Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೇರಳಕ್ಕೆ ಅಕ್ರಮವಾಗಿ ಎಂ.ಸ್ಯಾಂಡ್...

ಕೇರಳಕ್ಕೆ ಅಕ್ರಮವಾಗಿ ಎಂ.ಸ್ಯಾಂಡ್ ಸಾಗಣೆ: ಸಾರ್ವಜನಿಕರ ಆರೋಪ

ತಪಾಸಣೆ ಮಾಡದೇ ಪೊಲೀಸರ ಜಾಣ ಕುರುಡುತನ, ಸರಕಾರದ ಬೊಕ್ಕಸಕ್ಕೆ ನಷ್ಟ

ರಾಜ್ ಗೋಪಾಲ್ ಹಾಲಹಳ್ಳಿರಾಜ್ ಗೋಪಾಲ್ ಹಾಲಹಳ್ಳಿ4 March 2024 1:16 PM IST
share
ಕೇರಳಕ್ಕೆ ಅಕ್ರಮವಾಗಿ ಎಂ.ಸ್ಯಾಂಡ್ ಸಾಗಣೆ: ಸಾರ್ವಜನಿಕರ ಆರೋಪ

ಗುಂಡ್ಲುಪೇಟೆ, ಮಾ.4: ಸಂಜೆಯಾಗುತ್ತಿದ್ದಂತೆ ಅಕ್ರಮವಾಗಿ ರಾಜ್ಯದ ಗಡಿ ಗುಂಡ್ಲುಪೇಟೆಯಿಂದ ಕೇರಳಕ್ಕೆ ಎಂ.ಸ್ಯಾಂಡ್ ತುಂಬಿದ ಟಿಪ್ಪರ್ ಲಾರಿಗಳು ಹೆಚ್ಚಿನ ಪ್ರಮಾಣದಲ್ಲಿ ರಾಜಧನ ವಂಚಿಸಿ ತೆರಳುತ್ತಿವೆ. ಇದರಿಂದ ಸರಕಾರದ ಬೊಕ್ಕಸಕ್ಕೆ ನಷ್ಟವಾಗುವ ಜೊತೆಗೆ ರಾಜ್ಯದ ಸಂಪತ್ತು ನೆರೆಯ ಕೇರಳದ ಪಾಲಾಗುತ್ತಿದೆ ಎಂದು ಸಾರ್ವಜನಿಕರು ಹಾಗು ವಿವಿಧ ಸಂಘಟನೆ ಮುಖಂಡರ ಆರೋಪವಾಗಿದೆ.

ತಾಲೂಕಿನ ಗಡಿ ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಸಂಜೆ ಮತ್ತು ರಾತ್ರಿ ವೇಳೆ ಎಂ.ಸ್ಯಾಂಡ್ ತುಂಬಿದ ಟಿಪ್ಪರ್ಗಳು ಯಾವುದೇ ತಪಾಸಣೆ ಇಲ್ಲದೆ ರಾಜಾರೋಷಾವಾಗಿ ಸಂಚಾರ ಮಾಡುತ್ತಿದ್ದು, ಒಂದು ಲಾರಿಗೆ ರಾಯಲ್ಟಿ ತೆಗೆದುಕೊಂಡು ಹತ್ತಾರು ಲಾರಿಗಳು ಸಂಚರಿಸುತ್ತಿವೆ. ಜೊತೆಗೆ ರಾಯಲ್ಟಿ ಪ್ರಮಾಣ 20ಟನ್ ಇದ್ದರೂ, 50ಕ್ಕೂ ಹೆಚ್ಚು ಟನ್ ಎಂ.ಸ್ಯಾಂಡ್ ತುಂಬಿಕೊಂಡು ಲಾರಿಗಳು ಕೇರಳ ರಾಜ್ಯಕ್ಕೆ ತೆರಳುತ್ತಿವೆ. ಹೀಗಿದ್ದರೂ ಕೂಡ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಮೌನಕ್ಕೆ ಶರಣಾಗಿದೆ ಎಂದು ಸ್ಥಳೀಯರ ಆರೋಪವಾಗಿದೆ.

ತಪಾಸಣೆಯೇ ಇಲ್ಲ: ರಾಜ್ಯದ ಗಡಿ ಮೂಲೆಹೊಳೆ ಚೆಕ್ ಪೋಸ್ಟ್ ಮಾರ್ಗವಾಗಿ ಅಧಿಕ ಭಾರ ಹೊತ್ತು ಹತ್ತಾರು ಟಿಪ್ಪರ್ ಲಾರಿಗಳು ಎಂ.ಸ್ಯಾಂಡ್ ತುಂಬಿಕೊಂಡು ಸಂಚಾರ ಮಾಡುತ್ತಿವೆ. ಹೀಗಿದ್ದರೂ ಕೂಡ ಅರಣ್ಯ ಇಲಾಖೆ, ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ಯಾವೊಂದು ವಾಹನವನ್ನು ತಡೆದು ತಪಾಸಣೆ ನಡೆಸುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಅಧಿಕಾರಿಗಳ ಸೋಗಿನಲ್ಲಿಯೇ ಸಾಗಣೆ ಆರೋಪ: ಪ್ರತಿನಿತ್ಯ ಅಲರ್ಟ್ ಆಗುವ ಕೇರಳ ಉದ್ಯಮಿಗಳು ಗುಂಡ್ಲುಪೇಟೆಯಿಂದ ಟನ್ ಗಟ್ಟಲೆ ಎಂ.ಸ್ಯಾಂಡ್ ಸಾಗಣೆ ಮಾಡುತ್ತಿದ್ದಾರೆ. ಇದಕ್ಕೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಕೆಲ ಅಧಿಕಾರಿಗಳೇ ಸಾತ್ ನೀಡುತ್ತಿದ್ದಾರೆ. ಇದರಿಂದ ಎಂ.ಸ್ಯಾಂಡ್ ಮತ್ತು ಬಿಳಿಕಲ್ಲು ಸಾಗಣೆ ಮಾಫಿಯವಾಗಿ ಮಾರ್ಪಾಡಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅಕ್ರಮವಾಗಿ ಎಂ.ಸ್ಯಾಂಡ್ ಹೆಚ್ಚಿನ ಪ್ರಮಾಣದಲ್ಲಿ ಸಾಗಣೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಸಂಪತ್ತು ನೆರೆಯ ಕೇರಳದವರ ಪಾಲಾಗುತ್ತಿದೆ. ಇದು ಹೀಗಿಯೇ ಮುಂದುವರಿದರೆ ಸರಕಾರಕ್ಕೆ

ಕೋಟ್ಯಂತರ ರೂ. ರಾಜಧನ ನಷ್ಟವಾಗಲಿದೆ. ಆದ್ದರಿಂದ ಸ್ಥಳೀಯ ಶಾಸಕ ಎಚ್.ಎಂ.ಗಣೇಶಪ್ರಸಾದ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಈ ದಂಧೆಗೆ ಕಡಿವಾಣ ಹಾಕಬೇಕೆಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಎಗ್ಗಿಲ್ಲದೆ ಬಿಳಿಕಲ್ಲು ಸಾಗಣೆ

ಗುಂಡ್ಲುಪೇಟೆಯಿಂದ ಕೇರಳಕ್ಕೆ ಎಂ.ಸ್ಯಾಂಡ್ ಜೊತೆಗೆ ಬಿಳಿಕಲ್ಲು ಕೂಡ ಅಕ್ರಮವಾಗಿ ಹಗಲು-ರಾತ್ರಿ ಎನ್ನದೆ ಎಗ್ಗಿಲ್ಲದೆ ಸಾಗಣೆಯಾಗುತ್ತಿದೆ. ಒಂದಕ್ಕೆ ಫರ್ಮಿಟ್ ತೆಗೆದುಕೊಂಡು ಅಧಿಕ ಲಾರಿ ಸಂಚಾರ ಮಾಡುತ್ತಿದೆ. ಇದರಿಂದ ತಾಲೂಕಿನ ಖನಿಜ ಸಂಪತ್ತು ಬೇರೆಯವರ ಪಾಲಾಗುತ್ತಿದೆ. ಹೀಗಿದ್ದರೂ ಕೂಡ ಗಣಿಗಾರಿಕೆ ಇಲಾಖೆ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದ ಸ್ಥಳೀಯರು ಆರೋಪಿಸಿದ್ದಾರೆ.

ಪರ್ಮಿಟ್ ಇಲ್ಲದೆ ಕೇರಳಕ್ಕೆ ಎಂ.ಸ್ಯಾಂಡ್ ತುಂಬಿಕೊಂಡು ತೆರಳುವ ಟಿಪ್ಪರ್ ಲಾರಿಗಳನ್ನು ತಪಾಸಣೆ ನಡೆಸಿ ಅಕ್ರಮ ಕಂಡು ಬಂದರೆ ಲಾರಿಗಳನ್ನು ಸೀಜ್ ಮಾಡುವ ಜೊತೆಗೆ ಸೂಕ್ತ ಕ್ರಮ ಜರುಗಿಸಲಾಗುವುದು.

- ಪದ್ಮಜಾ, ಗಣಿ ಇಲಾಖೆ ಡಿಡಿ, ಚಾಮರಾಜನಗರ

share
ರಾಜ್ ಗೋಪಾಲ್ ಹಾಲಹಳ್ಳಿ
ರಾಜ್ ಗೋಪಾಲ್ ಹಾಲಹಳ್ಳಿ
Next Story
X