Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹಸಿರು ಗುಡ್ಡಗಳ ಮಧ್ಯ ಧುಮ್ಮಿಕುವ...

ಹಸಿರು ಗುಡ್ಡಗಳ ಮಧ್ಯ ಧುಮ್ಮಿಕುವ ಚಿಂತನಹಳ್ಳಿಯ ಜಲಪಾತ

ವಾರ್ತಾಭಾರತಿವಾರ್ತಾಭಾರತಿ10 Nov 2025 10:34 AM IST
share
ಹಸಿರು ಗುಡ್ಡಗಳ ಮಧ್ಯ ಧುಮ್ಮಿಕುವ ಚಿಂತನಹಳ್ಳಿಯ ಜಲಪಾತ

ಗವಿ ಸಿದ್ಧಲಿಂಗೇಶ್ವರ ಜಲಧಾರೆ ತಾಲೂಕಿನ ಪ್ರಮುಖ ಪ್ರವಾಸಿ ಆಕರ್ಷಣೆ. ಆದರೆ ರಸ್ತೆ, ಕುಳಿತುಕೊಳ್ಳುವ ಸ್ಥಳ, ಶೌಚಾಲಯ ಮತ್ತು ಕಸದ ನಿರ್ವಹಣೆಯಂತಹ ಮೂಲಭೂತ ಸೌಕರ್ಯಗಳ ಕೊರತೆ ಇನ್ನೂ ಕಾಡುತ್ತಿದೆ. ಸರಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದರೆ, ಈ ತಾಣವು ಕಲ್ಯಾಣ ಕರ್ನಾಟಕದ ನೈಸರ್ಗಿಕ ನಕ್ಷೆಯಲ್ಲಿ ಪ್ರಭಾವಶಾಲಿ ಸ್ಥಾನ ಪಡೆಯಲಿದೆ.

- ಉಮೇಶ್ ಕೆ.ಮುದ್ನಾಳ, ಸಾಮಾಜಿಕ ಹೋರಾಟಗಾರ




ಯಾದಗಿರಿ: ಗುರುಮಠಕಲ್ ತಾಲೂಕಿನ ಚಿಂತನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗವಿ ಸಿದ್ಧಲಿಂಗೇಶ್ವರ ಜಲಧಾರೆ, ಕಲ್ಯಾಣ ಕರ್ನಾಟಕದ ನೈಸರ್ಗಿಕ ರತ್ನವಾಗಿ ಹೊರಹೊಮ್ಮಿದೆ. ಮಲೆನಾಡಿನ ಹಸಿರು ನೆಲದ ಸೊಬಗನ್ನೇ ಹೋಲುತ್ತದೆ ಈ ಜಲಪಾತ.

ಹಸಿರು ಗುಡ್ಡಗಳ ಮಧ್ಯೆ ಧುಮ್ಮಿಕ್ಕುವ ಈ ಜಲಪಾತ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹಕ್ಕಿಗಳ ಚಿಲಿಪಿಲಿ ಮನಸ್ಸಿಗೆ ಮುದ ನೀಡುತ್ತದೆ.

ಗವಿ ಸಿದ್ಧಲಿಂಗೇಶ್ವರರ ಈ ತಾಣವು ಕೇವಲ ಪ್ರವಾಸಿಗರ ಆಕರ್ಷಣೆ ಮಾತ್ರವಲ್ಲ, ಧಾರ್ಮಿಕ ಪಾವಿತ್ರ್ಯಕ್ಕೂ ಪ್ರಸಿದ್ಧ. ಪ್ರತಿವರ್ಷ ಸಾವಿರಾರು ಭಕ್ತರು ಇಲ್ಲಿಗೆ ಬಂದು ಜಲಪಾತದ ನೀರಿನಲ್ಲಿ ನೆನೆಯುತ್ತಲೇ ದೇವರ ದರ್ಶನ ಪಡೆಯುತ್ತಾರೆ.

ಈ ತಾಣವು ಯಾದಗಿರಿ ನಗರದಿಂದ ಸುಮಾರು 45 ಕಿ.ಮೀ. ದೂರದಲ್ಲಿದೆ. ಯಾದಗಿರಿಯ ಗುರುಮಠಕಲ್ ಮಾರ್ಗದ ಕಂದಕೂರ ಗ್ರಾಮದವರೆಗೆ ಬಸ್ ಸೌಲಭ್ಯವಿದೆ. ಅಲ್ಲಿಂದ ಖಾಸಗಿ ವಾಹನಗಳಲ್ಲಿ ಅಥವಾ ಬೈಕ್ ಮೂಲಕ ಜಲಧಾರೆ ತಲುಪಬಹುದು. ಕಲಬುರಗಿ, ಸೇಡಂ, ತಾಂಡೂರು ಹಾಗೂ ಹೈದರಾಬಾದ್‌ನಿಂದ ಗುರುಮಠಕಲ್ ಪಟ್ಟಣಕ್ಕೆ ನೇರ ಬಸ್‌ಗಳು ಲಭ್ಯ. ಜಲಧಾರೆ ಕಾಡಿನ ಮಧ್ಯದಲ್ಲಿರುವುದರಿಂದ ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯ ಸೀಮಿತ. ಪ್ರವಾಸಿಗರು ತಮ್ಮ ಆಹಾರವನ್ನು ಜೊತೆ ಕೊಂಡೊಯ್ಯುವುದು ಉತ್ತಮ. ವಿಶೇಷ ದಿನಗಳಲ್ಲಿ ದೇವಸ್ಥಾನದಿಂದ ಅನ್ನಪ್ರಸಾದ ವ್ಯವಸ್ಥೆಯೂ ಇರಲಿದೆ. ಇತ್ತೀಚಿನ ದಿನಗಳಲ್ಲಿ ಈ ಜಲಪಾತ ಯುವಕರ ಪ್ರಿಯ ಸ್ಥಳವಾಗಿದೆ. ಪ್ರಕೃತಿಯ ಮಧ್ಯೆ ಹರಿಯುವ ನೀರಿನ ಹಿನ್ನೆಲೆಯಲ್ಲಿ ಸೆಲ್ಫಿ ಹಾಗೂ ಪ್ರಿ-ವೆಡ್ಡಿಂಗ್ ಫೋಟೊ ಶೂಟ್ ಮಾಡಲು ಹಲವರು ಇಲ್ಲಿಗೆ ಆಗಮಿಸುತ್ತಿದ್ದಾರೆ.

-ಶರಬು ಬಿ. ನಾಟೇಕಾರ್ ಯಾದಗಿರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X