Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇನ್ನು ಪಾವತಿಯಾಗದ ಏಳು ತಿಂಗಳ ವೇತನ:...

ಇನ್ನು ಪಾವತಿಯಾಗದ ಏಳು ತಿಂಗಳ ವೇತನ: ತರಗತಿ ಬಹಿಷ್ಕರಿಸಿ ಧರಣಿ ನಡೆಸುತ್ತಿರುವ ಎಫ್‌ಎಂಸಿ ಕಾಲೇಜಿನ ಅತಿಥಿ ಉಪನ್ಯಾಸಕರು

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ7 March 2024 10:33 AM IST
share
ಇನ್ನು ಪಾವತಿಯಾಗದ ಏಳು ತಿಂಗಳ ವೇತನ: ತರಗತಿ ಬಹಿಷ್ಕರಿಸಿ ಧರಣಿ ನಡೆಸುತ್ತಿರುವ ಎಫ್‌ಎಂಸಿ ಕಾಲೇಜಿನ ಅತಿಥಿ ಉಪನ್ಯಾಸಕರು

ಮಡಿಕೇರಿ, ಮಾ.6: ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 43 ಹಾಗೂ ಚಿಕ್ಕಾಳುವಾರದ 18 ಅತಿಥಿ ಉಪನ್ಯಾಸಕರಿಗೆ ಕಳೆದ ನಾಲ್ಕು ತಿಂಗಳು ಮತ್ತು ಕೋವಿಡ್ ಸಂದರ್ಭದಲ್ಲಿ 3 ತಿಂಗಳ ವೇತನ ಪಾವತಿಸಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಕಳೆದ ಐದು ದಿನಗಳಿಂದ ವೇತನ ಬಿಡುಗಡೆಗೆ ಒತ್ತಾಯಿಸಿ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಧರಣಿ ನಡೆಸುತ್ತಿದ್ದಾರೆ.

ಈ ವೇಳೆ ಮಂಗಳೂರು ವಿವಿಯು ಕೊಡಗಿನ ಅತಿಥಿ ಉಪನ್ಯಾಸಕರಿಗೆ ಕೇವಲ ಅಕ್ಟೋಬರ್ ತಿಂಗಳ ವೇತನವನ್ನು ಪಾವತಿಸಿ, ತರಗತಿಗೆ ಹಾಜರಾಗಲು ಸೂಚಿಸಿದೆ. ಆದರೆ, ಮಂಗಳೂರು ವ್ಯಾಪ್ತಿಯ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಡಿಸೆಂಬರ್‌ವರೆಗೆ ವೇತನವನ್ನು ಪಾವತಿ ಮಾಡಿದ್ದು, ನಮಗೂ ಡಿಸೆಂಬರ್‌ವರೆಗಿನ ವೇತನವನ್ನು ಪಾವತಿಸಿದರೆ ಮಾತ್ರ ತರಗತಿಗೆ ಹಾಜರಾಗುವುದೆಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಕಾಲೇಜಿನಲ್ಲಿ ಧರಣಿ ನಡೆಸುತ್ತಿದ್ದಾರೆ.

ಕೋವಿಡ್ ಅವಧಿಯ ಸಂಬಳವೂ ಬಾಕಿ!

ಮಂಗಳೂರು ವಿವಿ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿನ 400 ಅತಿಥಿ ಉಪನ್ಯಾಸಕರಿಗೆ ಕೋವಿಡ್ ಕಾಲದಲ್ಲಿ ತರಗತಿ ನಡೆಸಿದ ವೇತನ ಇದುವರೆಗೂ ಪಾವತಿಯಾಗಿಲ್ಲ.ಮೂರು ಬಾರಿ ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ವೇತನವನ್ನು ಪಾವತಿಸುವಂತೆ ನಿರ್ಣಯ ಮಾಡಿದ್ದರೂ ವೇತನವನ್ನು ಮಂಗಳೂರು ವಿವಿ ಪಾವತಿಸಿಲ್ಲ ಎಂದು ಉಪನ್ಯಾಸಕರು ಆರೋಪಿಸುತ್ತಿದ್ದಾರೆ. ಕೋವಿಡ್ ಅವಧಿಯ ವೇತನ ಸೇರಿ ಒಟ್ಟು ಏಳು ತಿಂಗಳ ವೇತನವನ್ನು ವಿವಿ ಪಾವತಿಸಬೇಕಾಗಿದೆ ಎಂದು ಉಪನ್ಯಾಸಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

‘ಹಂತ-ಹಂತವಾಗಿ ವೇತನ ಬಿಡುಗಡೆ’

ತರಗತಿಯನ್ನು ಬಹಿಷ್ಕರಿಸಿ ನಡೆಸುತ್ತಿರುವ ಧರಣಿಯನ್ನು ಹಿಂಪಡೆಯಲು ಮನವಿ ಮಾಡಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ. ಈ ಹಿಂದಿನಂತೆ ಹಂತ ಹಂತವಾಗಿ ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆಗೊಳಿಸುವ ಭರವಸೆ ನೀಡಲಾ ಗಿದೆ ಎಂದು ಮಂಗಳೂರು ವಿವಿ ಪ್ರಭಾರ ಕುಲಪತಿಯಾಗಿ ಕಾರ್ಯ ನಿರ್ವಹಿಸಿದ್ದ ಪ್ರೊ.ಜಯರಾಜ್ ಅಮೀನ್ ಮಾಹಿತಿ ನೀಡಿದ್ದಾರೆ.

ಮಕ್ಕಳ ಹಿತದೃಷ್ಟಿಯಿಂದ ನಾವು ಕಳೆದ ಸೆಮಿಸ್ಟರ್ ಪೂರ್ಣ ಮೌಲ್ಯಮಾಪನ ಮಾಡಿದ್ದೇವೆ. ಪರೀಕ್ಷಾ ಮೇಲ್ವಿಚಾರಣಾ ಕಾರ್ಯ ಮಾಡಿದ್ದೇವೆ. ಪಾಠ ಪ್ರವಚನ ಮುಗಿಸಿದ್ದೇವೆ. ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದರೂ ನಮಗೆ ವೇತನ ನೀಡಿಲ್ಲ. ನಿರಂತರವಾಗಿ ಒಟ್ಟು 4 ತಿಂಗಳ ವೇತನವನ್ನು ನೀಡದೇ ಇರುವುದರಿಂದ ಜೀವನ ನಿರ್ವಹಣೆ ಕಷ್ಟದಾಯಕವಾಗಿದೆ. ಮಂಗಳೂರು ವಿವಿ ವ್ಯಾಪ್ತಿಗೆ ಸೇರುವ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿ ಮಾಡಲಾಗಿದೆ. ಆದರೆ, ಕೊಡಗಿನ ಎಫ್‌ಎಂಸಿ ಕಾಲೇಜಿನ ಉಪನ್ಯಾಸಕರಿಗೆ ಮಾತ್ರ ವೇತನ ಪಾವತಿಸಿಲ್ಲ. ಇದು ವಿವಿ ಮಲತಾಯಿ ಧೋರಣೆ ಅನುಸರಿಸುತ್ತಿದೆಯೇ ಎಂಬ ಅನುಮಾನಕ್ಕೂ ಕಾರಣವಾಗಿದೆ. ನಾವು ನಮ್ಮ ನ್ಯಾಯಬದ್ಧವಾದ ಹಕ್ಕನ್ನು ಮಾತ್ರ ಕೇಳುತ್ತಿದ್ದೇವೆ. ಬಾಕಿ ವೇತನ ಪಾವತಿಸಿದ ತಕ್ಷಣವೇ ನಮ್ಮ ಕರ್ತವ್ಯವನ್ನು ನಾವು ಮುಂದುವರಿಸುತ್ತೇವೆ.

-ಅತಿಥಿ ಉಪನ್ಯಾಸಕ, ಎಫ್‌ಎಂಸಿ ಕಾಲೇಜು ಮಡಿಕೇರಿ

ನಾಲ್ಕು ವರ್ಷ ಕಳೆದರೂ ಇದುವರೆಗೆ ಕೋವಿಡ್ ಕಾಲದ ಮೂರು ತಿಂಗಳ ವೇತನವನ್ನು ಅತಿಥಿ ಉಪನ್ಯಾಸಕರಿಗೆ ಮಂಗಳೂರು ವಿವಿ ನೀಡಿಲ್ಲ. ಕೇವಲ 25ರಿಂದ 30 ಸಾವಿರ ರೂ. ಸಂಬಳ ಮಾತ್ರ ಅತಿಥಿ ಉಪನ್ಯಾಸಕರಿಗೆ ಬರುವುದು. ಈ ಸಂಬಳ ಕಳೆದ ನಾಲ್ಕು ತಿಂಗಳಿನಿಂದ ಬಂದಿಲ್ಲ. ವೇತನ ಬಾರದೆ ಅತಿಥಿ ಉಪನ್ಯಾಸಕರು ಬದುಕು ಸಾಗಿಸುವುದು ಹೇಗೆ? ಮಂಗಳೂರು ವಿವಿ ವೇತನ ನೀಡದೆ ನಿರ್ಲಕ್ಷ್ಯ ತೋರಿದೆ.

-ಅಚ್ಚಾಂಡಿರ ಪವನ್ ಪೆಮ್ಮಯ್ಯ,

ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X