Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಂಗ್ರೆಸ್ ನಾಯಕಿಯ ಪತಿ ಬಳಿ ಸಿಕ್ಕಿದ...

ಕಾಂಗ್ರೆಸ್ ನಾಯಕಿಯ ಪತಿ ಬಳಿ ಸಿಕ್ಕಿದ ದುಡ್ಡಿನ ಸುತ್ತ ರಾಜಕೀಯ

► ಪಂಚ ರಾಜ್ಯ ಚುನಾವಣೆಗೂ ಐಟಿ ರೇಡ್ ಗೂ ಏನು ನಂಟು ? ► ರಾಜ್ಯ ಸರಕಾರದ ಮೇಲೆ ಮುಗಿಬಿದ್ದ ಬಿಜೆಪಿ, ಜೆಡಿಎಸ್

ಆರ್. ಜೀವಿಆರ್. ಜೀವಿ16 Oct 2023 4:39 PM IST
share

ಬೆಂಗಳೂರಿನಲ್ಲಿ ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್ ಮಾಲೀಕರು ಹಾಗೂ ಮಾಜಿ ಕಾರ್ಪೊರೇಟರ್ಗಳ ಮನೆಗಳ ಮೇಲೆ ಐಟಿ ದಾಳಿ ನಡೆದಿದೆ. ಈ ವೇಳೆ ಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಮತ್ತು ಪತಿ ಅಂಬಿಕಾಪತಿ ಸಂಬಂಧಿ ಪ್ರದೀಪ್ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾಗಿದೆ. ಸದ್ಯ ಇದು ರಾಜಕೀಯ ತಿರುವು ಪಡೆದುಕೊಂಡಿದೆ.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಆಡಳಿತಾರೂಢ ಕಾಂಗ್ರೆಸ್ ಮೇಲೆ ಮುಗಿಬೀಳಲು ಹೊಸ ಅಸ್ತ್ರ ಸಿಕ್ಕಂತಾಗಿದೆ. ಅಘೋಷಿತ ವಿಪಕ್ಷ ನಾಯಕ ಕುಮಾರಸ್ವಾಮಿಯವರೂ ಸಿದ್ದರಾಮಯ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಂಚ ರಾಜ್ಯ ಚುನಾವಣೆ ಘೋಷಣೆಯ ಬೆನ್ನಲ್ಲೇ ಕಮಿಷನ್ ಪ್ರಭಾವ ಜೋರಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ್ದಾರೆ. ಹಿಂದಿನಿಂದಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬವಾಗಿದ್ದು, ಈಗ ಬರವಿದ್ದಾಗಲೂ ಕಲೆಕ್ಷನ್ ಕೈ ಚಳಕ ಜೋರಾಗಿದೆ ಎಂದು ಅಣಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!! ಎಂದು ವ್ಯಂಗ್ಯವಾಡಿದ್ದಾರೆ. ‘ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್ ? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು?’ ಎಂದು ಪ್ರಶ್ನಿಸಿದ್ದಾರೆ.

‘23 ಬಾಕ್ಸ್ಗಳಲ್ಲಿ ತುಂಬಿಡಲಾಗಿದ್ದ ಈ ಇಡುಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್‍ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು ಎಂದು ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು?’ ಎಂದು ಆಕ್ಷೇಪಿಸಿದ್ದಾರೆ.

‘ಈಗ ಹೇಳಿ ಸಿದ್ದರಾಮಯ್ಯನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ‘ಕೈ' ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್!! ಕಾವೇರಿ ನೀರು ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆ ಲಕ್ಷ್ಮಿ, ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್‍ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.‌

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನಾಯಕಿ, ಮಾಜಿ ಕಾರ್ಪೋರೇಟೋರ್ ಅಶ್ವತ್ಥಮ್ಮ ಅವರ ಪತಿ ಅಂಬಿಕಾಪತಿಯ ಮಗಳ ಮನೆಯಲ್ಲಿ ಐಟಿ ಅಧಿಕಾರಿಗಳು ಸೀಜ್ ಮಾಡಿರುವುದು 42 ಕೋಟಿ ಹಣ! . ಈತ ಯಾರ "ಚಿರಂಜೀವಿ" ಯವರ ಪರವಾಗಿ ಹಣ ಸಂಗ್ರಹ ಮಾಡುತ್ತಿದ್ದ ಎಂದು ಗುತ್ತಿಗೆದಾರರ ಬಳಿ ಕೇಳಿದರೆ ನಿಜ ಹೊರಬರಬಹುದು. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನೇ ಸರ್ಕಾರದ ಪರವಾಗಿ ವಸೂಲಿಗೆ ಇಳಿದರೆ, ಗುತ್ತಿಗೆದಾರರನ್ನು ಕಾಪಾಡುವವರು ಯಾರು? ಈ ಹಣ ಯಾರದ್ದು ಎಂಬ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ! ಮಹದೇವಪ್ಪನ ದುಡ್ಡು, ಕಾಕಪಾಟಿಲನ ದುಡ್ಡು, ದಯಾನಂದನ ದುಡ್ಡು ಕಲೆಕ್ಷನ್‌ ಮಾಡಲಾಗಿದೆ. ಇದರಲ್ಲಿ ನಾಲ್ಕನೇ ಒಂದರಷ್ಟು ರಾಜಸ್ಥಾನಕ್ಕೆ, ನಾಲ್ಕನೇ ಒಂದರಷ್ಟು ಮಧ್ಯಪ್ರದೇಶಕ್ಕೆ, ನಾಲ್ಕನೇ ಒಂದರಷ್ಟು ತೆಲಂಗಾಣಕ್ಕೆ ಹಾಗೂ ನಾಲ್ಕನೇ ಒಂದರಷ್ಟು ಛತ್ತೀಸಘಡಕ್ಕೆ! ಅವರಿಗೆ ವಿಧಾನಸೌಧ, ಜನರಿಗೆ ಲಾಲಬಾಗ್! ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಟಿಎಂ ಆಗುತ್ತೆ ಎಂದು ಈ ಹಿಂದೆ ಅಮಿತ್ ಶಾ ಹೇಳಿದ್ದರು. ಇದೀಗ ಸಾಕ್ಷಿ ಸಮೇತ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಯಾವ ಕಮಿಷನ್ ಮೂಲಕ ಹಣ ಸಂಗ್ರಹಿಸಿದ್ದಾರೆ ಅಂತಾ ತನಿಖೆ ಆಗಲಿ. ಸಿಎಂ, ಡಿಸಿಎಂ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪಾತ್ರ ಏನು ಅಂತಾ ತನಿಖೆ ಆಗಬೇಕು. ಕೆಂಪಣ್ಣ ಕಾಂಗ್ರೆಸ್ ಪಕ್ಷದ ಏಜೆಂಟ್ ಅನ್ನೋದು ಪ್ರೂವ್ ಆಗುತ್ತಿದೆ. ಪತ್ತೆಯಾಗಿರುವ ದುಡ್ಡು ಪಂಚರಾಜ್ಯಗಳಿಗೆ ಎಲ್ಲೆಲ್ಲಿ ಹೋಗುತ್ತಿತ್ತೋ, ಈ ಬಗ್ಗೆ ತನಿಖೆಯಾದರೆ ಎಲ್ಲರೂ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದರು.

ಎಟಿಎಂ ಸರ್ಕಾರ ಅನ್ನೋದು ಈಗ ಸಾಕ್ಷಿ ಸಮೇತ ಗೊತ್ತಾಗಿದೆ ಎಂದು ಹೇಳಿದ ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ,

ಕೇವಲ ಸಣ್ಣ ಮೊತ್ತವಷ್ಟೇ ಸಿಕ್ಕಿದೆ, ಇನ್ನೂ ಬಹಳಷ್ಟು ಕಡೆ‌ ಇರುತ್ತದೆ. ಕಿರುಕುಳ ನೀಡಿ ಹೆದರಿಸಿ ಕಲೆಕ್ಷನ್ ಮಾಡಿರುವ ಈ ದುಡ್ಡು ಯಾರಿಗೆ ಸೇರಿದ್ದು ಅಂತಾ ಗುತ್ತಿಗೆದಾರರು ಹೇಳಬೇಕು ಎಂದರು. ಹಿಂಸೆ ಕೊಟ್ಟು ವಸೂಲಿ ಮಾಡಿದ್ದಾರೆಂದು ಗುತ್ತಿಗೆದಾರರು ಹೇಳಬೇಕು. ನಮ್ಮ ಸರ್ಕಾರದ ಮೇಲೆ ಆಧಾರವಿಲ್ಲದೆ ಆರೋಪ ಮಾಡಿದ್ದರು. ಅಂದು ಆಪಾದನೆ ಮಾಡಿದವರಲ್ಲಿ ಅಂಬಿಕಾಪತಿ ಒಬ್ಬ. ಯಾವುದಾದರೂ ಗುತ್ತಿಗೆದಾರರ ಹತ್ತಿರ ಕ್ಯಾಶ್ ಹೇಗೆ ಬರುತ್ತದೆ? ಇದು ಕಿಕ್ ಬ್ಯಾಕ್ ದುಡ್ಡು, ವಸೂಲಿ ದುಡ್ಡು, ಕಮಿಷನ್ ದುಡ್ಡು ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುತ್ತದೆ. ಈ ಮಾತನ್ನು ನಾವು ಹೇಳುತ್ತಲೇ ಬಂದಿದ್ದೆವು. ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ ಬಾಕಿ ಹಣವನ್ನು ಬಿಡುಗಡೆ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಈಗ ಗುತ್ತಿಗೆದಾರರನ್ನು ಕೈಗೊಂಬೆ ಮಾಡಿಕೊಂಡಿದೆ. ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕ ಕಲೆಕ್ಷನ್ ಕೇಂದ್ರವಾಗಿದೆ. ಐಟಿ ಅಧಿಕಾರಿಗಳ ದಾಳಿಯಿಂದ ಕಲೆಕ್ಷನ್ ಕೊಂಡಿಗಳು ಹೊರ ಬರುತ್ತಿದೆ. ಇದರ ಹಿಂದಿರುವ ಕೈಗಳ ಯಾರದ್ದು ಎಂದು ಜನರಿಗೆ ತಿಳಿಯಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಗೆಲ್ಲಿಸಲು ಗುತ್ತಿಗೆದಾರರ ಮೂಲಕ ಕಲೆಕ್ಷನ್‌ ಮಾಡಿಸಿ ಕರ್ನಾಟಕವನ್ನು ಲೂಟಿ ಮಾಡುತ್ತಿದೆ ನಾಡದ್ರೋಹಿ ಸಿದ್ದರಾಮಯ್ಯ ಅವರ ಸರ್ಕಾರ..! ಎಂದು ಬರೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಐಟಿ ದಾಳಿ ಬಗ್ಗೆ ನಮಗ್ಯಾಕೆ ಕೇಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಯಾವ ರಾಜ್ಯಗಳಿಗೂ ನಾವು ಹಣ ಕೊಡಲ್ಲ, ಅವರು ಕೇಳುವುದಿಲ್ಲ. ಹಣ ಹೋಗಿರುವುದು ಬಿಜೆಪಿ ಅವರು ನೋಡಿದ್ದಾರಾ? ಬಿಜೆಪಿಯವರ ಮಾಡಿದ ಎಲ್ಲಾ ಆರೋಪಗಳು ಆಧಾರ ರಹಿತ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ,

ರಾಜಕೀಯ ಇಲ್ಲದೆ ಐಟಿ ಅಧಿಕಾರಿಗಳು ಬರುವುದಿಲ್ಲ. ರಾಜಕೀಯ ನಡೆಯುತ್ತಾ ಇರುವುದು ನಮಗೆ ಗೊತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇರುವ ಕಡೆ ಐಟಿ ದಾಳಿ ನಡೆಯುವುದಿಲ್ಲ ಎಂದರು. ಐದು ರಾಜ್ಯ ಚುನಾವಣೆಗೆ ಕರ್ನಾಟಕ ಕಲೆಕ್ಷನ್ ಸೆಂಟರ್ ಎಂಬ ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಅವರ ಆರೋಪಕ್ಕೆ ತಿರುಗೇಟು ನೀಡಿದ ಅವರು, ಅವನ್ಯಾರೋ ರಸ್ತೆ ಬೀದಿಯಲ್ಲಿ ಮಾತಾಡೋವರಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು "ಅಂಬಿಕಾಪತಿ ಮನೆಯಲ್ಲಿ ಹಣ ಪತ್ತೆಯಾಗಿರುವ ವಿಚಾರ ಗೊತ್ತಾಯಿತು. ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯುತ್ತೇವೆ, ಪ್ರಧಾನಿಗೂ ಪತ್ರ ಬರೆಯುತ್ತೇವೆ. ಅಂಬಿಕಾಪತಿ ಬಹಳ ವರ್ಷಗಳಿಂದ ಕಂಟ್ರ್ಯಾಕ್ಟರ್ ಕೆಲಸ ಮಾಡುತ್ತಿಲ್ಲ. ಅಂಬಿಕಾಪತಿಯದ್ದು ಕೃಷಿ, ಕ್ರಷರ್ ಸೇರಿದಂತೆ ಅನೇಕ ವ್ಯಾಪಾರಗಳಿವೆ. ಅಂಬಿಕಾಪತಿ ಈಗ ಕಂಟ್ರಾಕ್ಟರ್ ಕೆಲಸವನ್ನೇ ನಿಲ್ಲಿಸಿಬಿಟ್ಟಿದ್ದಾರೆ ಎಂದಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ, ಐಟಿ ಅಧಿಕಾರಿಗಳ ದಾಳಿಗೂ, ರಾಜ್ಯ ಸರ್ಕಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರ ಬಂದ ಮೇಲೆ 500 ದಾಳಿ ಆಗಿದೆ. ಎಲ್ಲಾ ಪಕ್ಷಗಳ ನಾಯಕರ ಜೊತೆ ಗುತ್ತಿಗೆದಾರರು ಚೆನ್ನಾಗಿ ಇರುತ್ತಾರೆ. ಅದನ್ನು ನಮಗೆ ಕನೆಕ್ಟ್ ಮಾಡಲು ಆಗುತ್ತಾ? ಐಟಿ ದಾಳಿಯಾದ ತಕ್ಷಣ ಆ ಪಕ್ಷ ಈ ಪಕ್ಷ ಎಂದು ಹೇಳಲು ಆಗುತ್ತಾ? ಎಲ್ಲದಕ್ಕೂ ರಾಜಕೀಯ ಕಲ್ಪಿಸುವುದಕ್ಕೆ ಆಗಲ್ಲ. ಕೆಲವೊಂದು ಬಾರಿ ಸ್ವಾಭಾವಿಕವಾಗಿ ಐಟಿ ದಾಳಿ ನಡೆದಿರುತ್ತದೆ. ಕೆಲವೊಂದು ಆರೋಪ ಬಂದಾಗಲೂ ಐಟಿ ದಾಳಿ ಆಗುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ ಗ್ಯಾರಂಟಿ ಜಾರಿಯಲ್ಲಿ ಅಲ್ಲಲ್ಲಿ ಗೊಂದಲವಿದೆ. ಕೆಲವು ಕಡೆ ಗ್ಯಾರಂಟಿ ಪೇಮೆಂಟ್ ಬಂದಿಲ್ಲ ಎಂಬ ದೂರುಗಳಿವೆ. ಈ ನಡುವೆ ಗ್ಯಾರಂಟಿಗಳಿಂದಾಗಿ ಅಭಿವೃದ್ಧಿ ಕಾಮಗಾರಿಗಳು ನೆನೆಗುದಿಗೆ ಬಿದ್ದಿವೆ ಎಂದು ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅವರ ಕ್ಷೇತ್ರಗಳಿಗೆ ಸಾಕಷ್ಟು ಅನುದಾನ ಸಿಗುತ್ತಿಲ್ಲ ಎಂಬುದು ಅವರ ದೂರು. ಬಿಜೆಪಿಯಂತೂ ಗ್ಯಾರಂಟಿ ಇಂದು ನಾಳೆ ನಿಂತೇ ಹೋಗುತ್ತದೆ, ಇನ್ನೊಂದು ವರ್ಷದೊಳಗೆ ರಾಜ್ಯದಲ್ಲಿ ಮತ್ತೆ ವಿಧಾನ ಸಭಾ ಚುನಾವಣೆ ಮತ್ತೆ ನಡೆಯುತ್ತದೆ ಎಂದೇ ಪ್ರಚಾರ ಮಾಡುತ್ತಿದೆ.

ಈ ನಡುವೆ ಡಿಸಿಎಂ ಹಾಗು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿಜೆಪಿ, ಜೆಡಿಎಸ್ ಪಕ್ಷಗಳ ಶಾಸಕರು ಹಾಗು ಮುಖಂಡರಿಗೆ ಗಾಳ ಹಾಕಿದ್ದಾರೆ. ಎರಡು ಡಝನ್ ಗೂ ಹೆಚ್ಚು ನಾಯಕರು ಕೈ ಹಿಡಿಯಲಿದ್ದಾರೆ ಎಂದು ಸುದ್ದಿಯಾಗುತ್ತಿದೆ. ಅದೇ ಸಂದರ್ಭದಲ್ಲಿ ಐಟಿ ದಾಳಿಯಾಗಿದೆ. ನರೇಂದ್ರ ಮೋದಿ ಸರಕಾರದಲ್ಲಿ ಯಾವಾಗ, ಯಾರ ಮೇಲೆ ಐಟಿ, ಇಡಿ ರೇಡ್ ಆಗುತ್ತದೆ ಎಂಬುದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಪಂಚರಾಜ್ಯ ಚುನಾವಣೆ ಘೋಷಣೆಯಾಗಿದೆ. ಚುನಾವಣೆಗೆ ಪಕ್ಷಗಳು ತಮ್ಮ ಆಡಳಿತವಿರುವ ರಾಜ್ಯಗಳಿಂದ ಸಂಪನ್ಮೂಲದ ಸಹಕಾರ ನಿರೀಕ್ಷಿಸುತ್ತವೆ ಎಂಬುದು ಯಾರಿಗೂ ಗೊತ್ತಿರದ ಸಂಗತಿಯೇನೂ ಅಲ್ಲ. ಕಾಂಗ್ರೆಸ್ ಗೆ ಸಹಕಾರ ನೀಡಲು ದೇಶದ ಹೆಚ್ಚಿನ ರಾಜ್ಯಗಳಲ್ಲಿ ಅದರ ಸರಕಾರವಿಲ್ಲ. ಡಿ ಕೆ ಶಿವಕುಮಾರ್ ಅಧಿಕಾರ ಇಲ್ಲದಿರುವಾಗಲೇ ಪಕ್ಷದ ವರಿಷ್ಠರಿಗೆ ಕಷ್ಟಕಾಲದಲ್ಲಿ ನೆರವಾದವರು. ಈಗ ಪಕ್ಷ ಇಲ್ಲಿ ಅಧಿಕಾರದಲ್ಲಿದೆ. ಡಿಕೆಶಿ ಡಿಸಿಎಂ ಆಗಿದ್ದಾರೆ. ಸೂಕ್ತ ಸಂದರ್ಭದಲ್ಲಿ ರಾಜ್ಯದಲ್ಲಿ ಐಟಿ ರೇಡ್ ಆಗಿದೆ. ಇದರ ರಾಜಕೀಯ ಪರಿಣಾಮ ಏನೇನಾಗಲಿದೆ ಎಂದು ಕಾದು ನೋಡಬೇಕಾಗಿದೆ.

share
ಆರ್. ಜೀವಿ
ಆರ್. ಜೀವಿ
Next Story
X