Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‌ಬಿಜೆಪಿ ಜೊತೆ ಆರೆಸ್ಸೆಸ್ ಅಂತರ...

‌ಬಿಜೆಪಿ ಜೊತೆ ಆರೆಸ್ಸೆಸ್ ಅಂತರ ಹೆಚ್ಚುತ್ತಲೇ ಇದೆಯೇ ?

ಮೋದಿ ವಿರುದ್ಧವೇ ಮಾತಾಡಿದರೇ ಭಾಗವತ್ ?

ವಾರ್ತಾಭಾರತಿವಾರ್ತಾಭಾರತಿ19 July 2024 5:41 PM IST
share
‌ಬಿಜೆಪಿ ಜೊತೆ ಆರೆಸ್ಸೆಸ್ ಅಂತರ ಹೆಚ್ಚುತ್ತಲೇ ಇದೆಯೇ ?

ಪ್ರಧಾನಿ ಮೋದಿ ಹಾಗು ಆರೆಸ್ಸೆಸ್ ನಡುವಿನ ಮುನಿಸು ಹೆಚ್ಚುತ್ತಲೇ ಇದೆಯೇ? ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬಳಿಕ ಶುರುವಾಗಿರುವ ಪ್ರಧಾನಿ ಹಾಗು ಬಿಜೆಪಿ ಮೇಲಿನ ಆರೆಸ್ಸೆಸ್ ವಾಗ್ದಾಳಿ ಮತ್ತೆ ಮುಂದುವರಿದಿದೆಯೇ ? ಎಂಬ ಸಂಶಯ ಈಗ ಸಾಮಾಜಿಕ ಜಾಲತಅಣಗಳಲ್ಲಿ ಚರ್ಚೆಯಾಗುತ್ತಿದೆ.

ಈಗ ಹೊರಬಂದಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿಡಿಯೋ ಜನರ ಸಂಶಯಕ್ಕೆ ಪುಷ್ಠಿ ನೀಡುತ್ತದೆ. ಮನುಷ್ಯ ದೇವನಾಗಲು ಬಯಸುತ್ತಿದ್ದಾನೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಈಗ ಮತ್ತೆ ಚರ್ಚೆಗೆ ಕಾರಣವಾಗಿದೆ. ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

"ಮಾನವ ಮಹತ್ವಾಕಾಂಕ್ಷೆಗೆ ಅಂತ್ಯವಿಲ್ಲ. ಮನುಷ್ಯನು ಸೂಪರ್‌ಮ್ಯಾನ್, ನಂತರ ದೇವರು ಮತ್ತು ಭಗವಂತನಾಗಲು ಬಯಸುತ್ತಾನೆ" ಎಂದು ಭಾಗವತ್ ಹಾಳಿದ್ದಾರೆ.

ಭಾಗವತ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ನಾಗ್ಪುರದಿಂದ ದಿಲ್ಲಿಯ ಲೋಕ ಕಲ್ಯಾಣ ಮಾರ್ಗಕ್ಕೆ ಉಡಾಯಿಸಿದ ಕ್ಷಿಪಣಿ ಇದು ಎಂದು ವ್ಯಂಗ್ಯವಾಡಿದೆ. ಉಡಾಯಿಸಲಾದ ಈ ಇತ್ತೀಚಿನ ಅಗ್ನಿ ಕ್ಷಿಪಣಿಯ ಸುದ್ದಿಯನ್ನು ಪ್ರಧಾನಿ ಪಡೆದುಕೊಂಡಿದ್ದಾರೆ ಮತ್ತು ಪ್ರಧಾನಿಯವರ ಅಧಿಕೃತ ನಿವಾಸವಾದ ಲೋಕ ಕಲ್ಯಾಣ ಮಾರ್ಗವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ.

ಮೋಹನ್ ಭಾಗವತ್ ಅವರು ಜಾರ್ಖಂಡ್ ನಲ್ಲಿ ಬುಡಕಟ್ಟು ಸಮಾಜದ ಅಭಿವೃದ್ಧಿಯ ಕುರಿತು ಚರ್ಚಿಸುತ್ತಾ, "ಅಭಿವೃದ್ಧಿ ಮತ್ತು ಮಾನವ ಮಹತ್ವಾಕಾಂಕ್ಷೆಗೆ ಅಂತ್ಯವಿಲ್ಲ. ಜನರು ಮನುಕುಲದ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಬೇಕು" ಎಂದು ಹೇಳಿದ್ದಾರೆ.

ಆದರೆ ಅದರ ಜೊತೆ ಜೊತೆಗೇ "ಮನುಷ್ಯ ಮೊದಲು ಸೂಪರ್‌ಮ್ಯಾನ್ ಆಗಲು ಬಯಸುತ್ತಾನೆ, ನಂತರ ದೇವರಾಗಲು ಬಯಸುತ್ತಾನೆ ಮತ್ತು ನಂತರ ಭಗವಂತನಾಗಲು ಬಯಸುತ್ತಾನೆ" ಎಂದು ಹೇಳಿದ್ದಾರೆ.

ಭಾಗವತ್ ಅವರು ಪ್ರಧಾನಿ ಮೋದಿ ಹೆಸರು ಎಲ್ಲೂ ಉಲ್ಲೇಖಿಸದಿದ್ದರೂ ಇದು ಪ್ರಧಾನಿ ಮೋದಿ ವಿರುದ್ಧ ಅವರು ಮಾಡಿದ ಪರೋಕ್ಷ ವಾಗ್ದಾಳಿ ಎಂದೇ ರಾಜಕೀಯ ವಲಯದಲ್ಲಿ ಹಾಗು ಸಾಮಾಜಿಕ ಜಾಲತಾಣದಲ್ಲೂ ವಿಶ್ಲೇಷಿಸಲಾಗುತ್ತಿದೆ.

ಜನರು ತಮ್ಮ ಸಾಧನೆಗಳಿಂದ ತೃಪ್ತರಾಗಬಾರದು. ಅಭಿವೃದ್ಧಿ ಮತ್ತು ಮಾನವ ಮಹತ್ವಾಕಾಂಕ್ಷೆಯ ಅನ್ವೇಷಣೆಗೆ ಕೊನೆಯಿಲ್ಲ. ಆದ ಕಾರಣ ಮನುಕುಲದ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸಲಹೆ ನೀಡಿದ್ದಾರೆ.

"ಕೆಲಸ ಮುಂದುವರಿಯಬೇಕು, ಪರಿಸರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಕೆಲಸ ಮಾಡಲು ಶ್ರಮಿಸಬೇಕು. ಇದಕ್ಕೆ ಅಂತ್ಯವಿಲ್ಲ ಮತ್ತು ವಿವಿಧ ಕ್ಷೇತ್ರಗಳಲ್ಲಿ ನಿರಂತರ ಕೆಲಸವೊಂದೇ ಪರಿಹಾರ. ಈ ಜಗತ್ತನ್ನು ಸುಂದರವಾಗಿಸಲು ನಾವು ಶ್ರಮಿಸಬೇಕು”ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿಯವರನ್ನು ಕುಟುಕಿ ಜೈರಾಮ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜಾರ್ಖಂಡ್‌ನಿಂದ ಲೋಕ ಕಲ್ಯಾಣ ಮಾರ್ಗವನ್ನು ಗುರಿಯಾಗಿಸಿಕೊಂಡು ನಾಗ್ಪುರ ಉಡಾಯಿಸಿದ ಈ ಇತ್ತೀಚಿನ ಅಗ್ನಿ ಕ್ಷಿಪಣಿಯ ಸುದ್ದಿಯನ್ನು ನಾನ್ ಬಯಲೋಜಿಕಲ್ ಪ್ರಧಾನಿ ಪಡೆದುಕೊಂಡಿರಬೇಕು ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ.

ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಕಳುಹಿಸಿದ್ದಾನೆ ಎಂಬ ಪ್ರಧಾನಿ ಮೋದಿ ಮಾತನ್ನು ಕಾಂಗ್ರೆಸ್ ಆಗಾಗ ಲೇವಡಿ ಮಾಡುತ್ತಲೇ ಬಂದಿದೆ.

"ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಕಳುಹಿಸಿದ್ದಾನೆ" ಎಂದು ಚುನಾವಣಾ ಪ್ರಚಾರದ ವೇಳೆ ಸಂದರ್ಶನ ಒಂದರಲ್ಲಿ ಪ್ರಧಾನಿ ಮೋದಿ ಹೇಳಿದ್ದರು. "ನನ್ನ ತಾಯಿ ಬದುಕಿರುವವರೆಗೂ, ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ನಾನು ಭಾವಿಸುತ್ತಿದ್ದೆ. ಅವರ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ" ಎಂದು ಮತ್ತೊಂದು ಸಂದರ್ಶನದಲ್ಲಿ ಪ್ರಧಾನಿ ಮೋದಿ ಹೇಳಿದ್ದರು.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯನ್ನು “ಭಗವತ್ ಬಾಂಬ್” ಮತ್ತು “ಅಗ್ನಿ ಕ್ಷಿಪಣಿ” ಎಂದು ಹೇಳಿ ಕಾಂಗ್ರೆಸ್ ಪ್ರಧಾನಿ ಮೋದಿ ಹಾಗು ಬಿಜೆಪಿಯನ್ನು ಚುಚ್ಚಿದೆ.

ಈ ಹಿಂದೆ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಜಂಟಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾವೆಲ್ಲರೂ ಹುಟ್ಟುತ್ತೇವೆ ಮತ್ತು ಸಾಯುತ್ತೇವೆ, ಆದರೆ ‘ಪರಮಾತ್ಮ’ ಮೋದಿಯ ‘ಆತ್ಮ’ದ ಜೊತೆ ಮಾತನಾಡುತ್ತಾರೆ ಎಂದು ತಮಾಷೆ ಮಾಡಿದ್ದರು.

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಈಗ ಸಶಕ್ತವಾಗಿದೆ, ನಮಗೆ ಈಗ ಆರೆಸ್ಸೆಸ್ ನ ಅಗತ್ಯವಿಲ್ಲ ಎಂದು ಹೇಳಿಕೆ ಕೊಟ್ಟಾಗಿನಿಂದ ಈ ವಿವಾದ ಶುರುವಾಗಿದೆ.

ಚುನಾವಣೆಯಲ್ಲಿ ಬಿಜೆಪಿ ಬಹುಮತ ಕಳಕೊಂಡ ಬಳಿಕ ಆರೆಸ್ಸೆಸ್ ನ ನಾಯಕರು, ಅದರ ಪತ್ರಿಕೆ ಬಿಜೆಪಿ ಹಾಗು ಮೋದಿ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಅತಿ ಆತ್ಮ ವಿಶ್ವಾಸದಿಂದ, ಅಹಂ ನಿಂದ ಬಿಜೆಪಿ ಹಿನ್ನಡೆ ಕಂಡಿತು ಎಂದು ಹೇಳಿದ್ದಾರೆ.

ಆರೆಸ್ಸೆಸ್ ಮತ್ತು ಮೋದಿ ಶಾ ಜೋಡಿಯ ನಡುವೆ ಎಲ್ಲವೂ ಸರಿ ಇಲ್ಲ ಎಂದು ಚರ್ಚೆಯಾಗುತ್ತಿರುವ ಸಮಯದಲ್ಲೇ ಭಾಗವತ್ ಅವರ ಈ ಹೇಳಿಕೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X