Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೇಂದ್ರ, ರಾಜ್ಯದಿಂದ ಸಿಗದ ಅನುದಾನ:...

ಕೇಂದ್ರ, ರಾಜ್ಯದಿಂದ ಸಿಗದ ಅನುದಾನ: ಅನಾಥವಾದ ಅಮೃತ ಮಿಶನ್, ತುಂಗಾ ಮೇಲ್ದಂಡೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನ ಯೋಜನೆ

ಜಿ.ಮಹಾಂತೇಶ್ಜಿ.ಮಹಾಂತೇಶ್13 Feb 2024 10:30 AM IST
share
ಕೇಂದ್ರ, ರಾಜ್ಯದಿಂದ ಸಿಗದ ಅನುದಾನ: ಅನಾಥವಾದ ಅಮೃತ ಮಿಶನ್, ತುಂಗಾ ಮೇಲ್ದಂಡೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನ ಯೋಜನೆ

ಬೆಂಗಳೂರು, ಫೆ.12: ಅಮೃತ್ ಮಿಷನ್, ತುಂಗಾ ಮೇಲ್ದಂಡೆ ಯೋಜನೆ, ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರವು ತನ್ನ ಪಾಲಿನ ಅನುದಾನದಲ್ಲಿ ಬಿಡಿಗಾಸನ್ನೂ ಒದಗಿಸಿಲ್ಲ.

ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪೈಕಿ 7 ಕಾರ್ಯಕ್ರಮಗಳಿಗೆ ರಾಜ್ಯ ಸರಕಾರವು 2023-24ನೇ ಸಾಲಿನಲ್ಲಿ 1,221.49 ಕೋಟಿ ರೂ. ಅನುದಾನ ಒದಗಿಸಿಕೊಂಡಿತ್ತು. ಕೇಂದ್ರ ಸರಕಾರವು ಇವೇ ಕಾರ್ಯಕ್ರಮಗಳಿಗೆ 1,917.48 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಆದರೆ, ಈ ಕಾರ್ಯಕ್ರಮಗಳಿಗೆ ರಾಜ್ಯ ಮತ್ತು ಕೇಂದ್ರ ಸರಕಾರವು ಡಿಸೆಂಬರ್ ಅಂತ್ಯಕ್ಕೆ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ.

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2024ರ ಜನವರಿ 25ರಂದು ನಡೆದ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳ ಸಭೆಯಲ್ಲಿ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಕುರಿತಾಗಿ ಚರ್ಚೆ ನಡೆದಿದೆ. ಈ ಸಭೆಯಲ್ಲಿ ಮಂಡಿಸಿದ್ದ ಅಂಕಿ ಅಂಶಗಳು ‘The-file.in’ಗೆ ಲಭ್ಯವಾಗಿವೆ.

20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಸರಕಾರವು 2023-24ನೇ ಸಾಲಿಗೆ 5,980.79 ಕೋಟಿ ರೂ. ಅನುದಾನ ಒದಗಿಸಿಕೊಂಡಿತ್ತು. ಇದರಲ್ಲಿ ಡಿಸೆಂಬರ್ ಅಂತ್ಯಕ್ಕೆ 1,566.76 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಇನ್ನು 4,414.03 ಕೋಟಿ ರೂ.ಗಳನ್ನು ಬಿಡುಗಡೆಗೆ ಬಾಕಿ ಇರಿಸಿಕೊಂಡಿರುವುದು ಗೊತ್ತಾಗಿದೆ.

ಅದೇ ರೀತಿ ರಾಜ್ಯ ಸರಕಾರವು ಇದೇ 20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ 2023-24ನೇ ಸಾಲಿಗೆ 9,511.38 ಕೋಟಿ ರೂ. ಅನುದಾನ ಒದಗಿಸಿತ್ತು. ಈ ಪೈಕಿ ಡಿಸೆಂಬರ್ ಅಂತ್ಯಕ್ಕೆ 7,064.03 ಕೋಟಿ ರೂ. ಬಿಡುಗಡೆ ಮಾಡಿದೆ. 2,447.35 ಕೋಟಿ ರೂ.ಗಳನ್ನು ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ.

ಶೂನ್ಯ ಬಿಡುಗಡೆ: ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿನ ಅಮೃತ್ ಮಿಷನ್ ಯೋಜನೆಗೆ ರಾಜ್ಯವು 320.00 ಕೋಟಿ ರೂ., ಕೇಂದ್ರವು 480.00 ಕೋಟಿ ರೂ., ಪ್ರಾಥಮಿಕ ಶಿಲ್ಕು 1,538.35 ಕೋಟಿ ರೂ.ಸೇರಿ ಒಟ್ಟು 2,338.05 ಕೋಟಿ ರೂ. ಒಟ್ಟು ಅನುದಾನವಿದೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರಕಾರವು ಡಿಸೆಂಬರ್ ಅಂತ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗೆ ರಾಜ್ಯವು 316 ಕೋಟಿ ರೂ., ಕೇಂದ್ರವು 474 ಕೋಟಿ ರೂ., ಪ್ರಾಥಮಿಕ ಶಿಲ್ಕು 355.31 ಕೋಟಿ ರೂ. ಸೇರಿ ಒಟ್ಟು 1,145.31 ಕೋಟಿ ರೂ. ಅನುದಾನ ಲಭ್ಯವಾಗಿಸಿಕೊಂಡಿದೆ. ಇದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರಕಾರವು ತನ್ನ ಪಾಲಿನ ಅನುದಾನದ ಬಿಡುಗಡೆಯಲ್ಲಿ ಶೂನ್ಯ ಸಂಪಾದಿಸಿದೆ.

ಜಲಸಂಪನ್ಮೂಲ ಇಲಾಖೆಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯಲ್ಲಿ (ಇಆರ್‌ಎಂ)ನಲ್ಲಿ ರಾಜ್ಯವು 100 ಕೋಟಿ ರೂ., ಕೇಂದ್ರ ಸರಕಾರವು 250 ಕೋಟಿ ರೂ., ಸೇರಿ ಒಟ್ಟಾರೆ 350 ಕೋಟಿ ರೂ. ಅನುದಾನ ಒದಗಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯವು ಈ ಯೋಜನೆಗೂ ತನ್ನ ಪಾಲಿನಲ್ಲಿ ನಯಾ ಪೈಸೆ ನೀಡಿಲ್ಲ.

ವಸತಿ ಇಲಾಖೆಯ ಪ್ರಧಾನಮಂತ್ರಿ ಆವಾಝ್ ಯೋಜನೆ (ಗ್ರಾಮೀಣ)ಯಲ್ಲಿ ರಾಜ್ಯವು 164 ಕೋಟಿ ರೂ., ಕೇಂದ್ರವು 246 ಕೋಟಿ ರೂ., ಪ್ರಾಥಮಿಕ ಶಿಲ್ಕು 838.10 ಕೋಟಿ ರೂ. ಸೇರಿ ಒಟ್ಟು 1,248.10 ಕೋಟಿ ರೂ. ಅನುದಾನವಿದೆ. ಇಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರಕಾರವು ತನ್ನ ಪಾಲಿನ ಹಣವನ್ನು ನೀಡಿಲ್ಲ.

ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಭಾರತ (ನಗರ) ಯೋಜನೆಗೆ ರಾಜ್ಯವು 90 ಕೋಟಿ ರೂ., ಕೇಂದ್ರವು 200 ಕೋಟಿ ರೂ., ಪ್ರಾಥಮಿಕ ಶಿಲ್ಕು 747.75 ಕೋಟಿ ರೂ. ಅನುದಾನವಿದೆ. ಸ್ವಚ್ಛ ಭಾರತ ಯೋಜನೆಗೂ ಕೇಂದ್ರ ಸರಕಾರವು ಬಿಡಿಗಾಸನ್ನು ನೀಡಿಲ್ಲ. ರಾಜ್ಯವೂ ಇದೇ ಹಾದಿಯನ್ನೇ ಹಿಡಿದಿದೆ. ಜಲಸಂಪನ್ಮೂಲ ಇಲಾಖೆಯಡಿಯಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ ರಾಜ್ಯವು 100.49 ಕೋಟಿ ರೂ., ಕೇಂದ್ರ ಸರಕಾರವು 112.46 ಕೋಟಿ ರೂ. ಸೇರಿ ಒಟ್ಟು 212.97 ಕೋಟಿ ರೂ. ಅನುದಾನ ನಿಗದಿಪಡಿಸಿಕೊಂಡಿದೆ. ಇದರಲ್ಲಿಯೂ ಎರಡೂ ಸರಕಾರಗಳು ನಯಾಪೈಸೆಯನ್ನು ನೀಡಿಲ್ಲ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಧಾನಮಂತ್ರಿ ಆದರ್ಶ ಯೋಜನೆಗೆ ಕೇಂದ್ರವು 100 ಕೋಟಿ ರೂ. ನೀಡಿದೆಯಾದರೂ ಡಿಸೆಂಬರ್ ಅಂತ್ಯಕ್ಕೆ ಬಿಡಿಗಾಸು ನೀಡಿಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯವು 131 ಕೋಟಿ ರೂ., ಕೇಂದ್ರವು 55 ಕೋಟಿ ರೂ. ಸೇರಿ ಒಟ್ಟಾರೆ 186 ಕೋಟಿ ರೂ. ಅನುದಾನ ನೀಡಬೇಕಿತ್ತು. ಆದರೆ ಡಿಸೆಂಬರ್ ಅಂತ್ಯಕ್ಕೆ ನಯಾಪೈಸೆಯೂ ಬಿಡುಗಡೆಯಾಗಿಲ್ಲ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X