Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭದ್ರಾ ಅಭಯಾರಣ್ಯದ ಅಪರೂಪದ ಅತಿಥಿ ಕಪ್ಪು...

ಭದ್ರಾ ಅಭಯಾರಣ್ಯದ ಅಪರೂಪದ ಅತಿಥಿ ಕಪ್ಪು ಚಿರತೆ

ಕೆ.ಎಲ್.ಶಿವು, ಚಿಕ್ಕಮಗಳೂರುಕೆ.ಎಲ್.ಶಿವು, ಚಿಕ್ಕಮಗಳೂರು23 March 2026 8:50 AM IST
share
ಭದ್ರಾ ಅಭಯಾರಣ್ಯದ ಅಪರೂಪದ ಅತಿಥಿ ಕಪ್ಪು ಚಿರತೆ
ಸಫಾರಿಗೆ ಹೆಚ್ಚಿದ ಬೇಡಿಕೆ

ಚಿಕ್ಕಮಗಳೂರು: ಬಂಡಿಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಭದ್ರಾ ಹುಲಿ ಅಭಯಾರಣ್ಯದ ವ್ಯಾಪ್ತಿಯ ಲಕ್ಕವಳ್ಳಿ ಹಾಗೂ ಮುತ್ತೋಡಿ ಅಭಯಾರಣ್ಯಕ್ಕೆ ಪ್ರಾಣಿ ಪ್ರಿಯರು ದಾಂಗುಡಿ ಇಡುತ್ತಿದ್ದಾರೆ. ಅದರಲ್ಲೂ ನಿರಂತರವಾಗಿ ಕಳೆದೊಂದು ವಾರದಿಂದ ಕಪ್ಪು ಚಿರತೆ - ಚುಕ್ಕಿ ಚಿರತೆ ಗೋಚರಿಸುತ್ತಿರುವುದರಿಂದ ಸಹಜವಾಗಿಯೇ ಸಫಾರಿ ಪ್ರಿಯರ ಸಂಖ್ಯೆ ದುಪ್ಪಟ್ಟಾಗುತ್ತಿದೆ.

ಕರ್ನಾಟಕದ ಪಶ್ಚಿಮ ಘಟ್ಟದ ಹೃದಯ ಭಾಗದಲ್ಲಿರುವ ಭದ್ರಾ ಹುಲಿ ಸಂರಕ್ಷಿತ ಪ್ರದೇಶವು ಅಪಾರ ವನ್ಯಜೀವಿಗಳ ಆವಾಸಸ್ಥಾನ. 500 ಚದರ ಕಿ.ಮೀ.ಗಳಷ್ಟು ವಿಸ್ತಾರವಾಗಿ ವ್ಯಾಪಿಸಿರುವ ಈ ಅಭಯಾರಣ್ಯ ಜೀವ ವೈವಿಧ್ಯತೆಯ ಆಗರವಾಗಿದೆ. ಇದು ಹುಲಿ ಸೇರಿದಂತೆ ವಿವಿಧ ಪ್ರಾಣಿ ಮತ್ತು ಸಸ್ಯ ಪ್ರಭೇದಗಳಿಗೆ ನೆಲೆಯಾಗಿದೆ. ಪರಿಣಾಮಕಾರಿ ಸಂರಕ್ಷಣ ಕ್ರಮಗಳಿಂದಾಗಿ ಜೀವ ವೈವಿಧ್ಯತೆ, ಪರಿಸರ ಪ್ರವಾಸೋದ್ಯಮದ ಅವಕಾಶಗಳು ತೆರೆದುಕೊಂಡಿವೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶವು ಮಾನವ ರಹಿತ ವನ್ಯಜೀವಿಗಳ ಆವಾಸಸ್ಥಾನವಾಗಿ ಮಾರ್ಪಟ್ಟು, ಮಾದರಿ ಅಭಯಾರಣ್ಯವಾಗಿ 25 ವರ್ಷಗಳು ತುಂಬಿದ್ದು, ಈ ಕಾನನದಲ್ಲಿ ಆನೆ ಸೇರಿದಂತೆ ಹುಲಿ, ಚಿರತೆ, ಕಾಟಿ, ಜಿಂಕೆಗಳ ಜತೆಗೆ ಹುಲಿ ಬೆಕ್ಕು, ಕೆನ್ನಾಯಿ, ನರಿ, ಕರಡಿ, ಕಾಡು ಕುರಿ, ಕಾಡು ಹಂದಿ, ಕಡವೆ, ಮುಸೆಯಾ, ಕಾಡು ಪಾಪ ಮತ್ತು ಅಪರೂಪದ ಕೆಂದಳಿಲು, ಹಾರುವ ಓತಿ, ಮುಳ್ಳು ಹಂದಿ, ನೀರು ನಾಯಿ, ಪುನುಗಿನ ಬೆಕ್ಕು, ಮೊಸಳೆಯಂತಹ ಅಪಾರ ವನ್ಯಸಂಪತ್ತನ್ನು ಹೊಂದಿದೆ. ಶೋಲಾ ಕಾಡುಗಳು ಸೇರಿದಂತೆ ಎಲೆ ಉದುರುವ ಕಾಡು, ನಿತ್ಯಹರಿದ್ವರ್ಣದ ಕಾಡು, ಹುಲ್ಲುಗಾವಲಿನಿಂದ ಈ ಕಾನನ ಆವರಿಸಿದ್ದು, ವರ್ಷವಿಡೀ ಕಾಡು ಪ್ರಾಣಿಗಳ ಆಶ್ರಯತಾಣವಾಗಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 33ಕ್ಕೂ ಹೆಚ್ಚು ಹುಲಿಗಳು, 445 ಆನೆ, 119 ಚಿರತೆ ಸೇರಿದಂತೆ ಕಾಡುಕೋಣ ಸಂತತಿಯೂ ಇತ್ತೀಚೆಗೆ ಹೆಚ್ಚಾಗಿದ್ದು, ಈ ಕಾನನದತ್ತ ಈಗ ಪ್ರಾಣಿ ಪ್ರಿಯರ ಚಿತ್ತ ನೆಟ್ಟಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕಾಡಂಚಿನಲ್ಲಿ ಕೆಲ ತಿಂಗಳುಗಳ ಹಿಂದೆ ಹುಲಿ ದಾಳಿ ಹೆಚ್ಚಿದ ಪರಿಣಾಮವಾಗಿ ನಾಗರಹೊಳೆ ಹಾಗೂ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಸಫಾರಿ, ಚಾರಣವನ್ನು ನ.7ರಿಂದ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆಯಂತೆ ಬಂದ್ ಮಾಡಲಾಗಿದೆ. ಇದರ ಪರಿಣಾಮ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಸಫಾರಿಗೆ ಅವಕಾಶ ಇರುವುದರಿಂದ ಮುತ್ತೋಡಿ, ಭದ್ರಾ ಹಿನ್ನೀರಿನ ವ್ಯಾಪ್ತಿಯಲ್ಲಿರುವ ಲಕ್ಕವಳ್ಳಿ ವಿಭಾಗದಲ್ಲಿ ಕಳೆದ ಎರಡು ತಿಂಗಳುಗಳಿಂದ ಪ್ರಾಣಿ ಪ್ರಿಯರು ಸೇರಿದಂತೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಸಾಲು ಸಾಲು ರಜೆ, ವಾರಂತ್ಯಗಳಲ್ಲಿ ಪ್ರಾಣಿ ಪ್ರಿಯರ ದಂಡು ಭದ್ರಾದತ್ತ ನೆಟ್ಟಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯ ಹಾಗೂ ವಿದೇಶಿ ಪ್ರವಾಸಿಗರೂ ಇತ್ತ ಆಗಮಿಸುತ್ತಿದ್ದಾರೆ.

ಚುಕ್ಕಿ ಚಿರತೆ-ಕರಿಚಿರತೆ ಜೋಡಿ :

ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಆಗಾಗ ಕರಿ ಚಿರತೆ ಪತ್ತೆಯಾಗುತ್ತಿತ್ತು. ಆ ಸಂದರ್ಭದಲ್ಲಿ ವನ್ಯಜೀವಿ ಛಾಯಾಗ್ರಾಹಕರು ಸೇರಿದಂತೆ ಸಾವಿರಾರು ಪ್ರವಾಸಿಗರು ಮೈಸೂರಿನತ್ತ ಮುಖ ಮಾಡುತ್ತಿದ್ದರು. ಆದರೆ, ಕಳೆದ ಕೆಲ ತಿಂಗಳುಗಳಿಂದ ಭದ್ರಾ ಅಭಯಾರಣ್ಯದ ಲಕ್ಕವಳ್ಳಿ ವಿಭಾಗದಲ್ಲಿ ಚುಕ್ಕಿ ಚಿರತೆಯ ಜತೆಗೆ ಕರಿ ಚಿರತೆ ಪ್ರತ್ಯಕ್ಷವಾಗುತ್ತಿರುವುದರಿಂದ ವನ್ಯಜೀವಿ ಛಾಯಾಗ್ರಾಹಕರು ಸೇರಿದಂತೆ ಪ್ರಾಣಿಪ್ರಿಯರು ಹೆಚ್ಚು ಆಗಮಿಸುತ್ತಿದ್ದಾರೆ. ಇದರ ಪರಿಣಾಮ ಇಲ್ಲಿನ ಅರಣ್ಯ ವಿಭಾಗದ ಪ್ರವಾಸೋದ್ಯಮದಲ್ಲಿಯೂ ಚೇತರಿಕೆ ಕಂಡಿದ್ದು, ಪ್ರವಾಸಿಗರ ಸಂಖ್ಯೆ ಸ್ವಲ್ಪ ದಿನಗಳವರೆಗೆ ದುಪ್ಪಟ್ಟಾಗುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

Tags

Black leopard
share
ಕೆ.ಎಲ್.ಶಿವು, ಚಿಕ್ಕಮಗಳೂರು
ಕೆ.ಎಲ್.ಶಿವು, ಚಿಕ್ಕಮಗಳೂರು
Next Story
X