Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ಕನಸು:...

ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ಕನಸು: ಪೂವಮ್ಮ

‘ನಿವೃತ್ತಿ ಯೋಚನೆ ಸದ್ಯಕ್ಕಿಲ್ಲ’

-ಇಬ್ರಾಹಿಂ ಅಡ್ಕಸ್ಥಳ-ಇಬ್ರಾಹಿಂ ಅಡ್ಕಸ್ಥಳ29 Nov 2023 12:47 PM IST
share
ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ಕನಸು: ಪೂವಮ್ಮ
Dream of participating in Olympics: Poovamma

ಮಂಗಳೂರು, ನ.29: ವಯಸ್ಸಿನ ಬಗ್ಗೆ ಆಲೋಚನೆ ಮಾಡುವುದಿಲ್ಲ. ಅದನ್ನು ಸವಾಲಾಗಿ ಸ್ವೀಕರಿಸಿ ಅಗತ್ಯ ತಯಾರಿಯೊಂದಿಗೆ ಎಲ್ಲವೂ ಸರಿಯಾದರೆ ಮುಂದಿನ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವುದು ತನ್ನ ಕನಸಾಗಿದೆ ಎಂದು ಏಶ್ಯನ್ ಗೇಮ್ಸ್ ಮತ್ತು ಏಶ್ಯನ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಜಯಿಸಿದ್ದ ಓಟಗಾರ್ತಿ ಎಂ.ಆರ್.ಪೂವಮ್ಮ ತಮ್ಮ ಮನದ ಇಂಗಿತವನ್ನು ಬಿಚ್ಚಿಟ್ಟಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಪೊಲೀಸರ ಕ್ರೀಡಾಕೂಟಕ್ಕೆ ಚಾಲನೆ ನೀಡಲು ಆಗಮಿಸಿದ್ದ ಪೂವಮ್ಮ ‘ವಾರ್ತಾಭಾರತಿ’ಯೊಂದಿಗೆ ಮಾತನಾಡುತ್ತಿದ್ದರು.

ನಿವೃತ್ತಿಯ ಮೊದಲು ಚೆನ್ನಾಗಿ ಪ್ರದರ್ಶನ ನೀಡಿ ಒಲಿಂಪಿಕ್ಸ್‌ಗೆ ಹೋಗ ಬೇಕು ಎನ್ನುವುದು ನನ್ನ ಕನಸು. ಏಶ್ಯನ್ ಗೇಮ್ಸ್ ಕೈತಪ್ಪಿದೆ. 2020-21ರ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ ಎಂಬ ನೋವು ನನಗಿದೆ ಎಂದರು.

ಸಾಧನೆಗೆ ವಯಸ್ಸು ಅಡ್ಡಿಯಾಗದು. ವಯಸ್ಸು ಆಗಿದೆ ಎಂಬ ಚಿಂತೆ ನನಗಿಲ್ಲ. ಅದನ್ನು ದಾಟಿ ನಾನು ನನಗೆ ಸಾಧ್ಯವಿರುವ ತನಕ ಕ್ರೀಡಾರಂಗದಲ್ಲಿ ಮುಂದುವರಿಯುವೆನು. ಸದ್ಯಕ್ಕೆ ನಿವೃತ್ತಿ ಯೋಚನೆ ಇಲ್ಲ ಎಂದು 33ರ ಹರೆಯದ ಓಟಗಾರ್ತಿ ಸ್ಪಷ್ಟಪಡಿಸಿದರು.

400 ಮೀಟರ್ ಓಟದಲ್ಲಿ ಗಮನ ಕೇಂದ್ರೀಕರಿಸಿ ತಯಾರಿ ನಡೆಸುತ್ತಿದ್ದೇನೆ. ಅದರಲ್ಲಿ ನನಗೆ ಭರವಸೆ ಇದೆ. ರಿಲೆ ರ್‍ಯಾಂಕಿಂಗ್‌ನಲ್ಲಿ ಬಂದರೆ ತಂಡದಲ್ಲಿ ಸ್ಪರ್ಧೆ ಮಾಡುವ ಅವಕಾಶ ಸಿಗಬಹುದು. ಮುಂದಿನ ವರ್ಷ ವರ್ಲ್ಡ್ ರಿಲೆ ಸೇರಿದಂತೆ ಬಹಳಷ್ಟು ಸ್ಪರ್ಧೆಗಳಿವೆ. ಅವುಗಳಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದೇನೆ ಎಂದರು.

ಡೋಪಿಂಗ್ ಆರೋಪದಲ್ಲಿ 2021ರಲ್ಲಿ ಎರಡು ವರ್ಷಗಳ ಕಾಲ ಸ್ಪರ್ಧಾ ಕೂಟಗಳಿಂದ ಅಮಾನತುಗೊಂಡಿರುವ ಪೂವಮ್ಮ ಅವರಲ್ಲಿ ಈ ಬಗ್ಗೆ ಕೇಳಿದಾಗ, ‘ನನಗೆ ನಾಡಾ(ರಾಷ್ಟ್ರೀಯ ಉದ್ದೀಪನಾ ತಡೆ ಘಟಕ) ಮೊದಲು ಸ್ಪರ್ಧಿಸಬಹುದೆಂದು ಹೇಳಿತು. ಬಳಿಕ ನಿಷೇಧ ಹೇರಿತು. ಇದರಿಂದ ಗೊಂದಲಕ್ಕೆ ಒಳಗಾದ ನಾನು ನ್ಯಾಯಕ್ಕಾಗಿ ಹೈಕೋರ್ಟ್ ಮೊರೆ ಹೋದೆ. ತೀರ್ಪು ತನ್ನ ಪರ ಬಂತು’ ಎಂದು ಪ್ರತಿಕ್ರಿಯೆ ನೀಡಿದರು.

ಶ್ರೀಲಂಕಾದಲ್ಲಿ ವರ್ಷಗಳ ಬಳಿಕ ಸ್ಪರ್ಧಿಸಿದ್ದೆ. ಜ್ವರದ ಕಾರಣದಿಂದಾಗಿ ನನಗೆ ನಿರೀಕ್ಷಿಸಿದಷ್ಟು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ ಎಂದರು.

ಟ್ರ್ಯಾಕ್ ಆ್ಯಂಡ್ ಫಿಲ್ಡ್‌ನಲ್ಲಿ ಇತ್ತೀಚೆಗೆ ಸೇರ್ಪಡೆಯಾಗುತ್ತಿರುವ ಮೆಡ್ಲ್ ರಿಲೆ ಸೇರಿದಂತೆ ವಿವಿಧ ಹೊಸ ಹೊಸ ಈವೆಂಟ್ಗಳು ಉತ್ತಮ ಬೆಳವಣಿಗೆಯಾಗಿದೆ. ಯಾಕೆಂದರೆ ಇದರಿಂದ ಅವಕಾಶ ಹೆಚ್ಚು ಸಿಗುತ್ತಿದೆ. 100 ಮೀಟರ್ ಮತ್ತು 200 ಮೀ. ಓಟದಲ್ಲಿ ವೈಯಕ್ತಿಕ ಸಾಧನೆ ಮಾಡಲು ಸಾಧ್ಯವಾಗದವರಿಗೆ ದೊಡ್ಡ ಈವೆಂಟ್ಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಇಂತಹ ಅವಕಾಶ ಅನುಕೂಲವಾಗುತ್ತದೆ ಎಂದರು.

ನನ್ನ ವೃತ್ತಿ ಬದುಕು ಚೆನ್ನಾಗಿದೆ. ನನಗೆ ಉದ್ಯೋಗ ನೀಡಿರುವ ಒಎನ್ಜಿಸಿ ಒಳ್ಳೆಯ ಬೆಂಬಲ ನೀಡುತ್ತಿದೆ. ಕ್ರೀಡಾ ರಂಗದಿಂದ ನಿವೃತ್ತಿ ಬಳಿಕ ಸಂಸ್ಥೆಯ ಕರ್ತವ್ಯದ ಕಡೆಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ಈಗ ಅವರಿಂದ ಉತ್ತಮ ಪ್ರೋತ್ಸಾಹ ಸಿಗುತ್ತಿದೆ ಎಂದು ನುಡಿದರು.

share
-ಇಬ್ರಾಹಿಂ ಅಡ್ಕಸ್ಥಳ
-ಇಬ್ರಾಹಿಂ ಅಡ್ಕಸ್ಥಳ
Next Story
X