Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಮ್ಮೇಳನದಲ್ಲಿ ಗಮನ ಸೆಳೆದ ಕೈದಿಗಳು...

ಸಮ್ಮೇಳನದಲ್ಲಿ ಗಮನ ಸೆಳೆದ ಕೈದಿಗಳು ತಯಾರಿಸಿದ ವಸ್ತುಗಳ ಪ್ರದರ್ಶನ

ಯೋಗೇಶ್ ಮಲ್ಲೂರುಯೋಗೇಶ್ ಮಲ್ಲೂರು22 Dec 2024 2:02 PM IST
share
ಸಮ್ಮೇಳನದಲ್ಲಿ ಗಮನ ಸೆಳೆದ ಕೈದಿಗಳು ತಯಾರಿಸಿದ ವಸ್ತುಗಳ ಪ್ರದರ್ಶನ

ಮಂಡ್ಯ, ಡಿ.22: ಯಾವುದೋ ಒಂದು ಕೆಟ್ಟ ಘಳಿಗೆಯಲ್ಲಿ ತಪ್ಪು ಮಾಡಿ ಜೈಲು ಸೇರಿದ ಸಜಾ ಕೈದಿಗಳ ಪ್ರತಿಭೆ ಹೊರಹಾಕಲು ಮಂಡ್ಯದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಒಂದು ಒಳ್ಳೆಯ ಅವಕಾಶ ಕಲ್ಪಿಸಿಕೊಟ್ಟಿದೆ.

ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯಿಂದ ಬೆಂಗಳೂರು, ಬಳ್ಳಾರಿ, ಬೆಳಗಾವಿ, ಮೈಸೂರು ಸೇರಿದಂತೆ ಎಂಟು ಕೇಂದ್ರ ಕಾರಾಗೃಹಗಳಲ್ಲಿ ಬಂಧಿಯಾಗಿರುವ ಸಜಾ ಕೈದಿಗಳು ತಯಾರಿಸಿದ ವಸ್ತುಗಳನ್ನು ಸಾಹಿತ್ಯ ಸಮ್ಮೇಳನದ ವಸ್ತು ಪ್ರದರ್ಶನದಲ್ಲಿ ಪರಿವರ್ತನಾ ಉತ್ಪನ್ನಗಳು: ಪ್ರದರ್ಶನ ಮತ್ತು ಮಾರಾಟ ಎಂಬ ಹೆಸರಿನಲ್ಲಿ ಮಳಿಗೆ ತೆರೆಯಲಾಗಿದ್ದು, ಇದು ಹೆಚ್ಚು ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಇಲಾಖೆಯು ನಿಜಕ್ಕೂ ಕೈದಿಗಳ ಮನ: ಪರಿವರ್ತಿಸುವಲ್ಲಿ ಹೆಚ್ಚು ಸಹಕಾರಿಯಾಗಿದ್ದು, ಕೈದಿಗಳು ತಮ್ಮ ಶಿಕ್ಷಾವಧಿ ಮುಗಿಯುವವರೆಗೂ ಮಾಡಿದ ತಪ್ಪಿನ ಗುಂಗಿನಲ್ಲಿರುವ ಬದಲಾಗಿ ಅವರಲ್ಲಿನ ವಿವಿಧ ಪ್ರತಿಭೆ, ಸಾಮರ್ಥ್ಯವನ್ನು ಹೊರಹಾಕಲು ಅತ್ಯಂತ ಸಹಕಾರಿ ಎನಿಸಿದೆ.

ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುವ ವೃತ್ತಿಪರ ತರಬೇತಿ, ಶೈಕ್ಷಣಿಕ ಕಲಿಕಾ ತರಗತಿಗಳು, ಯೋಗ, ವ್ಯಾಯಾಮ ಸೇರಿ ಮುಂತಾದವುಗಳ ಕುರಿತು ಮಳಿಗೆಯಲ್ಲಿ ಇಡಲಾಗಿದ್ದ ಚಿತ್ರಗಳು ನೋಡುಗರ ಕಣ್ಸೆಳೆದವು. ಕೈದಿಗಳು ಜೈಲಿನೊಳಗೆ ಹೇಗೆಲ್ಲಾ ಪಾಠ ಕಲಿಯುತ್ತಾರೆ ಎಂಬುದನ್ನು ಮಳಿಗೆಯತ್ತ ಬರುವ ಸಾರ್ವಜನಿಕರಿಗೆ ಜೈಲು ಸಿಬ್ಬಂದಿ ವಿವರಿಸುತ್ತಿದ್ದ ರೀತಿ ಗಮನಾರ್ಹವಾಗಿತ್ತು.

► ತರಬೇತಿ

ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ ಸಜಾ ಕೈದಿಗಳಿಗೆ ಅವರ ಆಸಕ್ತಿಯ ಅನುಸಾರ ನುರಿತ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುತ್ತದೆ. ಯಾವುದೇ ಕೆಲಸವನ್ನೂ ಸುಮಾರು ಮೂರು ತಿಂಗಳೊಳಗೆ ಕೈದಿಗಳು ಕಲಿತುಕೊಳ್ಳುತ್ತಾರೆ. ಆ ನಂತರದಲ್ಲಿ ಅವರ ಕಲಿಕೆಯ ಅನುಸಾರ ಕೆಲಸ ನೀಡಲಾಗುತ್ತದೆ. ಕೆಲಸಕ್ಕೆ ಅನುಗುಣವಾಗಿ ಸರಕಾರ ಕೈದಿಗಳಿಗೆ ಕೂಲಿಯನ್ನು ನೀಡುತ್ತದೆ ಎನ್ನುತ್ತಾರೆ ಕೈದಿಗಳ ತರಬೇತುದಾರ ಅಶೋಕ್.

ಮಳಿಗೆಯಲ್ಲೇನೇನಿದೆ?

ಸಾಹಿತ್ಯ ಸಮ್ಮೇಳನದ ಪರಿವರ್ತನಾ ಉತ್ಪನ್ನ ಮಳಿಗೆಯಲ್ಲಿ ಕೈದಿಗಳಿಂದ ತಯಾರಾದಂತಹ ಟವೆಲ್, ಕಂಬಳಿ, ಮ್ಯಾಟ್, ಬೆಡ್ಶೀಟ್, ಜಮಕಾನ, ಕುರ್ಚಿ, ಉಣ್ಣೆ ಬಟ್ಟೆಗಳು ಮುಂತಾದ ವಸ್ತುಗಳು ಮಾರಾಟಕ್ಕಿದ್ದವು. ಯಥೇಚ್ಛವಾಗಿ ಗ್ರಾಹಕರು ಖರೀದಿಯಲ್ಲಿ ಮುಗಿಬಿದ್ದ ದೃಶ್ಯ ಕಂಡಬಂತು.

ಕರ್ನಾಟಕದ ಕಾರಾಗೃಹಗಳಲ್ಲಿ ಹೆಚ್ಚು ಕನ್ನಡಿಗರೇ ಇದ್ದಾರೆ. ಕೈದಿಗಳು ಕಾರಾಗೃಹದೊಳಗೆ ಬಂದರೆ ಅವರು ಏನು ಮಾಡುತ್ತಾರೆ, ಹೇಗಿರುತ್ತಾರೆ ಎಂಬುದರ ಪರಿಕಲ್ಪನೆ, ಕುತೂಹಲ ಹೊರಗಿನವರಿಗೆ ಹೆಚ್ಚಾಗಿರುತ್ತದೆ. ಸಜಾ ಬಂಧಿಗಳನ್ನು ಜೈಲೊಳಗೆ ಸುಮ್ಮನೇ ಕೂಡಿ ಹಾಕುವುದಿಲ್ಲ. ಅವರ ಆಸಕ್ತಿಗನುಸಾರ ತರಬೇತಿ ಕೊಟ್ಟು ಕೆಲಸ ನೀಡುತ್ತೇವೆ.

- ಲೋಕೇಶ್ ಟಿ.ಕೆ., ಅಧೀಕ್ಷಕರು, ಜಿಲ್ಲಾ ಕಾರಾಗೃಹ ಮಂಡ್ಯ

share
ಯೋಗೇಶ್ ಮಲ್ಲೂರು
ಯೋಗೇಶ್ ಮಲ್ಲೂರು
Next Story
X