Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. FACT CHECK | ಜನನ ಪ್ರಮಾಣಪತ್ರಗಳಿಗೆ...

FACT CHECK | ಜನನ ಪ್ರಮಾಣಪತ್ರಗಳಿಗೆ ಅರ್ಜಿ ಸಲ್ಲಿಸಲು ಸರಕಾರ ಕೊನೆಯ ದಿನಾಂಕ ಪ್ರಕಟಿಸಿದೆಯೇ?

ವಾರ್ತಾಭಾರತಿವಾರ್ತಾಭಾರತಿ2 Dec 2025 2:20 PM IST
share
FACT CHECK | ಜನನ ಪ್ರಮಾಣಪತ್ರಗಳಿಗೆ ಅರ್ಜಿ ಸಲ್ಲಿಸಲು ಸರಕಾರ ಕೊನೆಯ ದಿನಾಂಕ ಪ್ರಕಟಿಸಿದೆಯೇ?
ಜನನ ಮತ್ತು ಮರಣ ನೋಂದಣಿ ವಿಳಂಬ ಮಾಡಿದವರು ಯಾವಾಗ ಬೇಕಾದರೂ ದಾಖಲೆ ಪಡೆಯಬಹುದು…

ಜನನ ನೋಂದಣಿ ಇಲ್ಲದವರು ತಕ್ಷಣವೇ ಅದನ್ನು ಪಡೆದುಕೊಳ್ಳಬೇಕು ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಜನನ ನೋಂದಣಿ ಮಾಡಿಸದ ನಾಗರಿಕರು 27 ಎಪ್ರಿಲ್ 2026ರೊಳಗೆ ಮಾತ್ರ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಹೇಳಲಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ” ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಸರಕಾರ ಇಂತಹ ಯಾವುದೇ ಅಧಿಸೂಚನೆಯನ್ನು ಹೊರಡಿಸಿರುವುದಿಲ್ಲ

ಸರ್ಕಾರದಿಂದ ಅಧಿಸೂಚನೆಯಿಲ್ಲ:

ಸರ್ಕಾರ ಇಂತಹ ಯಾವುದೇ ಅಧಿಸೂಚನೆಯನ್ನು ಹೊರಡಿಸಿರುವುದಿಲ್ಲ. ಜನನ ಮತ್ತು ಮರಣ ಪತ್ರ ಇಲ್ಲದವರು ಅಗತ್ಯ ಬಂದಾಗ ಸೂಕ್ತ ವಿಧಾನವನ್ನು ಅನುಸರಿಸಿ ದಾಖಲೆ ಪಡೆಯಬಹುದು. ಅಗತ್ಯವಿದ್ದವರು ಯಾವಾಗ ಬೇಕಾದರೂ ಜನನ ಮತ್ತು ಮರಣ ದಾಖಲೆ ಪಡೆದುಕೊಳ್ಳಬಹುದು. ದಾಖಲೆ ಇಲ್ಲದವರು ಅದಕ್ಕೆ ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಿ ತಹಶೀಲ್ದಾರ್ ಕಚೇರಿಯಿಂದ ದಾಖಲೆಯನ್ನು ಪಡೆದುಕೊಳ್ಳಬೇಕು.

ಜನನ ನೋಂದಣಿ ಕಡ್ಡಾಯವೇ?

ಈಗ ಜನನ ಪ್ರಮಾಣಪತ್ರವನ್ನು ಸರ್ಕಾರದ ವಿವಿಧ ಸೇವೆಗಳಿಗಾಗಿ ಅತ್ಯಂತ ಪ್ರಮುಖ ದಾಖಲೆ ಎಂದು ಪರಿಗಣಿಸಲಾಗುತ್ತದೆ. ಜನನ ಪ್ರಮಾಣಪತ್ರವನ್ನು ನಾಗರಿಕತ್ವಕ್ಕೆ ಬಲವಾದ ಸಾಕ್ಷಿಯಾಗಿ ಪರಿಗಣಿಸಲಾಗುತ್ತದೆ. ಬಹಳ ಜನರು ಶಾಲಾ ಪ್ರಮಾಣಪತ್ರದಲ್ಲಿನ ಜನ್ಮದಿನಾಂಕವೇ ಸಾಕು ಎಂದು ತಪ್ಪಾಗಿ ಭಾವಿಸಿದ್ದಾರೆ. ಆದರೆ ಜನನ ಪ್ರಮಾಣಪತ್ರದ ಅಗತ್ಯವಿದೆ.

ಮುಖ್ಯವಾಗಿ ಆಧಾರ್ ನೋಂದಣಿಗೆ, ಪಾಸ್ಪೋರ್ಟ್ ಪಡೆಯಲು, ಮತದಾರರ ಗುರುತಿನ ಚೀಟಿ ಪಡೆಯಲು ಜನನ ಪ್ರಮಾಣಪತ್ರದ ಅಗತ್ಯವಿದೆ. ಉಳಿದಂತೆ ಪಿಂಚಣಿ ಪಡೆಯಲು, ವಿದ್ಯಾವೇತನ, ಮನಸ್ವಿನಿ ಅಥವಾ ಸಂಧ್ಯಾಸುರಕ್ಷೆಯಂತಹ ಸೌಲಭ್ಯಗಳನ್ನು ಪಡೆಯಲು ಜನನ ಪ್ರಮಾಣಪತ್ರದ ಅಗತ್ಯವಿದೆ. ಆಧಾರ್ ಸಾಕ್ಷ್ಯವಾಗಿ ನೀಡಿದರೂ ಜನನ ಪ್ರಮಾಣಪತ್ರ ಅಥವಾ ಶಾಲಾ ಪ್ರಮಾಣಪತ್ರವನ್ನು ಎರಡನೇ ಸಾಕ್ಷಿಯಾಗಿ ಕೇಳಲಾಗುತ್ತದೆ. ಕೆಲವೊಮ್ಮೆ ಜನಗಣತಿ ಮತ್ತು ವಿಮೆ ಪಡೆಯುವಾಗಲೂ ಜನನ ಪ್ರಮಾಣಪತ್ರ ಕೇಳುವುದಿದೆ.

ಜನನ ಮತ್ತು ಮರಣ ದಾಖಲೆ ಪತ್ರ ಪಡೆಯುವ ವಿಧಾನ

ಜನನ ಮತ್ತು ಮರಣ ದಾಖಲೆ ಪತ್ರ ಇಲ್ಲದವರು ಅದನ್ನು ಪಡೆಯಬೇಕಾದರೆ ತಹಶೀಲ್ದಾರ್ ಬಳಿ ಹೋಗಿ ಅಲಭ್ಯ ದೃಢೀಕರಣ ಪತ್ರವನ್ನು ಪಡೆದುಕೊಳ್ಳಬೇಕು. ತಹಶೀಲ್ದಾರ್ ಅವರಿಗೆ ಅಲಭ್ಯ ದೃಢೀಕರಣ ಪತ್ರ ಬೇಕೆಂದು ಅರ್ಜಿ ಹಾಕಿದರೆ, ಅದನ್ನು ಗ್ರಾಮ ಲೆಕ್ಕಿಗರಿಗೆ ಕಳುಹಿಸಲಾಗುತ್ತದೆ. ಗ್ರಾಮ ಲೆಕ್ಕಿಗರು ಜನನ ಅಥವಾ ಮರಣದ ವಿವರಗಳಿಗೆ ಸಾಕ್ಷಿಯ ಮಹಜರು ನೀಡುತ್ತಾರೆ. ಅದಕ್ಕಾಗಿ ಕುಟುಂಬಸ್ಥರ ಹೇಳಿಕೆ ತೆಗೆದುಕೊಂಡು, ಗ್ರಾಮಸ್ಥರ ಸಹಿ ತೆಗೆದುಕೊಂಡು ಮಹಜರು ನಡೆಸಿ ತಹಶೀಲ್ದಾರ್ ಗೆ ಕಳುಹಿಸುತ್ತಾರೆ. ಅವರು ಅದನ್ನು ಕಳುಹಿಸಿದ ನಂತರ ಅಲಭ್ಯ ದೃಢೀಕರಣ ಪತ್ರ ನ್ಯಾಯಾಲಯಕ್ಕೆ ಹೋಗುತ್ತದೆ. ಅದನ್ನು ಸಂಬಂಧಿತರು ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ. ಅಲ್ಲಿ ಇಬ್ಬರು ವಕೀಲರ ಹಿಯರಿಂಗ್ ಆದ ನಂತರ ತಹಶೀಲ್ದಾರ್ ರಿಗೆ ನ್ಯಾಯಾಲಯದ ಆದೇಶ ಬರುತ್ತದೆ. ಆ ಆದೇಶವನ್ನು ಅವರು ಗ್ರಾಮ ಲೆಕ್ಕಿಗರಿಗೆ ಕಳುಹಿಸುತ್ತಾರೆ. ನಂತರ ಗ್ರಾಮ ಲೆಕ್ಕಿಗರು ಆನ್ಲೈನ್ನಲ್ಲಿ ವಿವರ ನಮೂದಿಸಿ ನ್ಯಾಯಾಲಯದ ಆದೇಶದ ಸಂಖ್ಯೆಯನ್ನು ನಮೂದಿಸಿ ಜನನ ಮತ್ತು ಮರಣ ದಾಖಲೆಯನ್ನು ನೀಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X