Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಮಗ್ರ ಕೃಷಿಯಲ್ಲಿ ಗಮನ ಸೆಳೆದಿರುವ...

ಸಮಗ್ರ ಕೃಷಿಯಲ್ಲಿ ಗಮನ ಸೆಳೆದಿರುವ ಮಲ್ಕೋನಹಳ್ಳಿ ರತ್ನಮ್ಮ

ಕುಂಟನಹಳ್ಳಿ ಮಲ್ಲೇಶಕುಂಟನಹಳ್ಳಿ ಮಲ್ಲೇಶ18 Dec 2023 10:20 AM IST
share
ಸಮಗ್ರ ಕೃಷಿಯಲ್ಲಿ ಗಮನ ಸೆಳೆದಿರುವ ಮಲ್ಕೋನಹಳ್ಳಿ ರತ್ನಮ್ಮ

ಮಂಡ್ಯ: ಕೃಷಿ ಕೆಲಸ ಕೇವಲ ಪುರುಷರಿಗೆ ಮಾತ್ರ ಸೀಮಿತವಲ್ಲ. ಕೃಷಿಯಲ್ಲಿ ಮಹಿಳೆಯರ ಪಾಲು ಬಹಳ! ಎಂಬುದನ್ನು ತೋರಿಸಿರುವ, ಹಲವು ಪ್ರಶಸ್ತಿ ಪಡೆದುಕೊಂಡ ಕೃಷಿಕ ಮಹಿಳೆ, ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಶೀಳನೆರೆ ಹೋಬಳಿಯ ಮಲ್ಕೋನಹಳ್ಳಿ ಗ್ರಾಮದ ರತ್ನಮ್ಮ.

ರತ್ನಮ್ಮ ಅವರಿಗೆ 2.20 ಎಕರೆ ಜಮೀನು ಇದ್ದು, ಪತಿ ಕೃಷ್ಣೇಗೌಡನೊಂದಿಗೆ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡು ರಾಜ್ಯದ ಗಮನ ಸೆಳೆದಿದ್ದಾರೆ.

ಜಮೀನಿನಲ್ಲಿ ಭತ್ತ, ರಾಗಿ, ಅಲಸಂದೆ, ಹೆಸರು, ಉದ್ದು, ಎಳ್ಳು, ಸಿರಿಧಾನ್ಯಗಳಾದ ನವಣೆ, ಬರಗು, ಸಾಮೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ತೋಟಗಾರಿಕೆ ಬೆಳೆಗಳಾದ ತೆಂಗು, ಅಡಕೆ, ಬಾಳೆ, ಪಪ್ಪಾಯ, ಸೀಬೆ, ಹಲಸು, ಏಲಕ್ಕಿ, ಶುಂಠಿ, ಬದನೆ, ಈರುಳ್ಳಿ, ಬೆಳ್ಳುಳ್ಳಿ ಬೆಳೆಗಳೂ ಸಮೃದ್ಧಿಯಾಗಿವೆ.

ಪುಷ್ಪಕೃಷಿಯೂ ಇವರ ಕೈಹಿಡಿದಿದೆ. ಕನಕಾಂಬರ, ಸೇವಂತಿಗೆ ಹೂಗಳನ್ನು ಬೆಳೆಯುತ್ತಿದ್ದಾರೆ. ಜಮೀನಿನ ಬದುಗಳ ಮೇಲೆ ತೇಗ, ಸಿಲ್ವರ್, ಹೆಬ್ಬೇವು ಮರಗಳನ್ನು ಬೆಳೆಸಿದ್ದಾರೆ. ಇದೇ ಬದುಗಳ ಮೇಲೆ ತಮ್ಮ ಜಮೀನಿನ ಸುತ್ತ ಬದುಗಳಲ್ಲಿ ಹಾಕಿದ್ದಾರೆ. ಪಶುಗಳಿಗೆ ಮೇವಿನ ಬೆಳೆಗಳನ್ನು ಸಹ ಬೆಳೆದಿದ್ದಾರೆ.

ರತ್ನಮ್ಮ ಅವರು ಕೃಷಿಯೊಂದಿಗೆ ಹಸು, ಕುರಿ, ಮೇಕೆಗಳನ್ನು ಸಾಕುವಲ್ಲಿ ಆಸಕ್ತಿ ಹೊಂದಿದ್ದಾರೆ. ನಾಲ್ಕು ಹಸುಗಳನ್ನು ಸಾಕಿದ್ದಾರೆ. ಪ್ರತಿದಿನ 20 ಲೀ., ಹಾಲು ಮಾರಾಟ ಮಾಡುತ್ತಿದ್ದಾರೆ. ಉಳುಮೆ ಹಸು ಬಳಸಿ ಸಾಂಪ್ರದಾಯಿಕ ಕೃಷಿ ಮಾಡುತ್ತಿದ್ದಾರೆ. ಇವರ ಉಪಕಸುಬಿನಲ್ಲಿ ಮೇಕೆ, ನಾಟಿ ಕೋಳಿ ಸಾಕಾಣಿಕೆ ಇದೆ. ಜಮೀನಿನಲ್ಲಿ ಉಪ್ಪಿನಕಾಯಿ ಶುಂಠಿ ಬೆಳೆಯಲಾಗಿದ್ದು, ಕಟಾವಿಗೆ ಬಂದಿದೆ. ಸುಮಾರು 10 ಕ್ವಿಂಟಾಲ್ ಇಳುವರಿ ಅಂದಾಜಿಸಲಾಗಿದೆ. ಇದಕ್ಕೆ ಸಾಮಾನ್ಯ ಶುಂಠಿಗಿಂತ ಹೆಚ್ಚಿನ ಬೆಲೆಯಿದೆ. ಇದರೊಂದಿಗೆ 150 ಕ್ವಿಂಟಾಲ್ ಸಾಮಾನ್ಯ ಶುಂಠಿ ಬೆಳೆದಿದ್ದಾರೆ. ಎರಡು ಜೇನು ಪೆಟ್ಟಿಗೆಯನ್ನು ತೋಟದಲ್ಲಿ ನಿರ್ವಹಣೆ ಮಾಡುತ್ತಿದ್ದಾರೆ. ಜೇನುತುಪ್ಪವನ್ನು ಮನೆಗೆ ಬಳಸಿಕೊಂಡು ಸ್ಥಳೀಯವಾಗಿಯೂ ಮಾರಾಟ ಮಾಡುತ್ತಿದ್ದಾರೆ.

ರತ್ನಮ್ಮ ಅವರು ಟಿವಿ,ರೇಡಿಯೋದಲ್ಲಿ ಪ್ರಸಾರವಾಗುವ ಕೃಷಿ ಆಧಾರಿತ ಕಾರ್ಯಕ್ರಮಗಳನ್ನು ಕೇಳಿ ಹೊಸ ಹೊಸ ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿದ್ದಾರೆ. ಕೃಷಿ ಇಲಾಖೆಗೆ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು, ಸಲಹೆ ಪಡೆಯುತ್ತಾರೆ. ಇವರ ತೋಟಕ್ಕೆ ರೈತರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಮೈಸೂರು ಆಕಾಶವಾಣಿಯಲ್ಲಿ ಇವರ ಸಂದರ್ಶನ ಪ್ರಸಾರವಾಗಿದೆ.

2017-18ನೇ ಸಾಲಿನಲ್ಲಿ ಕೃಷಿ ಇಲಾಖೆ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ, 2019-20ನೇ ಸಾಲಿನ ಕೃಷಿ ವಿಶ್ವವಿದ್ಯಾನಿಲಯದ ಜಿಲ್ಲಾಮಟ್ಟದ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ಹಾಗೂ 2022ರಲ್ಲಿ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಮಾದರಿ ಕೃಷಿ ಮಹಿಳೆ ಪ್ರಶಸ್ತಿಗೆ ರತ್ನಮ್ಮ ಭಾಜನರಾಗಿದ್ದಾರೆ.

ಭತ್ತ, ರಾಗಿ ಬೆಳೆಯಿಂದ ವಾರ್ಷಿಕ ಸರಾಸರಿ 60 ಸಾವಿರ ರೂ., ಅಲಸಂದೆ, ಹೆಸರು, ಉದ್ದು ಫಸಲಿನಿಂದ 20 ಸಾವಿರ ರೂ. ತೆಂಗಿನ ಕಾಯಿ, ಎಳನೀರು ಫಸಲಿನಲ್ಲಿ ಸುಮಾರು 1.20 ಲಕ್ಷ ರೂ., ಹೂವು ಕೃಷಿಯಿಂದ 60 ಸಾವಿರ ರೂ. ಆದಾಯ ಬರುತ್ತಿದೆ. ಇದರ ಜತೆಗೆ, ಹೈನುಗಾರಿಕೆ, ಜೇನು ಕೃಷಿಯಿಂದಲೂ ಲಾಭ ಬರುತ್ತಿದೆ.

► ರತ್ನಮ್ಮ, ಕೃಷಿಕ ಮಹಿಳೆ

share
ಕುಂಟನಹಳ್ಳಿ ಮಲ್ಲೇಶ
ಕುಂಟನಹಳ್ಳಿ ಮಲ್ಲೇಶ
Next Story
X