Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಮ್ಮೇಳನದಲ್ಲಿ ಹಿಂದಿ ಹೇರಿಕೆ ವಿರುದ್ಧ...

ಸಮ್ಮೇಳನದಲ್ಲಿ ಹಿಂದಿ ಹೇರಿಕೆ ವಿರುದ್ಧ ಅಭಿಯಾನ

ಮಾಳಿಂಗರಾಯ ಕೆಂಭಾವಿಮಾಳಿಂಗರಾಯ ಕೆಂಭಾವಿ22 Dec 2024 1:44 PM IST
share
ಸಮ್ಮೇಳನದಲ್ಲಿ ಹಿಂದಿ ಹೇರಿಕೆ ವಿರುದ್ಧ ಅಭಿಯಾನ

ಮಂಡ್ಯ, ಡಿ.22: ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ, ಕನ್ನಡ ಭಾಷೆ, ಕನ್ನಡಿಗರ ಹಲವು ಬೇಡಿಕೆಗಳನ್ನು ಪೂರೈಸುವ ನಿರ್ಣಯಗಳನ್ನು ಕೈಗೊಳ್ಳಬೇಕು ಎಂಬ ಭಿತ್ತಿಚಿತ್ರ ಹಂಚುವ ವಿಶೇಷ ಅಭಿಯಾನಕ್ಕೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಯಿತು.

ಅಭಿಯಾನವನ್ನು ‘ಹಿಂದಿ ಹೇರಿಕೆ ವಿರೋಧಿ ಕರ್ನಾಟಕ’ ಸಂಘಟನೆ ವತಿಯಿಂದ ನಡೆಸಲಾಗುತ್ತಿದ್ದು, ಸಮ್ಮೇಳನದಲ್ಲಿ ನಡೆಯುವ ಎಲ್ಲ ಗೋಷ್ಠಿಗಳ ಹತ್ತಿರ ಹೋಗಿ ಕರಪತ್ರ ಹಂಚಿ ಗೋಷ್ಠಿಯ ಅಧ್ಯಕ್ಷರು ಸೇರಿದಂತೆ, ಸಾರ್ವಜನಿಕರಿಗೆ ಕರಪತ್ರವನ್ನು ನೀಡುವ ಮೂಲಕ ಹಿಂದಿ ಹೇರಿಕೆ ವಿರುದ್ಧದ ನಿರ್ಣಯ ಕೈಗೊಳ್ಳಲು ಜನಾಭಿಪ್ರಾಯ ರೂಪಿಸಲಾಗುತ್ತಿದೆ.

ಕರ್ನಾಟಕದಲ್ಲಿನ ರಾಷ್ಟ್ರೀಕೃತ ಬ್ಯಾಂಕ್, ಅಂಚೆ, ವಿಮಾ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಬಳಸದೇ ನಿರ್ಲಕ್ಷಿಸಲಾಗುತ್ತಿದೆ. ಕನ್ನಡದ ಬದಲಿಗೆ ಹಿಂದಿಯನ್ನು ವ್ಯವಸ್ಥಿತವಾಗಿ ಹೇರಲಾಗುತ್ತಿದೆ, ಕರ್ನಾಟಕದಲ್ಲಿ ಕನ್ನಡವನ್ನು ಅಪ್ರಸ್ತುತಗೊಳಿಸುವ ಪಿತೂರಿ ಇದಾಗಿದೆ. ಈ ಧೋರಣೆ ಬದಲಾಗಬೇಕು ಎಂಬುದು ಅಭಿಯಾನದ ಉದ್ದೇಶವಾಗಿದೆ.

ಜಿಎಸ್ಟಿ ತೆರಿಗೆ ಹಂಚಿಕೆಯಲ್ಲಿ ಒಕ್ಕೂಟ ಸರಕಾರದಿಂದ ಕರ್ನಾಟಕಕ್ಕೆ ನ್ಯಾಯಬದ್ಧಪಾಲು ಸಿಗಬೇಕು. ಕೇಂದ್ರ ಸರಕಾರಕ್ಕೆ ಕರ್ನಾಟಕದಿಂದ ಲಕ್ಷಾಂತರ ಕೋಟಿ ರೂಪಾಯಿ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಆದರೆ ಕರ್ನಾಟಕಕ್ಕೆ ಹಿಂದಿರುಗಿಸಿ, ನೀಡುತ್ತಿರುವ ಆರ್ಥಿಕ ನೆರವು ತೀರಾ ಕಡಿಮೆಯಾಗಿದೆ. ಅದನ್ನು ಕೇಂದ್ರ ಸರಕಾರ ನಿಲ್ಲಿಸಬೇಕಿದೆ ಎಂಬುದು ಅಭಿಯಾನದ ಒತ್ತಾಯವಾಗಿದೆ.

► ದ್ವಿಭಾಷಾ ನೀತಿ ಜಾರಿಯಾಗಲಿ

ಕರ್ನಾಟಕದಲ್ಲಿ ಶಾಲಾ ಪಠ್ಯಪುಸ್ತಕದಲ್ಲಿ ತ್ರಿಭಾಷಾ ನೀತಿಯನ್ನು ಮಾಡಿ, ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ಸಾವಿರಾರು ಮಕ್ಕಳ ಬದುಕು ಅತಂತ್ರವಾಗುತ್ತಿದೆ. ಹಿಂದಿಯನ್ನು ಒಂದು ಭಾಷೆಯಾಗಿ ವಿರೋಧಿಸುವ ಅಗತ್ಯವಿಲ್ಲವಾದರೂ, ಅದರ ಕಲಿಕೆಯಿಂದ ಆಗುವ ಉಪಯೋಗವಿಲ್ಲ. ಹಿಂದಿ ಹೇರಿಕೆಯೂ ಕನ್ನಡಿಗರಲ್ಲಿ ನಿರುದ್ಯೋಗಕ್ಕೆ ಕಾರಣವಾಗುತ್ತಿದೆ. ಅದು ಕರ್ನಾಟಕದಲ್ಲಿ ಕನ್ನಡಿಗರ ಬದುಕನ್ನು ನಾಶ ಮಾಡುವ ರೂಪದಲ್ಲಿ ಹೇರಿಕೆಯಾಗುತ್ತಿರುವುದನ್ನು ವಿರೋಧಿಸುತ್ತಿದ್ದೇವೆ ಎಂದು ‘ಹಿಂದಿ ಹೇರಿಕೆ ವಿರೋಧಿ ಕರ್ನಾಟಕ’ದ ಸಂಚಾಲಕ ಪಾರ್ವತೀಶ ಬಿಳಿದಾಳೆ ತಿಳಿಸಿದರು.

ಹಿಂದಿ ದಬ್ಬಾಳಿಕೆಯ ಭಾಷೆಯಾಗಿದೆ. ಅದಕ್ಕಾಗಿ ಸಮ್ಮೇಳನದಲ್ಲಿ ಹಿಂದಿ ಹೇರಿಕೆಯ ವಿರುದ್ಧ ನಿರ್ಣಯ ಕೈಗೊಳ್ಳಬೇಕಿದೆ. ಸಮ್ಮೇಳನದಲ್ಲಿ ಬರುವ ಜನರಿಗೆ ಹಿಂದಿ ಹೇರಿಕೆ ಕುರಿತು ಜಾಗೃತಿ ಮೂಡಿಸಿ, ಜನಾಭಿಪ್ರಾಯಕ್ಕಾಗಿ 1ಲಕ್ಷ ಕರಪತ್ರಗಳನ್ನು ಹಂಚುತ್ತಿದ್ದೇವೆ.

- ಪಾರ್ವತೀಶ ಬಿಳಿದಾಳೆ, ಹಿಂದಿ ವಿರೋಧಿ- ಕರ್ನಾಟಕದ ಸಂಚಾಲಕ

share
ಮಾಳಿಂಗರಾಯ ಕೆಂಭಾವಿ
ಮಾಳಿಂಗರಾಯ ಕೆಂಭಾವಿ
Next Story
X