Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೆಂಗಳೂರಿನ ನೌಕರಿ ಬಿಟ್ಟುಕೃಷಿಯಲ್ಲಿ...

ಬೆಂಗಳೂರಿನ ನೌಕರಿ ಬಿಟ್ಟುಕೃಷಿಯಲ್ಲಿ ಮಾದರಿಯಾದ ಕವಿತಾ

-ಕುಂಟನಹಳ್ಳಿ ಮಲ್ಲೇಶ್-ಕುಂಟನಹಳ್ಳಿ ಮಲ್ಲೇಶ್9 Sept 2024 3:58 PM IST
share
ಬೆಂಗಳೂರಿನ ನೌಕರಿ ಬಿಟ್ಟುಕೃಷಿಯಲ್ಲಿ ಮಾದರಿಯಾದ ಕವಿತಾ

ಮಂಡ್ಯ: ಕೋವಿಡ್ ಲಾಕ್ಡೌನ್ ಕಾಲದಲ್ಲಿ ಬೆಂಗಳೂರಿನಿಂದ ಅನಿವಾರ್ಯವಾಗಿ ತಮ್ಮ ಹುಟ್ಟೂರಿಗೆ ಬಂದ ಹಲವು ಯುವಕ-ಯುವತಿಯರು, ದಂಪತಿಗಳು ಕೃಷಿಯಲ್ಲಿ ಹೊಸ ಪ್ರಯೋಗ ಮಾಡುವ ಮೂಲಕ ಬದುಕನ್ನು ಕಟ್ಟಿಕೊಳ್ಳುವ ಜತೆಗೆ ಜಿಲ್ಲೆಯ ರೈತರಿಗೆ ಮಾದರಿಯಾಗಿದ್ದಾರೆ. ಇದರ ಪರಿಣಾಮ ಸಾಂಪ್ರದಾಯಿಕ ಕೃಷಿ ಪದ್ಧತಿ, ಬೆಳೆಗಳಿಗೆ ಜೋತುಬಿದ್ದಿದ್ದ ಅನೇಕ ರೈತರು ತಮ್ಮ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ಹೊರಬಂದು ಪರ್ಯಾಯ ಬೆಳೆಯ ಕಡೆಗೆ ಆಸಕ್ತಿ ತೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಕವಿತಾ ಅವರು ತನ್ನ ಊರಿನ ರೈತರಿಗೆ ಸ್ಫೂರ್ತಿಯಾಗಿದ್ದಾರೆ.

ಜಿಲ್ಲೆಯ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಬುರುಡುಗುಂಟೆ ಗ್ರಾಮದ ಎಸ್.ಕವಿತಾ ಹಲವು ವರ್ಷಗಳಿಂದ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೋವಿಡ್ ಲಾಕ್ಡೌನ್ ಸಂದರ್ಭ ಸ್ವಗ್ರಾಮಕ್ಕೆ ಮರಳಿದ ಅವರು ಇರುವ ನಾಲ್ಕು ಎಕರೆ ಜಮೀನಿನಲ್ಲಿ ಮಿಶ್ರ ಬೇಸಾಯದಲ್ಲಿ ಸಾವಯವ ಪದ್ಧತಿ ಅಳವಡಿಸಿಕೊಂಡು ಉತ್ತಮ ಫಸಲು ಪಡೆದು ಇತರ ರೈತರಿಗೆ ಮಾದರಿಯಾಗಿದ್ದಾರೆ.

ಪೂರ್ಣ ಮಳೆಯಾಶ್ರಿತ ತನ್ನ ಗ್ರಾಮದ ಕೃಷಿ ಭೂಮಿಯಲ್ಲಿ ಎರಡು ಕೊಳವೆ ಬಾವಿ ನೀರಿನಿಂದ ಮಿಶ್ರ ಬೇಸಾಯ ಪದ್ಧತಿ ಅಳವಡಿಸಿಕೊಂಡಿದ್ದಾರೆ. ಸೀಬೆ, ಸೀತಾಫಲ, ರಾಮಫಲ, ಹಲಸು, ಬಾಳೆ, ಮಾವು, ಬೆಣ್ಣೆಹಣ್ಣು, ಜ್ಯೂಸ್ ಹಣ್ಣು, ಚಕ್ಕೆ, ನಿಂಬೆ, ಕರಿಬೇವು, ಮರಗೆಣಸು, ಶ್ರೀಗಂಧ, ದಾಳಿಂಬೆ, ಕಾಫಿ, ಬೆಂಡೆ, ಬದನೆ, ಟೊಮೆಟೊ, ನುಗ್ಗೆ, ಕತ್ತಿಕಾಯಿ, ದಪ್ಪ ಮೆಣಸಿನಕಾಯಿ, ಸೋರೆಕಾಯಿ, ಹರಿಶಿನಕೊನೆ, ಸುವರ್ಣಗೆಡ್ಡೆ, ನಾಟಿ ಈರುಳ್ಳಿ ಫಸಲು ಕೈಸೇರಿದೆ.

ಕೃಷಿ ಜತೆಗೆ ಉಪಕಸುಬಾಗಿ ಹೈನುಗಾರಿಕೆ, ಜೇನುಕೃಷಿಯನ್ನೂ ಮಾಡುತ್ತಿದಾರೆ. ಎಮ್ಮೆ, ಹಸು, ಆಡು, ಕುರಿ ಕೋಳಿಗಳನ್ನು ಸಾಕಿದ್ದಾರೆ. ಮೇವಿಗಾಗಿ ಜಮೀನಿನಲ್ಲಿ ಸೀಮೆ ಹುಲ್ಲು ಮತ್ತು ಚಂಬೆ ಮರಗಳನ್ನು ಬೆಳೆಸಿದ್ದಾರೆ. ಇವು ಮೇವು ಪೂರೈಸಲು ಸಹಕಾರಿಯಾಗಿದೆ. ಹೈನುಗಾರಿಕೆ ತ್ಯಾಜ್ಯವನ್ನು ಬಳಸಿ ಸಾವಯವ ಗೊಬ್ಬರವನ್ನು ಉತ್ಪಾದಿಸುತ್ತಾರೆ. ಜೊತೆಗೆ ಹೂವಿನ ಬೆಳೆ ಬೆಯುವುದರಿಂದ ಜೇನು ಕೃಷಿಗೂ ಪೂರಕ ವಾತಾವರಣ ಸೃಷ್ಟಿಸಿಕೊಂಡಿದ್ದಾರೆ.

ಒಂದೆಲಗ, ದೊಡ್ಡಪತ್ರೆ, ಚಕ್ರಮುನಿ, ಅಲೋವೆರಾ, ನಿಂಬೆಹುಲ್ಲು, ನಾಗದಾಳಿ, ಪುದೀನ, ಬ್ರಹ್ಮದಂಡೆ ಸೇರಿದಂತೆ ವಿವಿಧ ಬಗೆಯ ಔಷಧೀಯ ಸಸ್ಯಗಳನ್ನು ಸಹ ಬೆಳೆಸಿದ್ದಾರೆ. ಅಗತ್ಯವಿದ್ದಾಗ ಸ್ಥಳೀಯರು ಇವುಗಳನ್ನು ಬಳಸಿಕೊಳ್ಳಲು ಮುಕ್ತ ಅವಕಾಶವಿದೆ.

ಬೇಸಿಗೆಯಲ್ಲಿ ಕೊಳವೆಬಾವಿಯಲ್ಲಿನ ನೀರಿನ ಕೊರತೆ ನೀಗಿಸಲು ಕೃಷಿಹೊಂಡ ನಿರ್ಮಿಸಿಕೊಂಡಿದ್ದೇನೆ. ಹನಿ ನೀರಾವರಿ ಪದ್ಧತಿ ಅಳವಡಿಕೆಯಿಂದಾಗಿ ನೀರು ವ್ಯಯವಾಗುವುದಿಲ್ಲ. ಎಲ್ಲ ವೆಚ್ಚ ಕಳೆದು ವರ್ಷಕ್ಕೆ ಸುಮಾರು ೧೦ ಲಕ್ಷ ರೂ.ವರೆಗೆ ಆದಾಯಗಳಿಸುತ್ತಿದ್ದೇನೆ.

- ಕವಿತಾ

share
-ಕುಂಟನಹಳ್ಳಿ ಮಲ್ಲೇಶ್
-ಕುಂಟನಹಳ್ಳಿ ಮಲ್ಲೇಶ್
Next Story
X