Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಿಶ್ರ ಬೇಸಾಯ, ಹೈನುಗಾರಿಕೆಯಲ್ಲಿ ಯಶಸ್ಸು...

ಮಿಶ್ರ ಬೇಸಾಯ, ಹೈನುಗಾರಿಕೆಯಲ್ಲಿ ಯಶಸ್ಸು ಕಂಡ ನಿವೃತ್ತ ಶಿಕ್ಷಕ

25 ಎಕರೆ ಜಮೀನಿನಲ್ಲಿ ಸಾವಯವ ಕೃಷಿ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್4 March 2024 11:38 AM IST
share
ಮಿಶ್ರ ಬೇಸಾಯ, ಹೈನುಗಾರಿಕೆಯಲ್ಲಿ ಯಶಸ್ಸು ಕಂಡ ನಿವೃತ್ತ ಶಿಕ್ಷಕ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಂಗಲ ಗ್ರಾಮದ ಪ್ರಗತಿಪರ ಕೃಷಿಕ ಶ್ರೀನಿವಾಸ್ ರೆಡ್ಡಿ ಅವರ ಯಶೋಗಾಥೆ ಇತರರಿಗೆ ಮಾದರಿಯಾಗಿದೆ. ದೈಹಿಕ ಶಿಕ್ಷಕರಾಗಿ ನಿವೃತ್ತಿ ಹೊಂದಿದ ಶ್ರೀನಿವಾಸ್ ರೆಡ್ಡಿಯವರು ಸಾವಯವ ಕೃಷಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.

ಸುಮಾರು 25 ಎಕರೆ ಜಮೀನಿನಲ್ಲಿ ಅರಣ್ಯ ಕೃಷಿ, ವಿವಿಧ ಜಾತಿಯ ಹಣ್ಣು, ತರಕಾರಿ ಸಹಿತ ಬಹುಬೆಳೆ ಪದ್ಧತಿ ಮೂಲಕ ಅವರು ಸಾವಯವ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ.

ಶ್ರೀನಿವಾಸ್ ಅವರ ಜಮೀನಿನಲ್ಲಿ ನಿಂಬೆ, ಎರಳಿ, ಸೀತಾಫಲ, ಕಿತ್ತಳೆ, ಬೆಣ್ಣೆಹಣ್ಣು, ಲಿಚ್ಚಿ ಹಣ್ಣು, ಜಾಯಿಕಾಯಿ, ಜಂಬೂನೇರಳೆ, ವಾಟರ್ ಆ್ಯಪಲ್, ಮೆಕಾಡಮಿಯಾ, ಕರ್ಜೂರ, ಎಂಬ ವಿಶೇಷ ಹಣ್ಣು ಹೀಗೆ ನೂರಾರು ತಳಿಗಳ ಬಗೆಬಗೆಯ ಹಣ್ಣುಗಳು ಜೊತೆಗೆ ವಿದೇಶಿ ಹಣ್ಣುಗಳನ್ನೂ ಬೆಳೆಯಲು ನಾಟಿಮಾಡಿದ್ದಾರೆ.


ಅಲ್ಲದೆ ಸಿಲ್ವರ್, ಮಹಾಗನಿ, ಶಿವನಿ, ಅಗರ್ಹುಡ್, ಮಾವು, ಹಲಸು, ಪನ್ನೇರೆಳೆ, ಎಲ್ಲಕ್ಕಿ, ಸಿಹಿಹುಣಸೇ, ತೆಂಗು, ಅಡಿಕೆ, ಕಾಳುಮೆಣಸು, ಬಾಳೆ, ಅಲ್ಲದೆ ವಿವಿಧ ತರಕಾರಿ ಗಿಡಗಳು ಪರಿಸರ ಪ್ರೇಮಿಗಳನ್ನು ಕೈ ಬೀಸಿ ಕರೆಯುತ್ತಿವೆ.

ಕೃಷಿಯಿಂದ ದೂರ ಉಳಿದವರಿಗೂ ಕೃಷಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬ ಪ್ರೇರಣೆಯನ್ನು ಅವರು ನೀಡುತ್ತಿದ್ದಾರೆ. ಕೇವಲ ತೋಟಗಾರಿಕೆ ಹಾಗೂ ಮಿಶ್ರ ಬೇಸಾಯಕ್ಕೆ ಸೀಮಿತವಾಗದೆ ಹೈನುಗಾರಿಕೆ ಹಾಗೂ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಶೇ. 100ರಷ್ಟು ಸಾವಯವಗೊಬ್ಬರ

ರೈತ ಶ್ರೀನಿವಾಸ್ ರೆಡ್ಡಿಯವರ 25 ಎಕರೆ ಜಮೀನಿನಲ್ಲಿ ನಾಲ್ಕು ಕೊಳವೆ ಬಾವಿ ಇದೆ. ಇದರ ಜೊತೆಗೆ ಮಳೆಯಾಶ್ರಿತ ಕೃಷಿ ಹೊಂಡವನ್ನು ಮಾಡಿ ಹನಿ ನೀರಾವರಿ ಪದ್ಧತಿಯಲ್ಲಿ ಮೋಟಾರ್ ಮೂಲಕ ನೀರು ಹರಿಸುತ್ತಾರೆ.

ಉಳುಮೆ ರಹಿತವಾಗಿ ಸಾವಯವ ಕೃಷಿ ಪದ್ಧತಿಯಲ್ಲಿ ಗೋಕೃಪಾಮೃತ, ಜೀವಾಮೃತ, ಜೈವಿಕಗೊಬ್ಬರ, ಹಸುವಿನ ಗೊಬ್ಬರವನ್ನು ತಮ್ಮ ಹೊಲಕ್ಕೆ ಬಳಸುತ್ತಾರೆ. ಹೀಗೆ ಸಾವಯವ ಹಾಗೂ ದನದ ಗೊಬ್ಬರವನ್ನು ಹೊಲಕ್ಕೆ ಬಳಸಿ ಆರ್ಥಿಕವಾಗಿ ಲಾಭಗೊಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಕುಟುಂಬಸ್ಥರ ಸಹಕಾರ

ಕೃಷಿ ಕೆಲಸಗಳಿಗೆ ಕೆಲವು ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಕೊರತೆಯಾದರೆ ಶ್ರೀನಿವಾಸ್ ರೆಡ್ಡಿಯವರ ಪತ್ನಿ ಹಾಗೂ ಮನೆಯ ಸದಸ್ಯರು ಕೃಷಿ ಚಟುವಟಿಕೆಯಲ್ಲಿ ತೊಡಗಿ ಇವರಿಗೆ ಸಹಕರಿಸುತ್ತಾರೆ. ಶ್ರೀನಿವಾಸ್ ರೆಡ್ಡಿಯವರ ಕುಟುಂಬ ಸಮಗ್ರ ಕೃಷಿ ಪದ್ಧತಿಯನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬರುತ್ತಿದೆ.

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X