Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರ ವಿತರಿಸಿದ ವಾಹನಗಳ ಮೇಲೆ...

ಸರಕಾರ ವಿತರಿಸಿದ ವಾಹನಗಳ ಮೇಲೆ ಕಾಂಗ್ರೆಸ್ ಶಾಸಕನ ಫೋಟೊ!

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ11 April 2026 10:36 AM IST
share
ಸರಕಾರ ವಿತರಿಸಿದ ವಾಹನಗಳ ಮೇಲೆ ಕಾಂಗ್ರೆಸ್ ಶಾಸಕನ ಫೋಟೊ!
ಹೈಕೋರ್ಟ್ ಆದೇಶ ಉಲ್ಲಂಘಿಸಿ ವೈಯಕ್ತಿಕ ಪ್ರಚಾರ

ಕಲಬುರಗಿ, ಎ.10: ಸರಕಾರ ಅಥವಾ ಸರಕಾರದ ವಿವಿಧ ಮೂಲಗಳ ನಿಧಿಯಿಂದ ವಿತರಿಸುವ ಯಾವುದೇ ವಸ್ತುಗಳ ಮೇಲೆ ಶಾಸಕ, ಎಂಎಲ್ಸಿ ಮತ್ತಿತ್ತರರು ತಮ್ಮ ಫೋಟೋ ಅಥವಾ ಜಾಹೀರಾತುಗಳನ್ನು ಪ್ರದರ್ಶಿಸಿ, ಪ್ರಚಾರ ಗಿಟ್ಟಿಸಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಆದರೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಹೈಕೋರ್ಟಿನ ಆದೇಶ ಉಲ್ಲಂಘಿಸಿ, ಸರಕಾರದಿಂದ ವಿತರಣೆಯಾಗುವ ವಸ್ತುಗಳ ಮೇಲೆ ತಮ್ಮದೇ ಚಿತ್ರವನ್ನು ಅಂಟಿಸುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಹುಡ್ಕೋ ಸಂಸ್ಥೆ, ಅಲಿಮ್ಕೋ ಸಂಸ್ಥೆ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಶೇ.5 ಅನುದಾನ, ಡಿ.ಎಂ.ಎಫ್, ಸಿ.ಎಸ್.ಆರ್ ಹಾಗೂ ಇತರೆ ಅನುದಾನದಡಿ ವಿಶೇಷಚೇತನರಿಗೆ ಸುಮಾರು 2.63 ಕೋಟಿ ರೂ. ಮೊತ್ತದಲ್ಲಿ ತ್ರಿಚಕ್ರವಾಹನ ಸೇರಿದಂತೆ ಬುದ್ದಿಮಾಂದ್ಯ ಮಕ್ಕಳಿಗೆ ಟಿ.ಎಲ್.ಎಂ ಕಿಟ್, ವೀಲ್ ಚೇರ್, ಬೆನ್ನು ನೋವಿನವರಿಗೆ ಮೆಡಿಕಲ್ ಕಿಟ್, ವಿಶೇಷ ಚೇತನರಿಗೆ ಬ್ರೈಲ್ ಕಿಟ್ ಟೈಪಿಂಗ್, ಶ್ರವಣ ದೋಷ ಯಂತ್ರ ಹಾಗೂ ರೀಡಿಂಗ್ ಯಂತ್ರ, ಹೀಗೆ ಅನೇಕ ಸಾಧನ ಸಲಕರಣೆಗಳ ವಿತರಣೆ ಮಾಡಿರುವ ಕಾರ್ಯಕ್ರಮದಲ್ಲಿ ತಮ್ಮದೇ ಫೋಟೋ ಹಾಕಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ.

ಸರಕಾರದಿಂದ ಅಂಗವಿಕಲರಿಗೆ ವಿತರಿಸಿದ 27 ತ್ರಿಚಕ್ರವಾಹನಗಳ ಮೇಲೆ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಫೋಟೋಗಳನ್ನು ಅಂಟಿಸಲಾಗಿದೆ. 2024-25ನೇ ಸಾಲಿನ ಜಿಲ್ಲಾ ಖನಿಜಾಂಶ ಫೌಂಡೇಶನ್ (ಡಿಎಂಎಫ್) ವತಿಯಿಂದ ತ್ರಿಚಕ್ರ ವಾಹನ ವಿತರಿಸಲಾಗಿದೆ ಎಂದು ಬರೆದುಕೊಂಡು ತಮ್ಮದೇ ಚಿತ್ರವನ್ನು ಅಂಟಿಸಿರುವುದಲ್ಲದೆ ದಕ್ಷಿಣ ಮತಕ್ಷೇತ್ರದ ವಿಧಾನಸಭೆ ಸದಸ್ಯರು ಎಂದೂ ಬರೆಯಲಾಗಿದೆ.

ಸಾರ್ವಜನಿಕರ ಸ್ವತ್ತನ್ನು ವೈಯಕ್ತಿಕ ರಾಜಕೀಯ ಬ್ರಾಂಡಿಂಗ್‌ಗಾಗಿ ಬಳಸಬಾರದು. ಸರಕಾರಗಳ ನಿಧಿಗಳಿಂದ ವಿತರಿಸುವ ವಾಹನಗಳ ಮೇಲೆ ಶಾಸಕರ ವೈಯಕ್ತಿಕ ಫೋಟೋಗಳನ್ನು ಬಳಸಿಕೊಂಡು ತಪ್ಪು ಸಂದೇಶ ಸೃಷ್ಟಿಸುತ್ತದೆ. ಶಾಸಕರ ಫೋಟೋ ಬಳಸುವುದರಿಂದ ಸರಕಾರದ ನಿಧಿಯಿಂದ ವಿತರಿಸಿದ ಉಡುಗೊರೆಯನ್ನು ಶಾಸಕರಿಂದಲೇ ಬಂದಿದೆ ಎನ್ನುವ ತಪ್ಪು ಮಾಹಿತಿ ಸೃಷ್ಟಿಯಾಗುತ್ತದೆ. ಬೇಕಿದ್ದರೆ ಸರಕಾರದ ಅಥವಾ ಇಲಾಖೆಯ ಲೋಗೋವನ್ನು ಬಳಸಬಹುದಾಗಿದೆ. ಆದರೆ, ಶಾಸಕರು ತಮ್ಮ ಸ್ವಂತ ಖರ್ಚಿನಿಂದ ವಾಹನ ವಿತರಿಸಿದರೆ ಮಾತ್ರ ಭಾವಚಿತ್ರ ಅಂಟಿಸಬಹುದಾಗಿದೆ ಎನ್ನುತ್ತಾರೆ ಕಾನೂನು ಸಲಹೆಗಾರರು.

ಡಿಎಂಎಫ್‌ಗೆ ಉಸ್ತುವಾರಿ ಸಚಿವರೇ ಅಧ್ಯಕ್ಷರಾಗಿರುತ್ತಾರೆ, ಜಿಲ್ಲಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಸರಕಾರದಿಂದ ವಿತರಿಸುವ ಈ ಕಾರ್ಯಕ್ರಮದಲ್ಲಿ ಸ್ವತಃ ಸಚಿವ, ಜಿಲ್ಲಾಧಿಕಾರಿ ಸಹ ಭಾಗಿಯಾಗಿದ್ದಾರೆ. ಆದರೆ ಪ್ರಚಾರ ಗಿಟ್ಟಿಸಿಕೊಳ್ಳುವ ಶಾಸಕರ ಗೀಳಿಗೆ ಇವರು ಮೌನವಾಗಿರುವುದು ಸಾರ್ವಜನಿಕರಲ್ಲಿ ಅನುಮಾನದ ಪ್ರಶ್ನೆ ಮೂಡಿದೆ. ಈ ಕುರಿತು ಸ್ಪಷ್ಟೀಕರಣಕ್ಕಾಗಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದರೆ ಅವರು ಪ್ರತಿಕ್ರಿಯಿಸಲಿಲ್ಲ.

Tags

CongressMLAkarnataka high court
share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X