Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಂಸ್ಕೃತ ಕಾಲೇಜನ್ನು ತುಳು ಭಾಷಾ...

ಸಂಸ್ಕೃತ ಕಾಲೇಜನ್ನು ತುಳು ಭಾಷಾ ಅಲ್ಪಸಂಖ್ಯಾತ ಸಂಸ್ಥೆಯೆಂದು ಪರಿಗಣಿಸಿ

ಶಿಕ್ಷಣ ಇಲಾಖೆಗೆ ಪತ್ರ ಬರೆದ ಪ್ರಾಂಶುಪಾಲ

ಜಿ.ಮಹಾಂತೇಶ್ಜಿ.ಮಹಾಂತೇಶ್16 Sept 2023 8:45 AM IST
share
ಸಂಸ್ಕೃತ ಕಾಲೇಜನ್ನು ತುಳು ಭಾಷಾ ಅಲ್ಪಸಂಖ್ಯಾತ ಸಂಸ್ಥೆಯೆಂದು ಪರಿಗಣಿಸಿ

ಬೆಂಗಳೂರು: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ಬೆಂಗಳೂರಿನ ಪೂರ್ಣ ಪ್ರಜ್ಞ ವಿದ್ಯಾಪೀಠ ವೇದಾಂತ ಗುರುಕುಲಂ ಸಂಸ್ಕೃತ ಕಾಲೇಜಿಗೆ ತುಳು ಭಾಷಾ ಅಲ್ಪಸಂಖ್ಯಾತ ಸಂಸ್ಥೆಯೆಂದು ಪರಿಗಣಿಸಿ ಮಾನ್ಯತೆ, ಸ್ಥಾನಮಾನ ನೀಡಬೇಕು ಎಂದು ಕಾಲೇಜಿನ ಪ್ರಾಂಶುಪಾಲರು ಕಾಲೇಜು ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.

ಸಾಂವಿಧಾನಿಕ ಮಾನ್ಯತೆ ಇಲ್ಲದೆ, ಸರಕಾರದ ಪ್ರೋತ್ಸಾಹವಿಲ್ಲದೆ, ಅಲ್ಪಸಂಖ್ಯಾತರ ಭಾಷೆಯಾಗಿ ಉಳಿದು ತುಳು ಭಾಷೆ ನಲುಗಿದೆ. ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು ಎಂದು ತುಳು ಭಾಷಿಕರು ಒತ್ತಾಯ ಮಾಡುತ್ತಿರುವ ನಡುವೆಯೇ ಪೂರ್ಣ ಪ್ರಜ್ಞ ವಿದ್ಯಾಪೀಠದ ಸಂಸ್ಕೃತ ಕಾಲೇಜು ಪ್ರಾಂಶುಪಾಲರು ಬರೆದಿರುವ ಈ ಪತ್ರವು ಮುನ್ನೆಲೆಗೆ ಬಂದಿದೆ. ಈ ಪತ್ರದ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಸಂಸ್ಕೃತ ವಿಷಯವನ್ನು ಬೋಧಿಸುತ್ತಿರುವ ಈ ಕಾಲೇಜಿಗೆ ತುಳು ಭಾಷಾ ಅಲ್ಪಸಂಖ್ಯಾತರ ಸ್ಥಾನಮಾನ ಕೋರಿರುವುದು ಸಹ ಉನ್ನತ ಶಿಕ್ಷಣ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪೂರ್ಣ ಪ್ರಜ್ಞ ವಿದ್ಯಾಪೀಠದ ವೇದಾಂತ ಗುರುಕುಲಂ ಸಂಸ್ಕೃತ ವಿಷಯವನ್ನು ಬೋಧಿಸುತ್ತಿದೆ. ಈ ಕಾಲೇಜನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಟ್ರಸ್ಟಿಯಾಗಿರುವ ಪೇಜಾವರ ಅದೋಕ್ಷಜ ಟ್ರಸ್ಟ್ ಮುನ್ನಡೆಸುತ್ತಿದೆ. ಅಲ್ಲದೇ ಈ ಕಾಲೇಜಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯವು ಮಾನ್ಯತೆ ನೀಡಿದೆ. ಸಂಸ್ಕೃತದ ವಿವಿಧ ವಿಷಯಗಳಲ್ಲಿ ಬಿಎ ಮತ್ತು ಎಂಎ ಕೋರ್ಸ್ಗಳನ್ನು ನಡೆಸುತ್ತಿದೆ.

ಈ ಕಾಲೇಜಿಗೆ ತುಳು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯನ್ನಾಗಿ ಚಾಲ್ತಿಯಲ್ಲಿರುವ ಕಾಯ್ದೆ, ನಿಯಮಗಳ ಅಡಿಯಲ್ಲಿ ಪರಿಗಣಿಸಿ ಮಾನ್ಯತೆ ನೀಡಬೇಕು ಎಂದು ಪತ್ರದಲ್ಲಿ ಕೋರಿರುವುದು ಗೊತ್ತಾಗಿದೆ.

ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ರಚಿಸಿದ್ದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ತಂಡವು ಈಗಾಗಲೇ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.

ಮೋಹನ್ ಆಳ್ವ ವರದಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಭಿಪ್ರಾಯ ಪಡೆಯುವಂತೆ ಈಗಾಗಲೇ ಸರಕಾರವು ಸೂಚಿಸಿದೆ. ಸುಮಾರು ಒಂದು ಕೋಟಿ ಜನ ತುಳು ಭಾಷಿಕರಿದ್ದಾರೆ. ೧೯೯೪ರಲ್ಲಿ ವೀರಪ್ಪಮೊಯ್ಲಿ ತುಳು ಅಕಾಡಮಿ ಆರಂಭಿಸಿದ್ದರು. ೨೦೦೭ರಲ್ಲಿ ಕೇರಳ ಸರಕಾರ ತುಳು ಅಕಾಡಮಿ ಆರಂಭಿಸಿತು. ಅಮೆರಿಕದ ವಿಶ್ವವಿದ್ಯಾನಿಲಯದಲ್ಲಿ ೧೩೩ ಜಾಗತಿಕ ಭಾಷೆಗಳ ಪೈಕಿ ೧೭ ಭಾರತೀಯ ಭಾಷೆಗಳಿವೆ. ಅದರಲ್ಲಿ ತುಳು ಭಾಷೆ ಇದೆ ಎಂದು ವಿಧಾನ ಮಂಡಲದ ಅಧಿವೇಶನದಲ್ಲಿ ಅಶೋಕ್ ಕುಮಾರ್ ರೈ ಅವರು ವಿವರಿಸಿದ್ದರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X