೆದಿರುವ ಹರಿಹರಪ್ರಿಯ ಪುಸ್ತಕ ಮನೆಯನ್ನು ರಾಜಧಾನಿ ಬೆಂಗಳೂರಿನಿಂದ ಕೋಲಾರ ಜಿಲ್ಲೆಯ ಮಾಲೂರಿಗೆ ಸ್ಥಳಾಂತರ ಮಾಡಿರುವುದು ಜಿಲ್ಲೆಯ ಓದುಗರಿಗೆ ಹಾಗೂ ಸಾಹಿತ್ಯಾಸಕ್ತರಿಗೆ ಸಂತಸದ ಸಂಗತಿಯಾಗಿದೆ.

ವಿದ್ಯಾಂಸ ಹರಿಹರಪ್ರಿಯ ಮೊದಲು ಬೆಂಗಳೂರಿನ ವಾಜರಹಳ್ಳಿಯ ತಮ್ಮ ನಿವಾಸದಲ್ಲಿ ಇರಿಸಿದ್ದರು. ಐದು ದಿನಗಳ ಹಿಂದೆ ಎಲ್ಲ ಪುಸ್ತಕಗಳನ್ನು ಆರು ಲಾರಿಗಳಲ್ಲಿ ಮಾಲೂರಿಗೆ ಸ್ಥಳಾಂತರಿಸಿದ್ದು, ರಾಜಧಾನಿಯ ಪುಸ್ತಕ ಪ್ರಿಯರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂಕಟವನ್ನು ವ್ಯಕ್ತಪಡಿಸಿದ್ದಾರೆ. ಇದು ಬೆಂಗಳೂರಿನ ಓದುಗರಿಗೆ ನಷ್ಟ ಉಂಟು ಮಾಡಿದರೆ ಕೋಲಾರ ಜಿಲ್ಲೆಯ ಓದುಗ ಪ್ರಿಯರಿಗೆ ಖುಷಿಯ ವಿಚಾರವಾಗಿದೆ.

ಮಾಲೂರಿನ ಹೊರವಲಯದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿನ ತಮ್ಮ ಪುತ್ರಿ ಜಾಗೃತಿಪ್ರಿಯ ಸಾತವಲ್ಲಿ ನಿವೇಶನದಲ್ಲಿ ನಿರ್ಮಿಸಿರುವ ಶೆಡ್ಡಿನಾಕಾರದ ಮನೆಯಲ್ಲಿ ಪುಸ್ತಕಗಳನ್ನು ಇರಿಸಿದ್ದಾರೆ. ಇನ್ನೂ ಜೋಡಿಸಬೇಕಾದ ಕೆಲಸ ಬಾಕಿ ಇದೆ.

ಪುಸ್ತಕ ಭಂಡಾರವು ವಿದ್ವಾಂಸರು, ಸಂಶೋಧಕರು, ಅಧ್ಯಯನಶೀಲರಿಗೆ ಆಕರ ಗ್ರಂಥಾಲಯವಾಗಿದೆ. ಇಲ್ಲಿಗೆ ಬಂದು ಓದಿ ಹೋಗಬಹುದು. ಕೇಳಿದ ಪುಸ್ತಕವನ್ನು ನಾನೇ ಖುದ್ದಾಗಿ ತೆಗೆದುಕೊಡುತ್ತೇನೆ. ಕನ್ನಡ, ತೆಲುಗು ಹಾಗೂ ಇಂಗ್ಲಿಷ್ ಪುಸ್ತಕಗಳಿವೆ. ಇದರಲ್ಲಿ ಶೇ.5ರಷ್ಟು ಪುಸ್ತಕಗಳು ಗೆಳೆಯರು ನೀಡಿದ್ದು. ಇನ್ನುಳಿದವನ್ನು ದುಡಿಮೆಯಿಂದ ಖರೀದಿಸಿದ್ದೇನೆ ಎಂದು ಹರಿಹರಪ್ರಿಯ ಹೇಳಿದರು.

ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಅಭಿಮಾನ ಹೊಂದಿರುವ 72 ವಯಸ್ಸಿನ ಹರಿಹರಪ್ರಿಯ, 10ನೇ ವಯಸ್ಸಿನಿಂದಲೇ ಪುಸ್ತಕ ಸಂಗ್ರಹಿಸುತ್ತಿದ್ದಾರೆ. ಬರವಣಿಗೆ, ಉಪನ್ಯಾಸಗಳಲ್ಲಿ ತೊಡಗಿರುವ ಅವರು ಸುಮಾರು 110 ಕೃತಿ ಬರೆದಿದ್ದಾರೆ. ಸಾಹಿತ್ಯ ಕೃತಿಗಳು ಸೇರಿದಂತೆ ತಾವು ಸಂಗ್ರಹಿಸಿದ ಪುಸ್ತಕಗಳನ್ನು 1992ರಿಂದ ಸಾರ್ವಜನಿಕ ವೀಕ್ಷಣೆಗೆ, ಮಾಹಿತಿಗೆ ಮುಕ್ತಗೊಳಿಸಿದ್ದಾರೆ.

ಹಣ ತೆಗೆದುಕೊಂಡು ಬಾಷಣ ಮಾಡುತ್ತೇನೆ. ಅಷ್ಟನ್ನೂ ಪುಸ್ತಕ ಖರೀದಿಸಲು ಬಳಸುತ್ತೇನೆ. ಸರಕಾರದಿಂದ ಯಾವುದೇ ನೆರವು ಪಡೆದಿಲ್ಲ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಹಲವರು ನೆರವು ನೀಡಲು ಮುಂದೆ ಬಂದಿದ್ದಾರೆ. ಪುಸ್ತಕ ಜೋಡಿಸಿಡಲು 300 ಬೀರುಗಳ ಅಗತ್ಯವಿದೆ. ಇನ್ನೂ ಹೆಚ್ಚಿನ ಜಾಗದ ಅವಶ್ಯವಿದೆ ಎಂದರು.

share
ಸಿ.ವಿ.ನಾಗರಾಜ್. ಕೋಲಾರ
ಸಿ.ವಿ.ನಾಗರಾಜ್. ಕೋಲಾರ
Next Story
X