Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಚಳಿಗಾಲದ ಬಿಸಿಯೂಟಕ್ಕೆ ಅವರೆಕಾಯಿ ಘಮಲು

ಚಳಿಗಾಲದ ಬಿಸಿಯೂಟಕ್ಕೆ ಅವರೆಕಾಯಿ ಘಮಲು

ಮುಹಮ್ಮದ್ ರಫೀಕ್ಮುಹಮ್ಮದ್ ರಫೀಕ್26 Dec 2023 12:56 PM IST
share
ಚಳಿಗಾಲದ ಬಿಸಿಯೂಟಕ್ಕೆ ಅವರೆಕಾಯಿ ಘಮಲು

ಹುಣಸೂರು, ಡಿ.26: ಕೊಡಗಿನ ಮಲೆನಾಡು ವಲಯಕ್ಕೆ ಹೊಂದಿಕೊಂಡಂತೆ ಇರುವ ಹುಣಸೂರಿನಲ್ಲಿ ಅವರೆಕಾಯಿ ವ್ಯಾಪಾರ ಸಂಪದ್ಬರಿತ ವ್ಯಾಪಾರವಾಗಿದ್ದು, ನವೆಂಬರ್ ಕಳೆದು ಡಿಸೆಂಬರ್ನ ಮಾಗಿಯ ಚಳಿಗಾಲ ಬರುತ್ತಿದಂತೆ ಬಿಸಿ ಬಿಸಿಯೂಟಕ್ಕೆ ಅವರೆಕಾಯಿ ಸೊಗಡು ಜನರನ್ನು ಆಕರ್ಷಿಸುತ್ತದೆ ಹಾಗೂ ಎಲ್ಲರ ಬಾಯಲ್ಲೂ ನೀರು ತರಿಸುತ್ತದೆ.

ಮೈಸೂರು ಜಿಲ್ಲೆಯ ಹುಣಸೂರು ಸುತ್ತ ಮುತ್ತ ಬೆಳೆಯುವ ಅವರೆಕಾಯಿ ಬೆಂಗಳೂರು, ದೊಡ್ಡಬಳ್ಳಾಪುರ, ಪಾವಗಡ, ಸತ್ತಿ, ತುಮಕೂರು, ಮಂಗಳೂರು, ಬಾಂಬೆ, ಚೆನೈ, ತಮಿಳುನಾಡು, ಆಂಧ್ರಪ್ರದೇಶಗಳಿಗೆ ರಫ್ತಾಗುತ್ತಿದೆ.

ಈ ಬಾರಿ ಹಿಂಗಾರು ಮಳೆ ಸರಿಯಾಗಿ ಆಗದೆ ಕೆಲವು ಕಡೆ ಬಿತ್ತನೆ ಹಾಳಾಗಿ ಕಳೆದ ಬಾರಿಗಿಂತ ಈ ಬಾರಿ ಇಳುವರಿ ಕಡಿಮೆಯಾಗಿದೆ. ಅವರೆಯ ಸೊಗಡು ಎಲ್ಲರ ಮೂಗನ್ನು ತಾಕಿ ಮನ ಸೆಳೆಯುತ್ತದೆ. ಜನರನ್ನು ಮುಗಿ ಬೀಳಿಸುವಂತೆ ಮಾಡುತ್ತದೆ. ನವೆಂಬರ್ ಕೊನೆಯ ವಾರದಲ್ಲಿ ಪ್ರಾರಂಭವಾಗುವ ಅವರೆಕಾಯಿ ಮಾರಾಟ ಡಿಸೆಂಬರ್ ಮಾಹೆಯಲ್ಲಿ ಬಿರುಸಾಗಿ ನಡೆಯುತ್ತದೆ. ಈ ಬಾರಿ ಇಳುವರಿ ಕಡಿಮೆ ಇದ್ದರೂ ಪ್ರತಿದಿನ 40ರಿಂದ 50ಟನ್ ಅವರೆಕಾಯಿ ತಾಲೂಕಿನಲ್ಲಿ ಮಾರಾಟವಾಗುತ್ತಿದೆ. ಬನ್ನಿಕುಪ್ಪೆ ಮುಖ್ಯಾರಸ್ತೆಯಲ್ಲಿ ಪ್ರತೀ ದಿನ 25 ಟನ್, ಎಪಿಎಂಸಿ ಯಲ್ಲಿ 10 ಟನ್, ಅಲ್ಲದೆ ತಾಲೂಕಿನ ವಿವಿಧೆಡೆ ಅವರೆ ಕಾಯಿ ವ್ಯಾಪಾರ ಬಿರುಸಿನಿಂದ ಸಾಗಿದೆ.


ಹುಣಸೂರು ತಾಲೂಕಿನಲ್ಲಿ ಕಳೆದ ಭಾರಿ 9,850 ಹೆಕ್ಟರ್ ಪ್ರದೇಶದಲ್ಲಿ ಬೆಳೆದಿದ್ದ ಅವರೆ ಈ ಭಾರಿ ಮಳೆಯ ಕೊರತೆಯಿಂದ 6,400 ಹೆಕ್ಟರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಕಳೆದ ಬಾರಿ ತಾಲೂಕಿನ ಕಸಬಾ ಹೋಬಳಿಯಲ್ಲಿ 3,450 ಹೆಕ್ಟರ್, ಬಿಳಿಕೆರೆ ಹೋಬಳಿಯಲ್ಲಿ 1,995 ಹೆಕ್ಟರ್, ಗಾವಡಗೆರೆ ಹೋಬಳಿಯಲ್ಲಿ 2,825 ಹೆಕ್ಟರ್, ಹನಗೋಡು ಹೋಬಳಿಯಲ್ಲಿ 1,580 ಹೆಕ್ಟರ್ ಪ್ರದೇಶದಲ್ಲಿ ಬೇಳೆಯಲಾಗಿದ್ದ ಅವರೆ ಈ ಬಾರಿ ಕಸಬಾ ಹೋಬಳಿಯಲ್ಲಿ 2,350 ಹೆಕ್ಟರ್, ಬಿಳಿಕೆರೆ ಹೋಬಳಿಯಲ್ಲಿ 1,250 ಹೆಕ್ಟರ್, ಗಾವಡಗೆರೆ ಹೋಬಳಿಯಲ್ಲಿ 1,650 ಹೆಕ್ಟರ್ ಅವರೆ ಬೆಳೆಯಲಾಗಿದೆ. ಕಳೆದ ಭಾರಿ ಒಂದು ಹೆಕ್ಟರ್ಗೆ 20 ರಿಂದ 25 ಕ್ವಿಂಟಾಲ್ ಇಳುವರಿ ಬಂದಿದ್ದ ಅವರೆ ಈ ಭಾರಿ 15ರಿಂದ 18ಕ್ವಿಂಟಾಲ್ ಇಳುವರಿ ಬರುತ್ತದೆ ಎಂದು ಅಂದಾಜು ಮಾಡಲಾಗಿತ್ತು.

ಈ ಬಾರಿ ಸಾಧಾರಣ ಇಳುವರಿ ಬಂದಿರುವುದರಿಂದ ಅವರೆಕಾಯಿಗೆ ಭಾರೀ ಬೆಡಿಕೆ ಇದ್ದು, ಬೆಲೆಯು ಹೆಚ್ಚಾಗಿದ್ದು, ಅವರೆ ಬೆಳೆದ ರೈತರು ಖುಷಿಯಾಗಿದ್ದಾರೆ.ಒಂದು ಕೆಜಿಗೆ 45ರೂ. ರಿಂದ 50ರೂ. ದೊರೆಯುತ್ತಿದೆ.

ರೈತರು ಅವರೆ ಬಿತ್ತನೆಯನ್ನು ಸರಿಯಾಗಿ ಮಳೆ ಬೀಳುವ ಸಮಯದಲ್ಲಿ ಬಿತ್ತನೆಯನ್ನು ಮಾಡಿದರೆ ಮತ್ತು ಕಾಯಿಗಳು ಕೊರಕ ಹುಳು ಹಾವಳಿಯನ್ನು ಕ್ರಿಮಿನಾಶಕಗಳಿಂದ ತಡೆದುಕೊಂಡರೆ ಉತ್ತಮ ಇಳುವರಿ ಕಾಣಬಹುದು. ಅಲ್ಲದೇ ಲಘು ಪೂಷಕಾಂಶ ಮಿಶ್ರಣ ಸ್ಪ್ರೇ ಬಳಕೆ ಮಾಡಿದರೆ ಒಂದು ಹೆಕ್ಟರ್ಗೆ 2 ಕ್ವಿಂಟಾಲ್ ಬೆಳೆಯುವ ಭೂಮಿಯಲ್ಲಿ ನಾಲ್ಕು ಕ್ವಿಂಟಾಲ್ ಬೆಳೆಯಬಹುದು.

- ವೀರಣ್ಣ, ಸಹಾಯಕ ನಿರ್ದೇಶಕ, ಕೃಷಿ ಇಲಾಖೆ

share
ಮುಹಮ್ಮದ್ ರಫೀಕ್
ಮುಹಮ್ಮದ್ ರಫೀಕ್
Next Story
X