Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಕಾಲಿಕ ಮಳೆ ತಂದ ಆಪತ್ತಿನಿಂದ ರೈತರಿಗೆ...

ಅಕಾಲಿಕ ಮಳೆ ತಂದ ಆಪತ್ತಿನಿಂದ ರೈತರಿಗೆ ಅತಂತ್ರ ಸ್ಥಿತಿ

ಅವಧಿಗೂ ಮೊದಲೇ ಕೊಡಗಿನಲ್ಲಿ ಅರೆಬಿಕಾ ಕಾಫಿ ಕೊಯ್ಲು

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ16 Nov 2023 12:09 PM IST
share
ಅಕಾಲಿಕ ಮಳೆ ತಂದ ಆಪತ್ತಿನಿಂದ ರೈತರಿಗೆ ಅತಂತ್ರ ಸ್ಥಿತಿ
ಸೆಪ್ಟಂಬರ್‌ನಲ್ಲಿ ಕೊಡಗು ಜಿಲ್ಲೆಯಲ್ಲಿ ವಾಡಿಕೆ ಮಳೆ 223 ಮಿ.ಮೀ. ಆಗಿದ್ದು, ಈ ಬಾರಿ 251 ಮಿ.ಮೀ. ಮಳೆಯಾಗಿದೆ. ಹಾಗೆಯೇ ಅಕ್ಟೋಬರ್ ತಿಂಗಳಲ್ಲಿ ವಾಡಿಕೆ ಮಳೆ 197 ಮಿ.ಮೀ. ಆಗಿದ್ದು, ಈ ಬಾರಿ 166 ಮಿ.ಮೀ. ಮಳೆಯಾಗಿದೆ. ನವೆಂಬರ್ ತಿಂಗಳಲ್ಲಿ ವಾಡಿಕೆ ಮಳೆ 74 ಮಿ,ಮೀ. ಆಗಿದ್ದು, ಈ ಬಾರಿ ನವೆಂಬರ್ ಮೊದಲ ವಾರದಲ್ಲಿ 45 ಮಿ.ಮೀ. ಮಳೆಯಾಗಿದೆ.

ಮಡಿಕೇರಿ, ನ.16: ಮಳೆಗಾಲ ಮುಗಿದರೂ, ಪ್ರಸ್ತುತ ಅಕಾಲಿಕ ಮಳೆಯಿಂದ ಕಾಫಿ ಬೆಳೆಯುವ ರೈತರು ಗಿಡಗಳಲ್ಲಿ ಉಳಿದಿರುವ ಬೆಳೆಯನ್ನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಜನವರಿಯಲ್ಲಿ ಸುರಿದ ಮಳೆಯಿಂದಾಗಿ ಅರೆಬಿಕಾ ಕಾಫಿ ಹಣ್ಣಾಗಿದೆ. ಅದನ್ನು ಕೊಯ್ಲು ಮಾಡಲೇಬೇಕಾದ ಸ್ಥಿತಿಯಲ್ಲಿ ಬೆಳೆಗಾರರು ಇದ್ದಾರೆ. ಈಗಾಗಲೇ ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಅರೆಬಿಕಾ ಕಾಫಿ ಕೊಯ್ಲು ಪ್ರಾರಂಭಗೊಂಡಿದೆ. ಕೊಯ್ಲು ಮಾಡದೇ ಗಿಡದಲ್ಲೇ ಹಾಗೇ ಬಿಟ್ಟರೆ ಮಳೆಯಿಂದ ಒಡೆದು ಕಾಫಿ ಉದುರಿ ಮಣ್ಣು ಪಾಲಾಗುತ್ತದೆ. ಹಾಗೆಂದು ಕಾರ್ಮಿಕರಿಂದ ಕೊಯ್ಲು ಮಾಡಿಸುವುದು ಕಷ್ಟಸಾಧ್ಯ. ಆದರೂ ಕೊಯ್ಲು ಮಾಡಲೇಬೇಕಾದ ಸ್ಥಿತಿ ಇದೆ. ಮಧ್ಯೆ ಮಧ್ಯೆ ಹಣ್ಣಾಗಿರುವ ಗಿಡಗಳಿಂದ ಕಾಫಿ ಕೊಯ್ಲು ಮಾಡಿಸುದರಿಂದ ಬೆಳೆಗಾರರಿಗೆ ಪ್ರಯೋಜನವೂ ಇಲ್ಲ. ಆದರೂ ಕಾರ್ಮಿಕರಿಗೆ ವೇತನ ನೀಡಲೇಬೇಕಾದ ಸ್ಥಿತಿಯೂ ನಿರ್ಮಾಣವಾಗಿದ್ದು, ಕಾಫಿ ಬೆಳೆಗಾರ ಮಾತ್ರ ಅತಂತ್ರ ಸ್ಥಿತಿಗೆ ತಲುಪಿದ್ದಾನೆ.

ಸದ್ಯದ ಮಳೆಯಿಂದಾಗಿ ರೋಬಾಸ್ಟಗೆ ತೊಂದರೆ ಇಲ್ಲ. ಆದರೆ ಅರೆಬಿಕಾ ಕಾಫಿ ಗುಣಮಟ್ಟ ಕಡಿಮೆಯಾಗಲಿದೆ. ಸೋಮವಾರಪೇಟೆ, ಶನಿವಾರಸಂತೆ, ಸುಂಟಿಕೊಪ್ಪ, ಚೆಟ್ಟಳ್ಳಿ ಭಾಗದಲ್ಲಿ ಹೆಚ್ಚು ಅರೆಬಿಕಾ ಬೆಳೆಯಲಾಗುತ್ತಿದ್ದು, ನಷ್ಟದ ನಡುವೆಯೂ ಕಾಫಿ ಕೊಯ್ಲಿನಲ್ಲಿ ತೊಡಗಿಕೊಂಡಿದ್ದಾರೆ.

ಮಳೆಗಾಲದಲ್ಲಿ ಸರಿಯಾಗಿ ಮಳೆಯಾಗದ ಪರಿಣಾಮ, ಇರುವ ಕಾಫಿ ಮತ್ತು ಮೆಣಸಿನ ಫಸಲು ನಷ್ಟವಾಯಿತು. ಕೆಲವು ಗಿಡಗಳಲ್ಲಿ ಈಗಾಗಲೇ ಕಾಫಿ ಹಣ್ಣಾಗಿದ್ದು, ಕೆಲವರು ಹಣ್ಣು ಕಾಫಿಯನ್ನು ಕೊಯ್ಲು ಮಾಡಿಸುತ್ತಿದ್ದಾರೆ. ಆದರೆ, ಕಳೆದ ಒಂದು ವಾರಗಳಿಂದ ಕೊಡಗು ಜಿಲ್ಲೆಯ ಕೆಲವೆಡೆಗಳಲ್ಲಿ ಮಳೆಯಾಗುತ್ತಿದ್ದು, ಕಾಫಿ ಗಿಡದಲ್ಲಿಯೇ ಕೊಳೆಯುತ್ತಿದೆ. ತಕ್ಷಣ ಕೊಯ್ಲು ಮಾಡಬೇಕು. ತಪ್ಪಿದಲ್ಲಿ ಇದು, ಒಡೆದು ಮಣ್ಣು ಸೇರುವುದು ಮತ್ತು ಪಕ್ಷಿಗಳ ಪಾಲಾಗುವುದು ನಿಶ್ಚಿತ.

ಜಿಲ್ಲೆಯ ವಿವಿಧೆಡೆ ಕೆಲವು ಕಾಫಿ ಬೆಳೆಗಾರರು ಕೊಯ್ಲು ಮಾಡುತ್ತಿದ್ದು, ಫಸಲನ್ನು ಒಣಗಿಸಲು ಸಾಧ್ಯವಿಲ್ಲದಂತಾಗಿದೆ. ಬಿಸಿಲಿನಲ್ಲಿ ಕಾಫಿ ಬೀಜ ಒಣಗಿದರೆ ಮಾತ್ರ ಗುಣಮಟ್ಟವನ್ನು ಕಾಯ್ದುಕೊಳ್ಳಬಹುದು. ಇಲ್ಲದಿದ್ದರೆ ಕಾಫಿಯನ್ನು ಕೊಳ್ಳುವವರೆ ಇಲ್ಲದಂತಾಗುತ್ತದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಈ ಭಾರಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಕಾಫಿ ಬೆಳೆಯಾಗಲಿಲ್ಲ. ಕಾಳು ಮೆಣಸಿನ ತೆನೆ ಸರಿಯಾಗಿ ಬರಲಿಲ್ಲ. ಬಿಸಿಲಿಗೆ ಕಾಳು ಕಟ್ಟದೆ ಉದುರಿಹೋಗಿದೆ. ಕಾಫಿ ಬೆಳೆಗಾರರಿಗೆ ನಿರಂತರ ನಷ್ಟದಿಂದಾಗಿ ಕಾಫಿ ತೋಟ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕಳೆದ ಕೆಲವು ವರ್ಷಗಳಿಂದ ಹವಾಮಾನ ಸಮಸ್ಯೆಯಿಂದಾಗಿ ಕಾಫಿ ಮತ್ತು ಕಾಳು ಮೆಣಸಿನ ಫಸಲು ಸಿಗುತ್ತಿಲ್ಲ. ಪ್ರಸಕ್ತ ಸಾಲಿನಲ್ಲಿ ಭಾರಿ ಬರಗಾಲವಾಗಿರುವುದು ಅರೇಬಿಕಾ ಕಾಫಿ ತೋಟಗಳಿಗೆ ಹೆಚ್ಚಿನ ನಷ್ಟವಾಗಿದೆ. ಮುಂದೆ ಬೇಸಿಗೆಯಲ್ಲಿ ಬಿಳಿಕಾಂಡ ಕೊರಕದ ಹಾವಳಿ ಹೆಚ್ಚಾಗಲಿದ್ದು, ಗಿಡಗಳನ್ನು ಕಾಪಾಡಿಕೊಳ್ಳುವುದು ಕಾಫಿ ಬೆಳೆಗಾರರಿಗೆ ಕಷ್ಟವಾಗಲಿದೆ ಎನ್ನುತ್ತಾರೆ ಅಧಿಕಾರಿಗಳು.

ಇನ್ನು ಸದ್ಯ ನವಂಬರ್ ಕೊನೆ ಹಾಗೂ ಡಿಸೆಂಬರ್‌ನಲ್ಲಿ ಭತ್ತದ ಕಟಾವು ಮಾಡಲಾಗುತ್ತದೆ. ಆದರಿಂದ ಸದ್ಯದ ಮಳೆಯಿಂದಾಗಿ ಭತ್ತದ ಬೆಳೆಗೆ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.

ಈ ಬಾರಿ ಮಳೆ ಕೊರತೆಯಿಂದಾಗಿ ಸುಮಾರು 9,791 ಹೆಕ್ಟೇರ್ ಪ್ರದೇಶದಲ್ಲಿ (ಭತ್ತ ಮತ್ತು ಮುಸುಕಿನ ಜೋಳ ಪ್ರದೇಶ) ಬೆಳೆ ಹಾನಿಯಾಗಿದ್ದು, ಅಂದಾಜು 838 ಲಕ್ಷ ರೂ.ನಷ್ಟವಾಗಿದೆ. ಪರಿಹಾರ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

- ಸೋಮಸುಂದರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X